Homeಮುಖಪುಟಉಮರ್ ಖಾಲಿದ್ ವಿರುದ್ಧ ಯುಎಪಿಎ ಪ್ರಶ್ನಿಸಿದ ಹೈಕೋರ್ಟ್: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಎಐಎಂಐಎಂ

ಉಮರ್ ಖಾಲಿದ್ ವಿರುದ್ಧ ಯುಎಪಿಎ ಪ್ರಶ್ನಿಸಿದ ಹೈಕೋರ್ಟ್: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಎಐಎಂಐಎಂ

- Advertisement -
- Advertisement -

ಹೊಸದಿಲ್ಲಿ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಕ್ಕಾಗಿ ದೆಹಲಿ ಪೊಲೀಸರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಕಾಂಗ್ರೆಸ್ ಮತ್ತು ಎಐಎಂಐಎಂ ಸೇರಿದಂತೆ ರಾಜಕೀಯ ಪಕ್ಷಗಳು ಗುರುವಾರ ಪೊಲೀಸರು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ನೀತಿಗಳೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಕಾಂಗ್ರೆಸ್ ಹೇಳಿದರೆ, ಎಐಎಂಐಎಂ ಅವರ ಬಂಧನದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿ ಅದನ್ನು ‘ಕ್ರೂರ ಮತ್ತು ರಾಜಕೀಯ ಪ್ರೇರಿತ’ ಎಂದು ಕರೆದಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಪರಿಣಾಮವಾಗಿ 53ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದವು. ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಕಾರ್ಯಕರ್ತರು ಈ ಸಂಬಂದ ಪ್ರತಿಭಟಿಸಿದ್ದಕ್ಕಾಗಿ  ಹಲವಾರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ವಿಚಾರಣೆಯಲ್ಲಿ ವಿಳಂಬದ ಆಧಾರದ ಮೇಲೆ ಅವರು ಜಾಮೀನು ಕೋರಿದರೂ, ದೆಹಲಿ ಪೊಲೀಸರು ಇದನ್ನು ಪ್ರಶ್ನಿಸುತ್ತಿದ್ದಾರೆ.

ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇವರ ವಿರುದ್ಧ ಯುಎಪಿಎ ಹೇರುವ ಸಿಂಧುತ್ವವನ್ನು ಪ್ರಶ್ನಿಸಿತು. ಇವರುಗಳು ಪ್ರತಿಭಟನೆ ಆಯೋಜಿಸುವುದಕ್ಕಾಗಿ ಇವರುಗಳ ಮೇಲೆ ಯುಎಪಿಎ  ಹೇರುವುದು ಸಮರ್ಥಿಸುತ್ತದೆಯೇ ಎಂದು ಕೇಳಿತು.

ಅಧಿಕಾರದಲ್ಲಿರುವವರ ವಿರುದ್ಧದ ಭಿನ್ನಾಭಿಪ್ರಾಯವನ್ನು ದೇಶದ್ರೋಹವೆಂದು ನೋಡಲಾಗುವುದಿಲ್ಲ ಮತ್ತು ಪ್ರತಿಭಟನಾಕಾರರನ್ನು ‘ಭಯೋತ್ಪಾದಕರು’ ಎಂದು ಕರೆಯಲಾಗುವುದಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹೇಳಿದ್ದಾರೆ.

ಭಿನ್ನಾಭಿಪ್ರಾಯ ಮತ್ತು ದಂಗೆಯ ನಡುವೆ ಸ್ಪಷ್ಟವಾದ ವ್ಯತ್ಯಾಸವನ್ನು ಗುರುತಿಸುವ ಅಗತ್ಯವನ್ನು  ಮಾತನಾಡಿದ ಖೇರಾ ಅವರು, ಯಾರಾದರೂ ಸರ್ಕಾರಿ ನೀತಿಯ ವಿರುದ್ಧ ಪ್ರತಿಭಟಿಸುತ್ತಿದ್ದರೆ, ಅವರ ಜಾತಿ ಮತ್ತು ಧರ್ಮವನ್ನು ಅವಲಂಬಿಸಿ ನೀವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ. ದೇಶದ ಸಂವಿಧಾನವು ನಮಗೆ ಈ ಸ್ವಾತಂತ್ರ್ಯವನ್ನು ನೀಡಿದೆ ಎಂದಿದ್ದಾರೆ.

ಎಐಎಂಐಎಂ ನಾಯಕ ವಾರಿಸ್ ಪಠಾಣ್ ದೆಹಲಿ ಪೊಲೀಸರು ಮತ್ತು ಬಿಜೆಪಿ ನೇತೃತ್ವದ ಕೇಂದ್ರವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಕಾನೂನು ಪ್ರಕ್ರಿಯೆಯನ್ನು ‘ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ’ ತರಾಟೆಗೆ ತೆಗೆದುಕೊಂಡರು. “ಉಮರ್ ಖಾಲಿದ್ ಮತ್ತು ಇತರ ಅನೇಕರು ಇಂದು ಜೈಲಿನಲ್ಲಿದ್ದಾರೆ. ಯುಎಪಿಎ ಕಾನೂನನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಒಳಪಡಿಸುತ್ತಿಲ್ಲ. ಯಾವುದೋ ಒಬ್ಬ ದೊಡ್ಡ ಭಯೋತ್ಪಾದಕನ ಮೇಲೆ ಯುಎಪಿಎ ವಿಧಿಸಬೇಕು. ಸರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರಂತಹ ವಿದ್ಯಾರ್ಥಿಗಳ ವಿರುದ್ಧ ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯವನ್ನು ಬಳಸಿದ್ದಕ್ಕಾಗಿ ಇವರ ಮೇಲೆ ಯುಎಪಿಎ ಹೇರಿದರೆ ಅದರ ಅರ್ಥವೇನು? ಅವರು ಸರ್ಕಾರದ ತಪ್ಪು ನೀತಿಗಳ ವಿರುದ್ಧ ಪ್ರತಿಭಟಿಸಿದರು. ಸರ್ಕಾರಿ ನೀತಿಗಳ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ನೀವು ಯಾರ ಮೇಲಾದರೂ ಯುಎಪಿಎ ವಿಧಿಸುತ್ತೀರಾ” ಎಂದು ಅವರು ಕೇಳಿದರು.

ಇನ್ನೋರ್ವ ಕಾಂಗ್ರೆಸ್ ನಾಯಕ ಶಕ್ತಿಸಿನ್ಹ್ ಗೋಹಿಲ್ ಮಾತನಾಡಿ, ದೆಹಲಿ ಪೊಲೀಸರು ಮತ್ತು ಬಿಜೆಪಿ ಸರ್ಕಾರವನ್ನು ಟೀಕಿಸಲು ಉಮರ್ ಅವರು ಈ ಅವಕಾಶವನ್ನು ಬಳಸಿಕೊಂಡರು. ಬಿಜೆಪಿ ತನ್ನ ರಾಜಕೀಯವನ್ನು ಮುಂದುವರಿಸುವುದಕ್ಕಾಗಿ ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಂಡ ಇತಿಹಾಸವನ್ನು ಹೊಂದಿದೆ. ಸಮುದಾಯಗಳ ನಡುವೆ ಒಡಕು ಮೂಡಿಸಲು ಆಡಳಿತವನ್ನು ಬಳಸಿಕೊಳ್ಳುವಲ್ಲಿ ಅದು ಹಿಂಜರಿಯುವುದಿಲ್ಲ. ವಾತಾವರಣವನ್ನು ಹಾಳು ಮಾಡಿದ್ದಕ್ಕಾಗಿ ನ್ಯಾಯಾಲಯವು ದೆಹಲಿ ಪೊಲೀಸರು ಮತ್ತು ಅದರ ರಾಜಕೀಯ ನೇತಾರರನ್ನು ತರಾಟೆಗೆ ತೆಗೆದುಕೊಂಡಿರುವುದು ಒಳ್ಳೆಯದು ಎಂದು ಅವರು ಹೇಳಿದರು.

ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಮತ್ತು ಇತರರ ಮೇಲೆ 2020ರ ಫೆಬ್ರವರಿ 23 ಮತ್ತು 25ರ  ನಡುವೆ ಈಶಾನ್ಯ ದೆಹಲಿಯಲ್ಲಿ ಗಲಭೆ ಉಂಟುಮಾಡಲು ಪೂರ್ವ ಯೋಜಿತ ಪಿತೂರಿ ನಡೆಸಿದ ಆರೋಪವಿದೆ. ಅವರ ಮೇಲೆ ಯುಎಪಿಎ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದ್ದು, ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರಿಗೆ ಮೊಬೈಲ್ ಫೋನ್ ನಿಷೇಧಿಸಿದ ಗುಜರಾತ್ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...