Homeಮುಖಪುಟಉಮರ್ ಖಾಲಿದ್ ವಿರುದ್ಧ ಯುಎಪಿಎ ಪ್ರಶ್ನಿಸಿದ ಹೈಕೋರ್ಟ್: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಎಐಎಂಐಎಂ

ಉಮರ್ ಖಾಲಿದ್ ವಿರುದ್ಧ ಯುಎಪಿಎ ಪ್ರಶ್ನಿಸಿದ ಹೈಕೋರ್ಟ್: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಎಐಎಂಐಎಂ

- Advertisement -
- Advertisement -

ಹೊಸದಿಲ್ಲಿ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಕ್ಕಾಗಿ ದೆಹಲಿ ಪೊಲೀಸರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಕಾಂಗ್ರೆಸ್ ಮತ್ತು ಎಐಎಂಐಎಂ ಸೇರಿದಂತೆ ರಾಜಕೀಯ ಪಕ್ಷಗಳು ಗುರುವಾರ ಪೊಲೀಸರು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ನೀತಿಗಳೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಕಾಂಗ್ರೆಸ್ ಹೇಳಿದರೆ, ಎಐಎಂಐಎಂ ಅವರ ಬಂಧನದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿ ಅದನ್ನು ‘ಕ್ರೂರ ಮತ್ತು ರಾಜಕೀಯ ಪ್ರೇರಿತ’ ಎಂದು ಕರೆದಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಪರಿಣಾಮವಾಗಿ 53ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದವು. ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಕಾರ್ಯಕರ್ತರು ಈ ಸಂಬಂದ ಪ್ರತಿಭಟಿಸಿದ್ದಕ್ಕಾಗಿ  ಹಲವಾರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ವಿಚಾರಣೆಯಲ್ಲಿ ವಿಳಂಬದ ಆಧಾರದ ಮೇಲೆ ಅವರು ಜಾಮೀನು ಕೋರಿದರೂ, ದೆಹಲಿ ಪೊಲೀಸರು ಇದನ್ನು ಪ್ರಶ್ನಿಸುತ್ತಿದ್ದಾರೆ.

ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇವರ ವಿರುದ್ಧ ಯುಎಪಿಎ ಹೇರುವ ಸಿಂಧುತ್ವವನ್ನು ಪ್ರಶ್ನಿಸಿತು. ಇವರುಗಳು ಪ್ರತಿಭಟನೆ ಆಯೋಜಿಸುವುದಕ್ಕಾಗಿ ಇವರುಗಳ ಮೇಲೆ ಯುಎಪಿಎ  ಹೇರುವುದು ಸಮರ್ಥಿಸುತ್ತದೆಯೇ ಎಂದು ಕೇಳಿತು.

ಅಧಿಕಾರದಲ್ಲಿರುವವರ ವಿರುದ್ಧದ ಭಿನ್ನಾಭಿಪ್ರಾಯವನ್ನು ದೇಶದ್ರೋಹವೆಂದು ನೋಡಲಾಗುವುದಿಲ್ಲ ಮತ್ತು ಪ್ರತಿಭಟನಾಕಾರರನ್ನು ‘ಭಯೋತ್ಪಾದಕರು’ ಎಂದು ಕರೆಯಲಾಗುವುದಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹೇಳಿದ್ದಾರೆ.

ಭಿನ್ನಾಭಿಪ್ರಾಯ ಮತ್ತು ದಂಗೆಯ ನಡುವೆ ಸ್ಪಷ್ಟವಾದ ವ್ಯತ್ಯಾಸವನ್ನು ಗುರುತಿಸುವ ಅಗತ್ಯವನ್ನು  ಮಾತನಾಡಿದ ಖೇರಾ ಅವರು, ಯಾರಾದರೂ ಸರ್ಕಾರಿ ನೀತಿಯ ವಿರುದ್ಧ ಪ್ರತಿಭಟಿಸುತ್ತಿದ್ದರೆ, ಅವರ ಜಾತಿ ಮತ್ತು ಧರ್ಮವನ್ನು ಅವಲಂಬಿಸಿ ನೀವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ. ದೇಶದ ಸಂವಿಧಾನವು ನಮಗೆ ಈ ಸ್ವಾತಂತ್ರ್ಯವನ್ನು ನೀಡಿದೆ ಎಂದಿದ್ದಾರೆ.

ಎಐಎಂಐಎಂ ನಾಯಕ ವಾರಿಸ್ ಪಠಾಣ್ ದೆಹಲಿ ಪೊಲೀಸರು ಮತ್ತು ಬಿಜೆಪಿ ನೇತೃತ್ವದ ಕೇಂದ್ರವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಕಾನೂನು ಪ್ರಕ್ರಿಯೆಯನ್ನು ‘ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ’ ತರಾಟೆಗೆ ತೆಗೆದುಕೊಂಡರು. “ಉಮರ್ ಖಾಲಿದ್ ಮತ್ತು ಇತರ ಅನೇಕರು ಇಂದು ಜೈಲಿನಲ್ಲಿದ್ದಾರೆ. ಯುಎಪಿಎ ಕಾನೂನನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಒಳಪಡಿಸುತ್ತಿಲ್ಲ. ಯಾವುದೋ ಒಬ್ಬ ದೊಡ್ಡ ಭಯೋತ್ಪಾದಕನ ಮೇಲೆ ಯುಎಪಿಎ ವಿಧಿಸಬೇಕು. ಸರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರಂತಹ ವಿದ್ಯಾರ್ಥಿಗಳ ವಿರುದ್ಧ ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯವನ್ನು ಬಳಸಿದ್ದಕ್ಕಾಗಿ ಇವರ ಮೇಲೆ ಯುಎಪಿಎ ಹೇರಿದರೆ ಅದರ ಅರ್ಥವೇನು? ಅವರು ಸರ್ಕಾರದ ತಪ್ಪು ನೀತಿಗಳ ವಿರುದ್ಧ ಪ್ರತಿಭಟಿಸಿದರು. ಸರ್ಕಾರಿ ನೀತಿಗಳ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ನೀವು ಯಾರ ಮೇಲಾದರೂ ಯುಎಪಿಎ ವಿಧಿಸುತ್ತೀರಾ” ಎಂದು ಅವರು ಕೇಳಿದರು.

ಇನ್ನೋರ್ವ ಕಾಂಗ್ರೆಸ್ ನಾಯಕ ಶಕ್ತಿಸಿನ್ಹ್ ಗೋಹಿಲ್ ಮಾತನಾಡಿ, ದೆಹಲಿ ಪೊಲೀಸರು ಮತ್ತು ಬಿಜೆಪಿ ಸರ್ಕಾರವನ್ನು ಟೀಕಿಸಲು ಉಮರ್ ಅವರು ಈ ಅವಕಾಶವನ್ನು ಬಳಸಿಕೊಂಡರು. ಬಿಜೆಪಿ ತನ್ನ ರಾಜಕೀಯವನ್ನು ಮುಂದುವರಿಸುವುದಕ್ಕಾಗಿ ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಂಡ ಇತಿಹಾಸವನ್ನು ಹೊಂದಿದೆ. ಸಮುದಾಯಗಳ ನಡುವೆ ಒಡಕು ಮೂಡಿಸಲು ಆಡಳಿತವನ್ನು ಬಳಸಿಕೊಳ್ಳುವಲ್ಲಿ ಅದು ಹಿಂಜರಿಯುವುದಿಲ್ಲ. ವಾತಾವರಣವನ್ನು ಹಾಳು ಮಾಡಿದ್ದಕ್ಕಾಗಿ ನ್ಯಾಯಾಲಯವು ದೆಹಲಿ ಪೊಲೀಸರು ಮತ್ತು ಅದರ ರಾಜಕೀಯ ನೇತಾರರನ್ನು ತರಾಟೆಗೆ ತೆಗೆದುಕೊಂಡಿರುವುದು ಒಳ್ಳೆಯದು ಎಂದು ಅವರು ಹೇಳಿದರು.

ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಮತ್ತು ಇತರರ ಮೇಲೆ 2020ರ ಫೆಬ್ರವರಿ 23 ಮತ್ತು 25ರ  ನಡುವೆ ಈಶಾನ್ಯ ದೆಹಲಿಯಲ್ಲಿ ಗಲಭೆ ಉಂಟುಮಾಡಲು ಪೂರ್ವ ಯೋಜಿತ ಪಿತೂರಿ ನಡೆಸಿದ ಆರೋಪವಿದೆ. ಅವರ ಮೇಲೆ ಯುಎಪಿಎ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದ್ದು, ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರಿಗೆ ಮೊಬೈಲ್ ಫೋನ್ ನಿಷೇಧಿಸಿದ ಗುಜರಾತ್ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...