Homeಮುಖಪುಟನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

- Advertisement -
- Advertisement -

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು ಎಂದು ಆರು ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ ‘ಶಾಂತಿಗಾಗಿ ನಾಗರಿಕ ವೇದಿಕೆ’ ಆಗ್ರಹಿಸಿತು.

ಬೆಂಗಳೂರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರಾದ ಬಿ.ಟಿ ಲಲಿತಾ ನಾಯಕ್ “ನಕ್ಸಲ್ ಸಮಸ್ಯೆ ಮುಕ್ತಾಯ, ಮುಕ್ತಾಯ ಎಂಬ ಮಾತುಗಳು ಬಹಳ ಕೇಳುತ್ತಿವೆ. ಈ ವಿದ್ಯಮಾನದಿಂದಾಗಿ ನಕ್ಸಲಿಯ ಮಾದರಿಯ ಹೋರಾಟ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದು ರೀತಿಯಲ್ಲಿ ಸಮಾರೋಪಗೊಂಡಿರುವುದು ವಾಸ್ತವ. ಆದರೆ, ನಕ್ಸಲಿಯರ ಸಮಸ್ಯೆಗಳು ಮುಕ್ತಾಯಗೊಂಡಿಲ್ಲ. ನಕ್ಸಲರು ಎತ್ತಿರುವ ಮಲೆನಾಡಿನ ಜನರ ಬದುಕಿನ ಸಮಸ್ಯೆಗಳಾವುವೂ ಪರಿಹಾರ ದಿಕ್ಕಿನತ್ತ ಮುಖಮಾಡಿಲ್ಲ ಎಂದು ಹೇಳಿದರು.

ನಕ್ಸಲಿಯರನ್ನು ಮುಖ್ಯವಾಹಿನಿಗೆ ಬರಮಾಡಿಕೊಳ್ಳುವುದರಲ್ಲಿನ ಮೊದಲ ಘಟ್ಟ ಮಾತ್ರ ಪೂರ್ಣಗೊಂಡಿದೆ. ಅವರನ್ನು ಕಾಡಿನಿಂದ ಹೊರತರಲಾಗಿದೆ. ಆದರೆ, ಅವರಿನ್ನು ನಾಡಿಗೆ ತಲುಪಿಲ್ಲ, ಜೈಲಿಗೆ ಹೋಗಿದ್ದಾರೆ. ಅನೇಕ ಗಂಭೀರ ಆರೋಪಗಳಡಿ ಕೇಸುಗಳನ್ನು ಎದುರಿಸಬೇಕಿದೆ. ಮುಂಡಗಾರು ಲತಾ ಒಬ್ಬರ ಮೇಲೆಯೇ 84 ಪ್ರಕರಣಗಳಿವೆ. ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ದೊಡ್ಡ ಪ್ರಮಾಣದಲ್ಲಿ ಕೇಸುಗಳಿವೆ. ಮೊದಲು ಅವರಿಗೆ ಈ ಎಲ್ಲಾ ಕೇಸುಗಳಲ್ಲಿ ಜಾಮೀನು ಸಿಗಬೇಕು. ಆಮೇಲೆ ಇವೆಲ್ಲವುಗಳ ಕುರಿತು ಕುರಿತು ವಿಚಾರಣೆ ನಡೆದು ಇತ್ಯರ್ಥಗೊಳ್ಳಬೇಕು ಎಂದು ತಿಳಿಸಿದರು.

ನಕ್ಸಲರನ್ನು ಕಾಡಿನಿಂದ ಹೊರತಂದಿದ್ದಕ್ಕಿಂತಲೂ ಹೆಚ್ಚಿನ ಕಷ್ಟ ಅವರನ್ನು ಜೈಲಿನಿಂದ ಹೊರ ತರುವ ಕೆಲಸದಲ್ಲಿ ಅಡಗಿದೆ. ಕಾಡಿನಿಂದ ಹೊರ ಕರೆತುವಲ್ಲಿ ನಾಗರಿಕ ವೇದಿಕೆ ಪ್ರಧಾನ ಪಾತ್ರವಹಿಸಿತ್ತು. ಆದರೆ, ಅವರನ್ನು ಜೈಲಿನಿಂದ ಹೊರತರುವ ಜವಾಬ್ದಾರಿಯನ್ನು ಸರ್ಕಾರ ನಿರ್ವಹಿಸಬೇಕಿದೆ. ಸರ್ಕಾರ ಕೊಟ್ಟ ಮಾತಿನಂತೆ ಅವರಿಗೆ ಕನಿಷ್ಠ ಜಾಮೀನು ಸಿಗುವಂತೆ ಮಾಡುವುದೇ ಎಂಬ ಪ್ರಶ್ನೆ ಇದೆ. ಅದನ್ನು ಮಾಡಿದಾಗ ಮಾತ್ರವೇ ಈ ಸಮಸ್ಯೆ ಮುಕ್ತಾಯದ ಬೆಳಕು ಮೂಡಿದಂತಾಗುತ್ತದೆ ಎಂದು ಹೇಳಿದರು.

ವೇದಿಕೆಯು ಸರ್ಕಾರದ ಮುಂದೆ ಈ ಕೆಳಗಿನ ಬೇಡಿಕೆಗಳನ್ನು ಇಟ್ಟಿದೆ. ಕೊಟ್ಟ ಮಾತಿನಂತೆ ಇವುಗಳನ್ನು ಈಡೇರಿಸಲು ಆಗ್ರಹಿಸಿದೆ. 

  • ಈಗ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಬಂದಿರುವ 6 ಜನ ನಕ್ಸಲಿಯರಿಗೆ ಜಾಮೀನಿನ ಮೇಲೆ ಬಿಡುಗಡೆಯಾಗಲು ಮತ್ತು ವಿಚಾರಣೆಯನ್ನು ಸಮರ್ಥವಾಗಿ ಪೂರೈಸಿಕೊಳ್ಳಲು ಸೂಕ್ತ ಕಾನೂನು ನೆರವಿನ ವ್ಯವಸ್ಥೆ ಆಗಬೇಕು.
  • 7-8ವರ್ಷಗಳಿಂದ ಜೈಲಿನಲ್ಲಿ ನರಳುತ್ತಿರುವ ಕನ್ಯಾಕುಮಾರಿ ಮತ್ತು ಇತರರ ಮೊಕದ್ದಮೆಗಳು ಕೂಡಲೇ ಬಗೆಹರಿದು ಹೊರಬರಲು ಸಂಪೂರ್ಣ ಸಹಕಾರ ನೀಡಬೇಕು.
  • ಕರ್ನಾಟಕ ಸರ್ಕಾರ ಅಧಿಕೃತವಾಗಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ಪತ್ರ ಬರೆದು ಅವರ ಕಡೆಯಿಂದಲೂ ಮಾಜಿ ನಕ್ಸಲರನ್ನು ಜೈಲಿನಿಂದ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆಗೆ ಸಹಕಾರ ದೊರಕಿಸಿಕೊಳ್ಳಬೇಕು.
  • ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮಾಜಿ ನಕ್ಸಲಿಯರನ್ನು ಕರೆಸಿ ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು.
  • ಈಗ ಬಡಜನರ ಬದುಕಿಗೆ ಸಂಬಂಧಪಟ್ಟ 18 ಹಕೊತ್ತಾಯಗಳನ್ನು ಸವಿಸ್ತಾರವಾಗಿ ಚರ್ಚೆಮಾಡಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳಿಗೆ ಚಾಲನೆ ಪಡೆಯಬೇಕು. ಇದಕ್ಕಾಗಿ ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ವಿಶೇಷ ಸಭೆಗಳನ್ನು ಕರೆದು, ಚರ್ಚಿಸಿ, ಅಗತ್ಯ ಕ್ರಮಗಳ ಪ್ರಕ್ರಿಯೆ ಪ್ರಾರಂಭಿಸಬೇಕು.
  • ವಿಕ್ರಂ ಗೌಡ ಹತ್ಯಾ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು.

ಜನವರಿ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎಲ್ಲಾ ಸವಾಲುಗಳನ್ನು ಮತ್ತು ಪರಿಹಾರ ಕ್ರಮಗಳನ್ನು ಅವರ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಕೂಡ ಅಗತ್ಯ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಈ ಎಲ್ಲಾ ವಿಚಾರಗಳ ಸುತ್ತ ಚುರುಕು ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದೇವೆ. ಆದರೆ, ಆಳವಾದ ಆತಂಕವಂತೂ ಇದ್ದೇ ಇದೆ ಎಂದು ವೇದಿಕೆ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯ ಪ್ರಮುಖರಾದ ವಿ.ಎಸ್‌.ಶ್ರೀಧರ್, ನಗರಗೆರೆ ರಮೇಶ್, ಎನ್‌.ವೆಂಕಟೇಶ್, ವಿಜಯಮ್ಮ, ನೂರ್ ಶ್ರೀಧರ್ ಮತ್ತು ತಾರಾ ರಾವ್ ಇದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...