Homeಮುಖಪುಟನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

- Advertisement -
- Advertisement -

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು ಎಂದು ಆರು ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ ‘ಶಾಂತಿಗಾಗಿ ನಾಗರಿಕ ವೇದಿಕೆ’ ಆಗ್ರಹಿಸಿತು.

ಬೆಂಗಳೂರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರಾದ ಬಿ.ಟಿ ಲಲಿತಾ ನಾಯಕ್ “ನಕ್ಸಲ್ ಸಮಸ್ಯೆ ಮುಕ್ತಾಯ, ಮುಕ್ತಾಯ ಎಂಬ ಮಾತುಗಳು ಬಹಳ ಕೇಳುತ್ತಿವೆ. ಈ ವಿದ್ಯಮಾನದಿಂದಾಗಿ ನಕ್ಸಲಿಯ ಮಾದರಿಯ ಹೋರಾಟ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದು ರೀತಿಯಲ್ಲಿ ಸಮಾರೋಪಗೊಂಡಿರುವುದು ವಾಸ್ತವ. ಆದರೆ, ನಕ್ಸಲಿಯರ ಸಮಸ್ಯೆಗಳು ಮುಕ್ತಾಯಗೊಂಡಿಲ್ಲ. ನಕ್ಸಲರು ಎತ್ತಿರುವ ಮಲೆನಾಡಿನ ಜನರ ಬದುಕಿನ ಸಮಸ್ಯೆಗಳಾವುವೂ ಪರಿಹಾರ ದಿಕ್ಕಿನತ್ತ ಮುಖಮಾಡಿಲ್ಲ ಎಂದು ಹೇಳಿದರು.

ನಕ್ಸಲಿಯರನ್ನು ಮುಖ್ಯವಾಹಿನಿಗೆ ಬರಮಾಡಿಕೊಳ್ಳುವುದರಲ್ಲಿನ ಮೊದಲ ಘಟ್ಟ ಮಾತ್ರ ಪೂರ್ಣಗೊಂಡಿದೆ. ಅವರನ್ನು ಕಾಡಿನಿಂದ ಹೊರತರಲಾಗಿದೆ. ಆದರೆ, ಅವರಿನ್ನು ನಾಡಿಗೆ ತಲುಪಿಲ್ಲ, ಜೈಲಿಗೆ ಹೋಗಿದ್ದಾರೆ. ಅನೇಕ ಗಂಭೀರ ಆರೋಪಗಳಡಿ ಕೇಸುಗಳನ್ನು ಎದುರಿಸಬೇಕಿದೆ. ಮುಂಡಗಾರು ಲತಾ ಒಬ್ಬರ ಮೇಲೆಯೇ 84 ಪ್ರಕರಣಗಳಿವೆ. ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ದೊಡ್ಡ ಪ್ರಮಾಣದಲ್ಲಿ ಕೇಸುಗಳಿವೆ. ಮೊದಲು ಅವರಿಗೆ ಈ ಎಲ್ಲಾ ಕೇಸುಗಳಲ್ಲಿ ಜಾಮೀನು ಸಿಗಬೇಕು. ಆಮೇಲೆ ಇವೆಲ್ಲವುಗಳ ಕುರಿತು ಕುರಿತು ವಿಚಾರಣೆ ನಡೆದು ಇತ್ಯರ್ಥಗೊಳ್ಳಬೇಕು ಎಂದು ತಿಳಿಸಿದರು.

ನಕ್ಸಲರನ್ನು ಕಾಡಿನಿಂದ ಹೊರತಂದಿದ್ದಕ್ಕಿಂತಲೂ ಹೆಚ್ಚಿನ ಕಷ್ಟ ಅವರನ್ನು ಜೈಲಿನಿಂದ ಹೊರ ತರುವ ಕೆಲಸದಲ್ಲಿ ಅಡಗಿದೆ. ಕಾಡಿನಿಂದ ಹೊರ ಕರೆತುವಲ್ಲಿ ನಾಗರಿಕ ವೇದಿಕೆ ಪ್ರಧಾನ ಪಾತ್ರವಹಿಸಿತ್ತು. ಆದರೆ, ಅವರನ್ನು ಜೈಲಿನಿಂದ ಹೊರತರುವ ಜವಾಬ್ದಾರಿಯನ್ನು ಸರ್ಕಾರ ನಿರ್ವಹಿಸಬೇಕಿದೆ. ಸರ್ಕಾರ ಕೊಟ್ಟ ಮಾತಿನಂತೆ ಅವರಿಗೆ ಕನಿಷ್ಠ ಜಾಮೀನು ಸಿಗುವಂತೆ ಮಾಡುವುದೇ ಎಂಬ ಪ್ರಶ್ನೆ ಇದೆ. ಅದನ್ನು ಮಾಡಿದಾಗ ಮಾತ್ರವೇ ಈ ಸಮಸ್ಯೆ ಮುಕ್ತಾಯದ ಬೆಳಕು ಮೂಡಿದಂತಾಗುತ್ತದೆ ಎಂದು ಹೇಳಿದರು.

ವೇದಿಕೆಯು ಸರ್ಕಾರದ ಮುಂದೆ ಈ ಕೆಳಗಿನ ಬೇಡಿಕೆಗಳನ್ನು ಇಟ್ಟಿದೆ. ಕೊಟ್ಟ ಮಾತಿನಂತೆ ಇವುಗಳನ್ನು ಈಡೇರಿಸಲು ಆಗ್ರಹಿಸಿದೆ. 

  • ಈಗ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಬಂದಿರುವ 6 ಜನ ನಕ್ಸಲಿಯರಿಗೆ ಜಾಮೀನಿನ ಮೇಲೆ ಬಿಡುಗಡೆಯಾಗಲು ಮತ್ತು ವಿಚಾರಣೆಯನ್ನು ಸಮರ್ಥವಾಗಿ ಪೂರೈಸಿಕೊಳ್ಳಲು ಸೂಕ್ತ ಕಾನೂನು ನೆರವಿನ ವ್ಯವಸ್ಥೆ ಆಗಬೇಕು.
  • 7-8ವರ್ಷಗಳಿಂದ ಜೈಲಿನಲ್ಲಿ ನರಳುತ್ತಿರುವ ಕನ್ಯಾಕುಮಾರಿ ಮತ್ತು ಇತರರ ಮೊಕದ್ದಮೆಗಳು ಕೂಡಲೇ ಬಗೆಹರಿದು ಹೊರಬರಲು ಸಂಪೂರ್ಣ ಸಹಕಾರ ನೀಡಬೇಕು.
  • ಕರ್ನಾಟಕ ಸರ್ಕಾರ ಅಧಿಕೃತವಾಗಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ಪತ್ರ ಬರೆದು ಅವರ ಕಡೆಯಿಂದಲೂ ಮಾಜಿ ನಕ್ಸಲರನ್ನು ಜೈಲಿನಿಂದ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆಗೆ ಸಹಕಾರ ದೊರಕಿಸಿಕೊಳ್ಳಬೇಕು.
  • ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮಾಜಿ ನಕ್ಸಲಿಯರನ್ನು ಕರೆಸಿ ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು.
  • ಈಗ ಬಡಜನರ ಬದುಕಿಗೆ ಸಂಬಂಧಪಟ್ಟ 18 ಹಕೊತ್ತಾಯಗಳನ್ನು ಸವಿಸ್ತಾರವಾಗಿ ಚರ್ಚೆಮಾಡಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳಿಗೆ ಚಾಲನೆ ಪಡೆಯಬೇಕು. ಇದಕ್ಕಾಗಿ ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ವಿಶೇಷ ಸಭೆಗಳನ್ನು ಕರೆದು, ಚರ್ಚಿಸಿ, ಅಗತ್ಯ ಕ್ರಮಗಳ ಪ್ರಕ್ರಿಯೆ ಪ್ರಾರಂಭಿಸಬೇಕು.
  • ವಿಕ್ರಂ ಗೌಡ ಹತ್ಯಾ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು.

ಜನವರಿ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎಲ್ಲಾ ಸವಾಲುಗಳನ್ನು ಮತ್ತು ಪರಿಹಾರ ಕ್ರಮಗಳನ್ನು ಅವರ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಕೂಡ ಅಗತ್ಯ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಈ ಎಲ್ಲಾ ವಿಚಾರಗಳ ಸುತ್ತ ಚುರುಕು ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದೇವೆ. ಆದರೆ, ಆಳವಾದ ಆತಂಕವಂತೂ ಇದ್ದೇ ಇದೆ ಎಂದು ವೇದಿಕೆ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯ ಪ್ರಮುಖರಾದ ವಿ.ಎಸ್‌.ಶ್ರೀಧರ್, ನಗರಗೆರೆ ರಮೇಶ್, ಎನ್‌.ವೆಂಕಟೇಶ್, ವಿಜಯಮ್ಮ, ನೂರ್ ಶ್ರೀಧರ್ ಮತ್ತು ತಾರಾ ರಾವ್ ಇದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...