Homeಅಂತರಾಷ್ಟ್ರೀಯಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.

ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ.

ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಕಾಡ್ಗಿಚ್ಚು ಅನೇಕ ಮನೆಗಳನ್ನು ನಾಶಪಡಿಸಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಮ್ಮ ಕಾರ್ಯವನ್ನು ಬಿರುಸಿನಿಂದ ಮುಂದುವರಿಸಿದ್ದಾರೆ. ಪ್ರಬಲವಾದ ಗಾಳಿಯು ಒಣಗಿದ ಭೂಪ್ರದೇಶಗಳಲ್ಲಿ ಬೆಂಕಿಯು ಐದು ದಿನಗಳ ನಂತರವೂ ಮುಂದುವರಿದಿದೆ.

ವ್ಯಾಪಕವಾದ ವೈಮಾನಿಕ ಅಗ್ನಿಶಾಮಕ ಪ್ರಯತ್ನಗಳ ಹೊರತಾಗಿಯೂ, ಪಾಲಿಸೇಡ್ಸ್ ನಲ್ಲಿ ಬೆಂಕಿಯು ಶನಿವಾರದಂದು ನಗರದ ಪೂರ್ವಕ್ಕೆ ವಿಸ್ತರಿಸಿದೆ. ಗೆಟ್ಟಿ ಸೆಂಟರ್ ಕಲಾ ವಸ್ತುಸಂಗ್ರಹಾಲಯಕ್ಕೆ ಬೆಂಕಿ ಅವರಿಸುವ ಭೀತಿ ಎದುರಾಗಿದೆ ಮತ್ತು ಅದು ಉತ್ತರಕ್ಕೆ ಸ್ಯಾನ್ ಫೆರ್ನಾಂಡೊ ಕಣಿವೆಯ ಕಡೆಗೆ ತನ್ನ ಕೆನ್ನಾಲಿಗೆಯನ್ನು ಚಾಚಿದೆ. ಇಲ್ಲಿ 23,600 ಎಕರೆಗಳಷ್ಟು ಬೆಂಕಿ ಆವರಿಸಿದ್ದು, ಶೇ.11ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಈಟನ್ ನಲ್ಲಿ 14,000 ಎಕರೆಗಳನ್ನು ಸುಟ್ಟುಹಾಕಿದ್ದು, ಶೇ.15 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಲಾಸ್ ಏಂಜಲೀಸ್ ಸುತ್ತಮುತ್ತಲಿನ ಆರು ಪ್ರಮುಖ ಕಾಡ್ಗಿಚ್ಚುಗಳು ಸುಮಾರು 40,000 ಎಕರೆ ಕಾಡನ್ನು ಸುಟ್ಟುಹಾಕಿವೆ. ಮನೆಗಳು ಮತ್ತು ಇತರ ವ್ಯವಹಾರದ ಕಟ್ಟಡಗಳು ಸೇರಿದಂತೆ 12,000ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

ಶುಷ್ಕ ಗಾಳಿ ತೀವ್ರಗೊಳ್ಳುವ ಬೆದರಿಕೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಅಪಾಯಗಳ ಬಗ್ಗೆ ಎಚ್ಚರಿಸಿದ್ದಾರೆ.

ಈ ಕಾಡ್ಗಿಚ್ಚುಗಳು ಯುಎಸ್ ಇತಿಹಾಸದಲ್ಲಿ ಅತ್ಯಂತ ದುಬಾರಿಯಾಗಬಹುದು, ಹಾನಿ ಮತ್ತು ಆರ್ಥಿಕ ನಷ್ಟಗಳು $135 ಬಿಲಿಯನ್ ಮತ್ತು $150 ಬಿಲಿಯನ್ ನಡುವೆ ಇರಬಹುದು ಎಂದು ಆರಂಭಿಕ ಅಂದಾಜು ಹೇಳಿದೆ.
ನಾಯಿಗಳು, ಕುದುರೆಗಳು ಮತ್ತು ಜಾನುವಾರುಗಳು ಸೇರಿದಂತೆ ಸ್ಥಳಾಂತರಗೊಂಡ ಪ್ರಾಣಿಗಳಿಗೆ ಅವುಗಳ ಮಾಲೀಕರೊಂದಿಗೆ ಸಹಾಯ ಮಾಡಲು ರಕ್ಷಣಾ ಸಂಸ್ಥೆಗಳು ಮುಂದಾಗಿವೆ. ಸ್ವಯಂಸೇವಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿ ನಿರಾಶ್ರಿತರಾದವರಿಗೆ ಆಹಾರ ನೀಡುತ್ತಿದ್ದಾರೆ. ಪ್ರಾಣಿಗಳು ಮತ್ತು ಜನರಿಗೆ ಆಹಾರ ಮತ್ತು ಸಾಮಗ್ರಿಗಳ ದೇಣಿಗೆಗಳು ಹರಿದು ಬರುತ್ತಿವೆ.

ಸ್ಥಳೀಯ ರೇಸ್ ಟ್ರ್ಯಾಕ್‌ನಲ್ಲಿ ಮನೆಗಳನ್ನು ಕಳೆದುಗೊಂಡು ಸ್ಥಳಾಂತರಗೊಂಡ ನಿವಾಸಿಗಳಿಗೆ ಬಟ್ಟೆ, ಕಂಬಳಿ ಮತ್ತು ಗೃಹೋಪಯೋಗಿ ವಸ್ತುಗಳಂತಹ ಅಗತ್ಯ ವಸ್ತುಗಳನ್ನು ಪೂರೈಸಲು ವಿಂಗಡಿಸುತ್ತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಸರ್ಕಾರ ಇನ್ನೂ ಅಧಿಕೃತವಾಗಿ ಇಲ್ಲಿಯವರೆಗಿನ ಹಾನಿಯ ಅಂದಾಜು ನೀಡಿಲ್ಲವಾದರೂ, ಖಾಸಗಿ ಅಂದಾಜಿನ ಪ್ರಕಾರ ಒಟ್ಟು ಹಾನಿಯ ವೆಚ್ಚ ಹತ್ತಾರು ಶತಕೋಟಿ ಡಾಲರ್‌ಗಳನ್ನು ತಲುಪುತ್ತದೆ.

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...