Homeಕರ್ನಾಟಕಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

ಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

- Advertisement -
- Advertisement -

• ಶೀಘ್ರದಲ್ಲೇ ಶಾಸಕರ ಸಭೆ ನಡೆಸಿ ಅರ್ಹರಿಗೆ ಸಾಗುವಳಿ ಚೀಟಿ
• ಜನವರಿ ತಿಂಗಳಲ್ಲಿ ಕನಿಷ್ಟ 5,000 ಜನರಿಗೆ ಸಾಗುವಳಿ ಚೀಟಿ
• ನಮೂನೆ 1-5 ಪೋಡಿ ದುರಸ್ಥಿ ಬೆನ್ನಿಗೆ 6-10 ಸರ್ವೇಗೆ ಒತ್ತು
• ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು

ಬೆಂಗಳೂರು ಜನವರಿ 10: ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು.

ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, “ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೆ ಅವರಿಗೆ ಸಂಬಂಧಿಸಿದ ಅರ್ಹ ಕುಟುಂಬಸ್ಥರಿಗೆ ಜಮೀನು ಮಂಜೂರುಗೊಳಿಸಬೇಕು” ಎಂದು ತಿಳಿಸಿದರು.

“ಅನುಕೂಲಸ್ಥರಿಗೆ ಎಲ್ಲಾ ಮಾಹಿತಿ ಇರುತ್ತದೆ. ತಮಗೆ ಬೇಕಾದ ಸರ್ಕಾರಿ ಸವಲತ್ತನ್ನು ತಾವಾಗಿಯೇ ಪಡೆದುಕೊಳ್ಳುತ್ತಾರೆ. ಆದರೆ, ಬಡವರಿಗೆ, ಸಮಾಜದ ಕಟ್ಟಕಡೆಯ ಸ್ತರದಲ್ಲಿ ಬದುಕುತ್ತಿರುವವರಿಗೆ ಮಾಹಿತಿ ಕೊರತೆ ಇರುತ್ತದೆ. ಇಂತವರಿಗೆ ಅಧಿಕಾರಿಗಳೇ ಮಾಹಿತಿ ನೀಡಿ ಸರ್ಕಾರಿ ಸವಲತ್ತುಗಳನ್ನು ತಲುಪಿಸಬೇಕು. ಬಗರ್‌ ಹುಕುಂ ಅರ್ಜಿ ಅರ್ಹವಾಗಿದ್ದಲ್ಲಿ ಅಧಿಕಾರಿಗಳೇ ಜವಾಬ್ದಾರಿ ವಹಿಸಿಕೊಂಡು ಜಮೀನು ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ಅಧಿಕಾರಿಗಳನ್ನು ಪ್ರಶಂಸಿಸಿದ ಅವರು, “ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು.

ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ:

ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ಕಳೆದ ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲಾಯಿತು. ಆದರೆ, ಹಲವಾರು ತಾಲೂಕುಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಮುಗಿದಿದ್ದರೂ ಸಂಬಂಧಪಟ್ಟ ಫೈಲುಗಳನ್ನು 6-10 ನಮೂನೆ ಸರ್ವೇ ಕೆಲಸಕ್ಕಾಗಿ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಕಳುಹಿಸಲು ತಹಶೀಲ್ದಾರರುಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

“ಬಳ್ಳಾರಿ ತಾಲೂಕಿನಲ್ಲಿ ಈವರೆಗೆ 397 ಹಾಗೂ ಬೆಳಗಾವಿಯಲ್ಲಿ 147 ಪ್ರಕರಣಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿದಿದೆ. ಆದರೆ, ಯಾವ ಪ್ರಕರಣವನ್ನು ತಹಶೀಲ್ದಾರರು ಮುಂದಿನ ಹಂತದ ಕೆಲಸಕ್ಕಾಗಿ ಎಡಿಎಲ್‌ಆರ್‌ಗಳಿಗೆ ಕಳುಹಿಸಿಲ್ಲ. ಇದೇ ರೀತಿ ಚಿಕ್ಕೋಡಿ, ಅಥಣಿ, ಔರಾದ್‌, ಬೀದರ್‌ ಚಿತ್ರದುರ್ಗ, ಚಾಮರಾಜನಗರ, ಗುಂಡ್ಲುಪೇಡೆ, ಹುಮ್ನಾಬಾದ್‌, ಚಳ್ಳಕೆರೆ ಹೊಳಲ್ಕೆರೆ ಸೇರಿದಂತೆ ಹಲವಾರು ತಾಲೂಕುಗಳಲ್ಲಿ ದುರಸ್ಥಿ ಕೆಲಸ ಮುಗಿದಿದ್ದರೂ ಎಡಿಎಲ್‌ಆರ್‌ ಗಳಿಗೆ ಕಳುಹಿಸಿರುವ ಫೈಲುಗಳ ಸಂಖ್ಯೆ ಶೂನ್ಯ. ಜನರೇನು ನಿಮ್ಮ ಬಳಿ ಬಂದು ಸಲಾಂ ಹೊಡೆಯಬೇಕು ಎಂದು ನೀವು ಹೀಗೆ ಕಾಯಿಸುತ್ತಿದ್ದೀರಾ?” ಎಂದು ತಹಶೀಲ್ದಾರರ ವಿರುದ್ಧ ಅವರು ಆಕ್ರೋಶ ಹೊರಹಾಕಿದರು.

“ತಹಶೀಲ್ದಾರರು 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿಸಿ ಎಡಿಎಲ್‌ಆರ್‌ ಗೆ ಕಳುಹಿಸಿದರೆ ಮಾತ್ರ ಸರ್ವೇ ಕೆಲಸ ಮುಗಿಸಿ ಜನರಿಗೆ ಸೂಕ್ತ ದಾಖಲೆ ನೀಡುವುದು ಸಾಧ್ಯ. ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಚೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ. ಈಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದರೂ ಸಹ ಅಧಿಕಾರಿಗಳು ಹೀಗೆ ಮಂದಗತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

ಕೋರ್ಟ್‌ ಕೇಸ್‌ ಮುಗಿಸಿದವರ ವಿರುದ್ಧ ಅಸಮಾಧಾನ

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ವರ್ಷಗಳಿಗಿಂತ ಹೆಚ್ಚುಕಾಲ ಬಾಕಿ ಉಳಿದಿರುವ ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡಲು ಸಮಸ್ಯೆ ಏನು ಎಂದು ತಹಶೀಲ್ದಾರರ ವಿರುದ್ಧ ಸಚಿವರು ಕಿಡಿಕಾರಿದರು.

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 90 ದಿನಗಳಿಗಿಂತ ಹೆಚ್ಚು ಕಾಲ ಯಾವುದೇ ತಕರಾರು ಅರ್ಜಿಗಳನ್ನು ಉಳಿಸಿಕೊಳ್ಳುವಂತಿಲ್ಲ. ಆದರೆ, ಕಳೆದ ವರ್ಷ 10,750ಕ್ಕೂ ಅಧಿಕ ಪ್ರಕರಣಗಳನ್ನು ಬಾಕಿ ಉಳಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಅಭಿಯಾನ ಮಾದರಿಯಲ್ಲಿ 10,000ಕ್ಕೂ ಅಧಿಕ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಆದರೆ, ಉಳಿದ ಪ್ರಕರಣಗಳ ವಿಲೇಗೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಕೆಲವರು ಮಾಡುತ್ತಿರುವ ಕೆಲಸದಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು” ಎಂದು ಅವರು ಅಭಿಪ್ರಾಯಪಟ್ಟರು.

ಮುಂದುವರೆದು, “ರಾಯಭಾಗ 9, ಹುಕ್ಕೇರಿ 20, ರಾಮದುರ್ಗ 6, ಬೀದರ್ 6, ಬಳ್ಳಾರಿ 4, ಸವದತ್ತಿ 4 ಹೊಳಲ್ಕೆರೆ 9, ಕಾಗವಾಡ 5, ಚನ್ನಗಿರಿ 5, ಕಡೂರು 8, ಹೊಸಕೋಟೆ 12, ಮಂಡ್ಯ 11, ಮಾಗಡಿ 18, ಕನಕಪುರ 14, ಹಾರೋಹಳ್ಳಿ 20, ರಾಮದುರ್ಗ 10, ಬೆಂಗಳೂರು ಪಶ್ಚಿಮ 10, ನೆಲಮಂಗಲ 8 ಸೇರಿದಂತೆ 20 ತಾಲೂಕುಗಳಲ್ಲಿ ವರ್ಷಕ್ಕಿಂತ ಅಧಿಕ ಸಮಯದ ಅಲ್ಪ ಪ್ರಮಾಣದ ಪ್ರಕರಣಗಳು ಬಕಿ ಉಳಿದಿವೆ. ಅಧಿಕಾರಿಗಳು ಶೀಘ್ರದಲ್ಲಿ ಈ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಜನರಿಗೆ ನ್ಯಾಯ ಕಲ್ಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್‌ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌ ಹಾಗೂ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್‌ ಹಾಗೂ ಇತರರು ಉಪಸ್ಥಿತರಿದ್ದರು.

ಮುಖ್ಯವಾಹಿನಿಗೆ ಬಂದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...