Homeಮುಖಪುಟಪ್ರಗತಿಪರ ಚಿಂತನೆಗಳ ಅಚಲ ಬದ್ಧತೆ ಅಳವಡಿಸಿಕೊಳ್ಳುವಂತೆ ಕಾರ್ಯಕರ್ತರಿಗೆ ಶರದ್ ಪವಾರ್ ಕರೆ

ಪ್ರಗತಿಪರ ಚಿಂತನೆಗಳ ಅಚಲ ಬದ್ಧತೆ ಅಳವಡಿಸಿಕೊಳ್ಳುವಂತೆ ಕಾರ್ಯಕರ್ತರಿಗೆ ಶರದ್ ಪವಾರ್ ಕರೆ

- Advertisement -
- Advertisement -

ಆರ್‌ಎಸ್‌ಎಸ್‌ನ ಸೈದ್ದಾಂತಿಕ ಸಮರ್ಪಣೆಯನ್ನು ಶ್ಲಾಘಿಸಿರುವ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಸಾಮಾಜಿಕ ಸುಧಾರಕರಾದ ಶಾಹು ಮಹಾರಾಜ್, ಮಹಾತ್ಮ ಫುಲೆ, ಬಿಆರ್ ಅಂಬೇಡ್ಕರ್ ಮತ್ತು ರಾಜಕೀಯ ದಿಗ್ಗಜ ಯಶ್ವಂತರಾವ್ ಚವಾಣ್ ಅವರ ಪ್ರಗತಿಪರ ಚಿಂತನೆಗಳ ಅಚಲ ಬದ್ಧತೆಯೊಂದಿಗೆ ನಾವೂ ಕೂಡ ಕಾರ್ಯಕರ್ತರ ನೆಲೆ ರಚಿಸಬೇಕು ಎಂದು ತಮ್ಮ ಪಕ್ಷದ ಮುಖಂಡರನ್ನು ಗುರುವಾರ ಒತ್ತಾಯಿಸಿದರು.

ದಕ್ಷಿಣ ಮುಂಬೈನಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಕೇಂದ್ರ ಸಚಿವರು, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಿಂದುತ್ವ ಸಂಘಟನೆಯ ಸಿದ್ಧಾಂತಕ್ಕೆ ಅಚಲ ನಿಷ್ಠೆಯನ್ನು ತೋರಿಸುವ, ಯಾವುದೇ ಬೆಲೆ ತೆತ್ತರೂ ಅವರ ಮಾರ್ಗದಿಂದ ವಿಮುಖರಾಗದ ಕಾರ್ಯಕರ್ತರನ್ನು ಹೊಂದಿದೆ ಎಂದು ಹೇಳಿದರು.

“ನಮಗೂ ಛತ್ರಪತಿ ಶಾಹು ಮಹಾರಾಜ್, ಮಹಾತ್ಮ ಫುಲೆ, ಬಿಆರ್ ಅಂಬೇಡ್ಕರ್ ಮತ್ತು ಯಶ್ವಂತರಾವ್ ಚವಾಣ್ ಅವರ ಸಿದ್ಧಾಂತಕ್ಕೆ ಬದ್ಧವಾಗಿರುವ ಅಂತಹ ಕೇಡರ್ ನೆಲೆ ಇರಬೇಕು” ಎಂದು ಪವಾರ್ ಹೇಳಿದರು.

ಮಹಾರಾಷ್ಟ್ರದಲ್ಲಿ ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಅನುಭವಿಸಿದ ತೀವ್ರ ಸೋಲಿನ ಬಗ್ಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯ ಯಶಸ್ಸಿನ ನಂತರ ನಾವು ಸಂತೃಪ್ತರಾಗಿದ್ದೇವೆ. ಆದರೆ, ಆಡಳಿತಾರೂಢ ಮೈತ್ರಿಕೂಟ (ಬಿಜೆಪಿ ನೇತೃತ್ವದ ಮಹಾಯುತಿ) ಸಂಸತ್ತಿನ ಚುನಾವಣೆಯಲ್ಲಿ ಅದರ ಹಿನ್ನಡೆಗಳನ್ನು ತಡೆಯಲು ತಕ್ಷಣದ ಕ್ರಮಗಳನ್ನು ತೆಗೆದುಕೊಂಡಿತು” ಎಂದು ಹೇಳಿದರು.

ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಮಹಾರಾಷ್ಟ್ರದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ಪಕ್ಷವು ಉತ್ತಮ ಪ್ರದರ್ಶನ ನೀಡಿತು. ಅದು ಸ್ಪರ್ಧಿಸಿದ 10 ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಗೆದ್ದಿತು. ಆದರೆ, ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಪಕ್ಷವು ಅಭ್ಯರ್ಥಿಗಳನ್ನು ನಿಲ್ಲಿಸಿದ ಸುಮಾರು 90 ಸ್ಥಾನಗಳಲ್ಲಿ ಕೇವಲ 10 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

“ಒಬಿಸಿಗಳಿಗೆ (ಪ್ರಮುಖ ಮತಬ್ಯಾಂಕ್) ಅವರ ಉನ್ನತಿಗಾಗಿ ನಾವು ಏನು ಮಾಡಿದ್ದೇವೆ ಎಂಬುದನ್ನು ತಿಳಿಸುವಲ್ಲಿ ನಾವು ವಿಫಲರಾಗಿದ್ದೇವೆ” ಎಂದು ಮಾಜಿ ಸಿಎಂ ಗಮನಿಸಿದರು.

ಮರಾಠಾ ಕೋಟಾ ಚಳವಳಿಯ ಕೇಂದ್ರಬಿಂದುವಾದ ಮರಾಠವಾಡದಲ್ಲಿ ಜಾತಿ ವಿಭಜನೆಯನ್ನು ಕೊನೆಗೊಳಿಸಲು ಸಾಮಾಜಿಕ ಎಂಜಿನಿಯರಿಂಗ್ ಅಗತ್ಯವನ್ನು ಅವರು ಒತ್ತಿ ಹೇಳಿದರು. ವಿಶೇಷವಾಗಿ, ಪರ್ಭಾನಿ ಜಿಲ್ಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿ ದಲಿತ ವ್ಯಕ್ತಿಯ ಸಾವು ಮತ್ತು ಬೀಡ್ ಜಿಲ್ಲೆಯಲ್ಲಿ ಗ್ರಾಮದ ಸರಪಂಚ್‌ನ ಕ್ರೂರ ಹತ್ಯೆಯಯಾದ ಎರಡೂ ಜಿಲ್ಲೆಗಳು ಮಧ್ಯ ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿವೆ.

“ಮರಾಠವಾಡ ವಿಶ್ವವಿದ್ಯಾಲಯದ ಮರುನಾಮಕರಣ ವಿವಾದದ ಸಮಯದಲ್ಲಿಯೂ ಸಹ ಅಂತಹ ಪರಿಸ್ಥಿತಿ ಇತ್ತು. ಆದರೆ, ನಾನು ವಿಶ್ವವಿದ್ಯಾಲಯಕ್ಕೆ ಹೋಗಿ ಸಂಬಂಧಿಸಿದವರೊಂದಿಗೆ ಸಂವಹನ ನಡೆಸಿದೆ” ಎಂದು ಆಗ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದ ಪವಾರ್ ನೆನಪಿಸಿಕೊಂಡರು.

ಜನರೊಂದಿಗೆ ತೊಡಗಿಸಿಕೊಳ್ಳಲು ಮತ್ತು ಸಾಮಾಜಿಕ ಎಂಜಿನಿಯರಿಂಗ್ ತಂತ್ರಕ್ಕೆ ಈಗ ಇದೇ ರೀತಿಯ ಕ್ರಮಗಳು ಬೇಕಾಗಿವೆ. ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಪಕ್ಷವು ಶೇಕಡಾ 50 ರಷ್ಟು ಟಿಕೆಟ್‌ಗಳನ್ನು ಹೊಸ ಮುಖಗಳಿಗೆ ಹಂಚಲಿದೆ ಎಂದು ಪವಾರ್ ಘೋಷಿಸಿದರು.

ಇದನ್ನೂ ಓದಿ; ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ: ಎರಡು ಮಸೂದೆಗಳನ್ನು ಮಂಡಿಸಿದ ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...