Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಬುಧವಾರ (ಜ.8) ಬೆಂಗಳೂರಿನ ನ್ಯಾಯಾಲಯ ಜಾಮೀನು ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.

ಬೆಂಗಳೂರಿನ ಪ್ರಧಾನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಮುರಳೀಧರ ಪೈ ಬಿ ಅವರು ಆರೋಪಿ ಶರದ್ ಬಾಹು ಸಾಹೇಬ್ ಕಲಾಸ್ಕರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಸೆಪ್ಟೆಂಬರ್ 2018ರಿಂದ ಈತ ಬಂಧನದಲ್ಲಿದ್ದು, ವಿಚಾರಣೆ ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲ ಎಂಬುವುದನ್ನು ಗಮನಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಕಲಾಸ್ಕರ್‌ಗೆ ನ್ಯಾಯಾಲಯ ಜಾಮೀನು ನೀಡಿದ ಹಿನ್ನೆಲೆ, ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ 17 ಆರೋಪಿಗಳು ಜಾಮೀನು ಪಡೆದಂತಾಗಿದೆ. ಈ ಪ್ರಕರಣದಲ್ಲಿ ಒಟ್ಟು 18 ಆರೋಪಿಗಳನ್ನು ಗುರುತಿಸಲಾಗಿದ್ದು, 17 ಮಂದಿಯನ್ನು ಬಂಧಿಸಲಾಗಿತ್ತು. ಇನ್ನೋರ್ವ ಆರೋಪಿ ವಿಕಾಸ್ ಪಾಟೀಲ್ ಎಂಬಾತ ತಲೆಮರೆಸಿಕೊಂಡಿದ್ದು, ಇನ್ನೂ ಬಂಧನವಾಗಿಲ್ಲ.

ಆರೋಪಿ ಕಲಾಸ್ಕರ್ ತಾನು ನಿರಪರಾಧಿ, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡು ಜಾಮೀನು ಕೋರಿದ್ದರು. ಪ್ರಕರಣದಲ್ಲಿ ತನ್ನ ಸಹ ಆರೋಪಿಗಳಲ್ಲಿ ಹೆಚ್ಚಿನವರಿಗೆ ಈಗಾಗಲೇ ಜಾಮೀನು ನೀಡಲಾಗಿದೆ ಎಂದು ಹೇಳಿದ್ದರು. ಸಮಾನತೆಯ ಆಧಾರದ ಮೇಲೆ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಕಲಾಸ್ಕರ್‌ ಜಾಮೀನು ಅರ್ಜಿಗೆ ಪ್ರಾಸಿಕ್ಯೂಷನ್ ವಿರೋಧ ವ್ಯಕ್ತಪಡಿಸಿತ್ತು. ಈತ ಪುನರಾವರ್ತಿತ ಅಪರಾಧಿಯಾಗಿದ್ದು, ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಯನ್ನು ಎದುರಿಸಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾದರೆ, ಇನ್ನೊಂದು ಅಪರಾಧ ಮಾಡುವ ಸಾಧ್ಯತೆಯಿದೆ ಎಂದು ವಾದಿಸಿತ್ತು.

ಆದಾಗ್ಯೂ, ನ್ಯಾಯಾಲಯವು ಕಲಾಸ್ಕರ್‌ ಅವರಿಗೆ ಸಮಾನತೆಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹತೆ ಇದೆ ಎಂದು ತೀರ್ಪು ನೀಡಿದೆ.

ಸಂವಿಧಾನದ ವಿಧಿ 21ರ ಅಡಿ ಸ್ವತಂತ್ರ ಬದುಕು ಮೂಲಭೂತ ಹಕ್ಕು. ಪ್ರಕರಣದ ವಿಚಾರಣೆ ಬಾಕಿ ಇರುವಾಗ ಮತ್ತು ಅದು ಶೀಘ್ರ ಮುಕ್ತಾಯಗೊಳ್ಳುವ ಸಾಧ್ಯತೆ ಇಲ್ಲದಿರುವಾಗ ಆರೋಪಿಯನ್ನು ಬಂಧನದಲ್ಲಿಟ್ಟು ಅವರ ವೈಯಕ್ತಿಕ ಬದುಕಿನ ಹಕ್ಕು ಕಸಿದುಕೊಳ್ಳಲು ಸಾಧ್ಯವಿಲ್ಲ. ಜಾಮೀನಿನ ಅನಗತ್ಯ ವಿಳಂಬವು ಆರೋಪಿಯ ಬದುಕುವ ಹಕ್ಕನ್ನು ಮೊಟಕುಗೊಳಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷ ಜುಲೈನಲ್ಲಿ ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ಗೌರಿ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದಾಗಿ, ಒಂದು ತಿಂಗಳ ನಂತರ, ಪ್ರಕರಣದ ಇನ್ನೂ ನಾಲ್ವರು ಆರೋಪಿಗಳಿಗೆ ಮಂಜೂರು ಮಾಡಿತ್ತು. ಈ ಎಲ್ಲಾ ಆರೋಪಿಗಳು ಸಮಾನತೆಯ ಆಧಾರದ ಮೇಲೆ ಜಾಮೀನು ಕೋರಿದ್ದರು. ವಿಚಾರಣೆಯಲ್ಲಿ ವಿಳಂಬದ ಕಾರಣ ನೀಡಿ ಡಿಸೆಂಬರ್ 2023ರಲ್ಲಿ ಹೈಕೋರ್ಟ್ ಪ್ರಮುಖ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು.

ಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...