Homeಮುಖಪುಟನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

- Advertisement -
- Advertisement -

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು ಎಂದು ಆರು ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ ‘ಶಾಂತಿಗಾಗಿ ನಾಗರಿಕ ವೇದಿಕೆ’ ಆಗ್ರಹಿಸಿತು.

ಬೆಂಗಳೂರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರಾದ ಬಿ.ಟಿ ಲಲಿತಾ ನಾಯಕ್ “ನಕ್ಸಲ್ ಸಮಸ್ಯೆ ಮುಕ್ತಾಯ, ಮುಕ್ತಾಯ ಎಂಬ ಮಾತುಗಳು ಬಹಳ ಕೇಳುತ್ತಿವೆ. ಈ ವಿದ್ಯಮಾನದಿಂದಾಗಿ ನಕ್ಸಲಿಯ ಮಾದರಿಯ ಹೋರಾಟ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದು ರೀತಿಯಲ್ಲಿ ಸಮಾರೋಪಗೊಂಡಿರುವುದು ವಾಸ್ತವ. ಆದರೆ, ನಕ್ಸಲಿಯರ ಸಮಸ್ಯೆಗಳು ಮುಕ್ತಾಯಗೊಂಡಿಲ್ಲ. ನಕ್ಸಲರು ಎತ್ತಿರುವ ಮಲೆನಾಡಿನ ಜನರ ಬದುಕಿನ ಸಮಸ್ಯೆಗಳಾವುವೂ ಪರಿಹಾರ ದಿಕ್ಕಿನತ್ತ ಮುಖಮಾಡಿಲ್ಲ ಎಂದು ಹೇಳಿದರು.

ನಕ್ಸಲಿಯರನ್ನು ಮುಖ್ಯವಾಹಿನಿಗೆ ಬರಮಾಡಿಕೊಳ್ಳುವುದರಲ್ಲಿನ ಮೊದಲ ಘಟ್ಟ ಮಾತ್ರ ಪೂರ್ಣಗೊಂಡಿದೆ. ಅವರನ್ನು ಕಾಡಿನಿಂದ ಹೊರತರಲಾಗಿದೆ. ಆದರೆ, ಅವರಿನ್ನು ನಾಡಿಗೆ ತಲುಪಿಲ್ಲ, ಜೈಲಿಗೆ ಹೋಗಿದ್ದಾರೆ. ಅನೇಕ ಗಂಭೀರ ಆರೋಪಗಳಡಿ ಕೇಸುಗಳನ್ನು ಎದುರಿಸಬೇಕಿದೆ. ಮುಂಡಗಾರು ಲತಾ ಒಬ್ಬರ ಮೇಲೆಯೇ 84 ಪ್ರಕರಣಗಳಿವೆ. ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ದೊಡ್ಡ ಪ್ರಮಾಣದಲ್ಲಿ ಕೇಸುಗಳಿವೆ. ಮೊದಲು ಅವರಿಗೆ ಈ ಎಲ್ಲಾ ಕೇಸುಗಳಲ್ಲಿ ಜಾಮೀನು ಸಿಗಬೇಕು. ಆಮೇಲೆ ಇವೆಲ್ಲವುಗಳ ಕುರಿತು ಕುರಿತು ವಿಚಾರಣೆ ನಡೆದು ಇತ್ಯರ್ಥಗೊಳ್ಳಬೇಕು ಎಂದು ತಿಳಿಸಿದರು.

ನಕ್ಸಲರನ್ನು ಕಾಡಿನಿಂದ ಹೊರತಂದಿದ್ದಕ್ಕಿಂತಲೂ ಹೆಚ್ಚಿನ ಕಷ್ಟ ಅವರನ್ನು ಜೈಲಿನಿಂದ ಹೊರ ತರುವ ಕೆಲಸದಲ್ಲಿ ಅಡಗಿದೆ. ಕಾಡಿನಿಂದ ಹೊರ ಕರೆತುವಲ್ಲಿ ನಾಗರಿಕ ವೇದಿಕೆ ಪ್ರಧಾನ ಪಾತ್ರವಹಿಸಿತ್ತು. ಆದರೆ, ಅವರನ್ನು ಜೈಲಿನಿಂದ ಹೊರತರುವ ಜವಾಬ್ದಾರಿಯನ್ನು ಸರ್ಕಾರ ನಿರ್ವಹಿಸಬೇಕಿದೆ. ಸರ್ಕಾರ ಕೊಟ್ಟ ಮಾತಿನಂತೆ ಅವರಿಗೆ ಕನಿಷ್ಠ ಜಾಮೀನು ಸಿಗುವಂತೆ ಮಾಡುವುದೇ ಎಂಬ ಪ್ರಶ್ನೆ ಇದೆ. ಅದನ್ನು ಮಾಡಿದಾಗ ಮಾತ್ರವೇ ಈ ಸಮಸ್ಯೆ ಮುಕ್ತಾಯದ ಬೆಳಕು ಮೂಡಿದಂತಾಗುತ್ತದೆ ಎಂದು ಹೇಳಿದರು.

ವೇದಿಕೆಯು ಸರ್ಕಾರದ ಮುಂದೆ ಈ ಕೆಳಗಿನ ಬೇಡಿಕೆಗಳನ್ನು ಇಟ್ಟಿದೆ. ಕೊಟ್ಟ ಮಾತಿನಂತೆ ಇವುಗಳನ್ನು ಈಡೇರಿಸಲು ಆಗ್ರಹಿಸಿದೆ. 

  • ಈಗ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಬಂದಿರುವ 6 ಜನ ನಕ್ಸಲಿಯರಿಗೆ ಜಾಮೀನಿನ ಮೇಲೆ ಬಿಡುಗಡೆಯಾಗಲು ಮತ್ತು ವಿಚಾರಣೆಯನ್ನು ಸಮರ್ಥವಾಗಿ ಪೂರೈಸಿಕೊಳ್ಳಲು ಸೂಕ್ತ ಕಾನೂನು ನೆರವಿನ ವ್ಯವಸ್ಥೆ ಆಗಬೇಕು.
  • 7-8ವರ್ಷಗಳಿಂದ ಜೈಲಿನಲ್ಲಿ ನರಳುತ್ತಿರುವ ಕನ್ಯಾಕುಮಾರಿ ಮತ್ತು ಇತರರ ಮೊಕದ್ದಮೆಗಳು ಕೂಡಲೇ ಬಗೆಹರಿದು ಹೊರಬರಲು ಸಂಪೂರ್ಣ ಸಹಕಾರ ನೀಡಬೇಕು.
  • ಕರ್ನಾಟಕ ಸರ್ಕಾರ ಅಧಿಕೃತವಾಗಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ಪತ್ರ ಬರೆದು ಅವರ ಕಡೆಯಿಂದಲೂ ಮಾಜಿ ನಕ್ಸಲರನ್ನು ಜೈಲಿನಿಂದ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆಗೆ ಸಹಕಾರ ದೊರಕಿಸಿಕೊಳ್ಳಬೇಕು.
  • ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮಾಜಿ ನಕ್ಸಲಿಯರನ್ನು ಕರೆಸಿ ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು.
  • ಈಗ ಬಡಜನರ ಬದುಕಿಗೆ ಸಂಬಂಧಪಟ್ಟ 18 ಹಕೊತ್ತಾಯಗಳನ್ನು ಸವಿಸ್ತಾರವಾಗಿ ಚರ್ಚೆಮಾಡಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ರಚನಾತ್ಮಕ ಕೆಲಸಗಳಿಗೆ ಚಾಲನೆ ಪಡೆಯಬೇಕು. ಇದಕ್ಕಾಗಿ ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ವಿಶೇಷ ಸಭೆಗಳನ್ನು ಕರೆದು, ಚರ್ಚಿಸಿ, ಅಗತ್ಯ ಕ್ರಮಗಳ ಪ್ರಕ್ರಿಯೆ ಪ್ರಾರಂಭಿಸಬೇಕು.
  • ವಿಕ್ರಂ ಗೌಡ ಹತ್ಯಾ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು.

ಜನವರಿ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎಲ್ಲಾ ಸವಾಲುಗಳನ್ನು ಮತ್ತು ಪರಿಹಾರ ಕ್ರಮಗಳನ್ನು ಅವರ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಕೂಡ ಅಗತ್ಯ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಈ ಎಲ್ಲಾ ವಿಚಾರಗಳ ಸುತ್ತ ಚುರುಕು ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದೇವೆ. ಆದರೆ, ಆಳವಾದ ಆತಂಕವಂತೂ ಇದ್ದೇ ಇದೆ ಎಂದು ವೇದಿಕೆ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯ ಪ್ರಮುಖರಾದ ವಿ.ಎಸ್‌.ಶ್ರೀಧರ್, ನಗರಗೆರೆ ರಮೇಶ್, ಎನ್‌.ವೆಂಕಟೇಶ್, ವಿಜಯಮ್ಮ, ನೂರ್ ಶ್ರೀಧರ್ ಮತ್ತು ತಾರಾ ರಾವ್ ಇದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...