Homeಮುಖಪುಟ"ವಾರದಲ್ಲಿ 90 ಗಂಟೆ ಕೆಲಸ ಮಾಡಿ" : ವ್ಯಾಪಕ ಟೀಕೆಗೆ ಗುರಿಯಾದ ಎಲ್‌ ಆ್ಯಂಡ್‌ ಟಿ...

“ವಾರದಲ್ಲಿ 90 ಗಂಟೆ ಕೆಲಸ ಮಾಡಿ” : ವ್ಯಾಪಕ ಟೀಕೆಗೆ ಗುರಿಯಾದ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥನ ಹೇಳಿಕೆ

- Advertisement -
- Advertisement -

“ಮನೆಯಲ್ಲಿ ಕುಳಿತು ಎಷ್ಟು ಹೊತ್ತು ಹೆಂಡತಿಯ ಮುಖ ನೋಡಿಕೊಂಡು ಇರುತ್ತೀರಿ. ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕು. ಶ್ರಮವಹಿಸಿ ದುಡಿಯಲು ಭಾನುವಾರದ ರಜೆಯನ್ನೂ ತ್ಯಜಿಸಬೇಕು” ಎಂದು ಎಲ್‌ ಆ್ಯಂಡ್‌ ಟಿ ಕಂಪನಿ ಮುಖ್ಯಸ್ಥ ಎಸ್‌.ಎನ್‌. ಸುಬ್ರಹ್ಮಣ್ಯನ್‌ ಅವರು ನೀಡಿರುವ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು, ಕೆಲ ಸಿನಿಮಾ ಕಲಾವಿದರು ಸೇರಿದಂತೆ ಸಾರ್ವಜನಿಕ ವಲಯದ ಜನರು ಉದ್ಯೋಗಿಗಳ ಮಾನಸಿಕ ಪರಿಸ್ಥಿತಿಯನ್ನು ಉಲ್ಲೇಖಿಸಿ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥನ ಹೇಳಿಕೆ ವಿರೋಧಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ರಜೆ ಕೊಡಬೇಕು ಎಂದು ಒತ್ತಾಯಿಸಿದ್ದ ತನ್ನ ಕಂಪನಿಯ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಎಸ್‌.ಎನ್‌. ಸುಬ್ರಹ್ಮಣ್ಯನ್‌, “ನಿಮ್ಮಿಂದ ಭಾನುವಾರ ಕೂಡ ಕೆಲಸ ಮಾಡಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ನನಗೆ ವಿಷಾದವಾಗುತ್ತಿದೆ. ನಾನು ಭಾನುವಾರವೂ ಕೆಲಸ ಮಾಡುತ್ತೇನೆ. ಅಂದು ಕೂಡ ನಿಮ್ಮಿಂದ ಕೆಲಸ ಮಾಡಿಸಲು ನನ್ನಿಂದ ಸಾಧ್ಯವಾದರೆ ನಾನು ಹೆಚ್ಚು ಸಂತೋಷ ಪಡುತ್ತೇನೆ” ಎಂದು ಹೇಳಿದ್ದಾರೆ.

“ನೀವು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ. ಎಷ್ಟು ಹೊತ್ತು ಹೆಂಡತಿಯ ಮುಖ ನೋಡುತ್ತೀರಿ. ಆಕೆ ಕೂಡ ಎಷ್ಟು ಹೊತ್ತು ನಿಮ್ಮ ಮುಖ ನೋಡಿಕೊಂಡು ಇರುತ್ತಾರೆ. ಹಾಗಾಗಿ, ಕಚೇರಿಗೆ ಬಂದು ಕೆಲಸ ಮಾಡಿ” ಎಂದಿದ್ದಾರೆ.

ಸುಬ್ರಹ್ಮಣ್ಯನ್‌ ಯಾವಾಗ ಈ ಮಾತುಗಳನ್ನು ಆಡಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿಲ್ಲ. ಆದರೆ, ಅವರ ಹೇಳಿಕೆಯ ವಿಡಿಯೋ ಭಾರೀ ವೈರಲ್ ಆಗಿ, ಟೀಕೆಗೆ ಗುರಿಯಾಗಿದೆ.

ಸುಬ್ರಹ್ಮಣ್ಯನ್‌ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಹಲವರು ಸುಬ್ರಹ್ಮಣ್ಯನ್‌ ಅವರಿಗೆ ಛೀಮಾರಿ ಹಾಕಿದ್ದಾರೆ.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕುರಿತು ಪ್ರತಿಕ್ರಿಯಿಸಿದ್ದು, “ಉನ್ನತ ಹುದ್ದೆಯಲ್ಲಿರುವವರು ಈ ರೀತಿಯ ಹೇಳಿಕೆ ನೀಡುತ್ತಿರುವುದು ‘ಆಘಾತಕಾರಿ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. #MentalHealthMatters ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

“ಸುಬ್ರಹ್ಮಣ್ಯನ್‌ ಅವರ ಹೇಳಿಕೆ ಗುಲಾಮಗಿರಿಯನ್ನು ಉತ್ತೇಜಿಸುವುದು ಮಾತ್ರವಲ್ಲದೆ, ಸ್ತ್ರೀ ದ್ವೇಷವನ್ನು ಹೊಂದಿದೆ. ಎಲ್‌ ಆ್ಯಂಡ್‌ ಟಿ ಕಂಪನಿ ಮಹಿಳೆಯರನ್ನು ನೇಮಿಸಿಕೊಳ್ಳುವುದಿಲ್ವಾ? ಸುಬ್ರಹ್ಮಣ್ಯನ್‌ ಅವರ  ಹೇಳಿಕೆ, ಹೆಂಡತಿ ಅಥವಾ ಸಂಗಾತಿಯನ್ನು ಅವಮಾನಿಸುವಂತಿದೆ. ಇದು ನಾಚಿಕೇಗೇಡಿನ ಸಂಗತಿ” ಎಂದು ಖ್ಯಾತೆ ಪತ್ರಕರ್ತೆ ನಿಧಿ ರಝ್ದಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಸ್ಥನ ಹೇಳಿಕೆ ಸಮರ್ಥಿಸಿದ ಎಲ್‌ ಆ್ಯಂಡ್‌ ಟಿ

ಉದ್ಯೋಗಿಗಳು ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕು ಎಂಬ ತಮ್ಮ ಮುಖ್ಯಸ್ಥನ ಹೇಳಿಕೆಯನ್ನು ಎಲ್‌ ಆ್ಯಂಡ್‌ ಟಿ ಕಂಪನಿ ಸಮರ್ಥಿಸಿಕೊಂಡಿದೆ. “ರಾಷ್ಟ್ರ ನಿರ್ಮಾಣದಲ್ಲಿನ ತನ್ನ ಬದ್ಧತೆಯನ್ನು ಸುಬ್ರಹ್ಮಣ್ಯನ್ ಅವರು ತನ್ನ ಹೇಳಿಕೆಗಳ ಮೂಲಕ ವ್ಯಕ್ತಪಡಿಸಿದ್ದಾರೆ. ಇದು ಅಸಾಧಾರಣ ಫಲಿತಾಂಶಗಳನ್ನು ಸಾಧಿಸುವ ಅವರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ. ಅಲ್ಲದೆ, ಭಾರತದ ಪ್ರಗತಿಯನ್ನು ಹೆಚ್ಚಿಸಲು ಸಾಮೂಹಿಕ ಸಮರ್ಪಣೆ ಮತ್ತು ಪ್ರಯತ್ನವನ್ನು ಸುಬ್ರಹ್ಮಣ್ಯನ್ ಕೋರಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದೆ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಉದ್ಯೋಗಿಗಳು ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಆದರೂ, ಅವರು ತನ್ನ ಹೇಳಿಕೆಯನ್ನು ಪುನರುಚ್ಚರಿಸಿ ಸಮರ್ಥಿಸಿಕೊಂಡಿದ್ದರು. ನಂತರ ಓಲಾ ಸಿಇಒ ಭವೀಷ್ ಅಗರ್ವಾಲ್ ಅವರು ನಾರಾಯಣ ಮೂರ್ತಿಯನ್ನು ಹೇಳಿಕೆಯನ್ನು ಬೆಂಬಲಿಸಿದ್ದರು. ಇದೀಗ ಎಲ್‌ ಆ್ಯಂಡ್‌ ಟಿ ಮುಖ್ಯಸ್ಥ 90 ಭಾನುವಾರವೂ ಸೇರಿದಂತೆ 90 ಗಂಟೆ ಕೆಲಸ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ : SC/ST Reservation |’ಕೆನೆಪದರ’ ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...