Homeಮುಖಪುಟರಫೇಲ್‌ ಹಗರಣ : ನಾಳೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

ರಫೇಲ್‌ ಹಗರಣ : ನಾಳೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು

- Advertisement -
- Advertisement -

ಬಹುದಿನಗಳಿಂದ ಯುಪಿಎ ಮತ್ತು ಎನ್‌ಡಿಎ ನಾಯಕರ ವಾಕ್ಸಮರಕ್ಕೆ ಮತ್ತು ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ರಫೇಲ್‌ ಯುದ್ಧ ವಿಮಾನ ಹಗರಣದ ತೀರ್ಪನ್ನು ನಾಳೆ ( ನವೆಂಬರ್‌ 14) ಸುಪ್ರೀಂಕೋರ್ಟ್‌ ಪ್ರಕಟಿಸಲಿದೆ.

ರಫೇಲ್‌ ಹಗರಣದಲ್ಲಿ ಕೇಂದ್ರ ಸರ್ಕಾರಕ್ಕೆ ಕ್ಲೀನ್‌ ಚಿಟ್‌ ನೀಡಿರುವ ಬಗ್ಗೆ ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್‌ ಗುರುವಾರ (ನಾಳೆ) ತೀರ್ಪು ಪ್ರಕಟಿಸಲಿದೆ. ಮೇ 10ರಂದೇ ಅರ್ಜಿ ವಿಚಾರಣೆ ಸಂಪೂರ್ಣಗೊಳಿಸಿದ್ದ ಸುಪ್ರೀಂಕೋರ್ಟ್‌ ತೀರ್ಪನ್ನು ಕಾಯ್ದಿರಿಸಿತ್ತು.

ಇದನ್ನೂ ಓದಿ: ರಫೇಲ್ ಡೀಲ್ ವೃತ್ತಾಂತ

ಫ್ರೆಂಚ್ ಸಂಸ್ಥೆ ಡಸಾಲ್ಟ್ ಏವಿಯೇಷನ್‌ ಜತೆ ಮಾಡಿಕೊಂಡ ರಫೇಲ್‌ ಫೈಟರ್‌ ಜೆಟ್‌ ಒಪ್ಪಂದದಲ್ಲಿ ಕೇಂದ್ರ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಚುನಾವಣೆಯಲ್ಲಿ ರಫೇಲ್‌ ಅಸ್ತ್ರ ಬಳಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮೋದಿ ಸರ್ಕಾರವನ್ನು ಟೀಕಿಸುತ್ತಲೇ ಬಂದಿದ್ದರು. ಈ ಬಗ್ಗೆ ವಿಚಾರಣೆ ನಡೆದು, ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ಕೂಡ ನೀಡಲಾಗಿತ್ತು.

ಇದನ್ನೂ ಓದಿ: ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ಹಗರಣದಲ್ಲಿ ಕೇಂದ್ರಕ್ಕೆ ನೀಡಲಾದ ಕ್ಲೀನ್‌ ಚಿಟ್‌ ಮರುಪರಿಶೀಲಿಸುವಂತೆ ಕಾಂಗ್ರೆ‌ಸ್‌ ನಾಯಕ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ಕಾರ್ಯಕರ್ತ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್‌ ನಾಳೆ ತೀರ್ಪು ಪ್ರಕಟಿಸಲಿದೆ.

ರಫೇಲ್‌ ಹಗರಣ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ಎಸ್‌.ಕೆ.ಕೌಲ್‌, ಕೆ.ಎಂ.ಜೋಸೆಫ್‌ ಅವರಿರುವ ತ್ರಿಸದಸ್ಯ ಪೀಠ ತೀರ್ಪು ನೀಡಲಿದೆ.

ಇದನ್ನೂ ಓದಿ: ರಫೇಲ್ ರಾದ್ಧಾಂತ: ಮೋದಿ ಭವಿಷ್ಯದ ಮೇಲೆ `ಸುಪ್ರೀಂ’ ಹೊಸ ತೀರ್ಪಿನ ಪರಿಣಾಮ ಹೇಗಿರಲಿದೆ ಗೊತ್ತಾ?

ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಆರೋಪಿಸುತ್ತಲೇ ಬಂದಿದ್ದಾರೆ. ಬಲಿಷ್ಠ ಯುದ್ಧ ವಿಮಾನ ಖರೀದಿ ಪ್ರಕ್ರಿಯೆಯಲ್ಲಿ 30 ಸಾವಿರ ಕೋಟಿ ಅಕ್ರಮವೆಸಗಿದ್ದಾರೆ ಎಂಬ ಆರೋಪವಿದೆ. ಯುದ್ಧ ವಿಮಾನ ಖರೀದಿಗಾಗಿ ಫ್ರಾನ್ಸ್‌ ಸರ್ಕಾರದೊಂದಿಗೆ ಭಾರತ ರಫೇಲ್‌ ಜೆಟ್‌ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ.

ರಫೇಲ್‌ ಯುದ್ಧ ವಿಮಾನಗಳ ಬಿಡಿ ಭಾಗಗಳ ತಯಾರಿಕೆಯ ಹೊಣೆಯನ್ನು ಎಚ್‌ಎಎಲ್‌ಗೆ ಬದಲಾಗಿ ರಿಲಯನ್ಸ್‌ ಇಂಡಸ್ಟ್ರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ರಾಹುಲ್‌ ಗಾಂಧಿ ಮಾಡಿದ್ದ ಆರೋಪವನ್ನು ರಿಲಯನ್ಸ್‌ ತಳ್ಳಿಹಾಕಿತ್ತು. ಅಷ್ಟೇ ಅಲ್ಲದೇ ಉದ್ದೇಶಿತ ಒಪ್ಪಂದಕ್ಕೂ, ರಫೇಲ್‌ ಖರೀದಿ ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...