ಮಹಾರಾಷ್ಟ್ರದ ಬೀಡ್ ಮತ್ತು ಪರ್ಭಾನಿಯಲ್ಲಿ ನಡೆದ ಸರಪಂಚ್ ಹತ್ಯೆ ಮತ್ತು ನ್ಯಾಯಾಂಗ ಬಂಧನದಲ್ಲಿದ್ದ ದಲಿತ ಯುವಕನ ಸಾವಿನ ನಂತರ ಬೀಡ್ ಮತ್ತು ಪರ್ಭಾನಿಯಲ್ಲಿ ಆವರಿಸಿರುವ ಸಾಮಾಜಿಕ ಉದ್ವಿಗ್ನತೆಯನ್ನು ಶಮನಗೊಳಿಸುವ ಪ್ರಯತ್ನಗಳ ಕುರಿತು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಾತನಾಡಿದ್ದಾಗಿ ಹೇಳಿಕೊಂಡಿದ್ದಾರೆ. ಮಹಾರಾಷ್ಟ್ರದ ಸಹಜ ಸ್ಥಿತಿ
ಬೀಡ್ ಮತ್ತು ಪರ್ಭಾನಿಯಲ್ಲಿ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಒಗ್ಗಟ್ಟಿನ ಪ್ರಯತ್ನಗಳು ಅಗತ್ಯವಾಗಿವೆ ಎಂದು ಶರದ್ ಪವಾರ್ ಶನಿವಾರ ಹೇಳಿದ್ದಾರೆ.
ಡಿಸೆಂಬರ್ 9 ರಂದು ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ಸಂತೋಷ್ ದೇಶಮುಖ್ ಅವರ ಹತ್ಯೆಯ ನಂತರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ನಡುವೆ ಗದ್ದಲಕ್ಕೆ ಕಾರಣವಾಗಿತ್ತು. ಸಂಬಂಧಿತ ಸುಲಿಗೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಗಳಲ್ಲಿ ಒಬ್ಬರು ರಾಜ್ಯದ ಸಚಿವ ಧನಂಜಯ್ ಮುಂಡೆ ಅವರ ಆಪ್ತರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಘಟನೆಯ ನಂತರ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದು, ಜೊತೆಗೆ ದೇಶಮುಖ್ ಮರಾಠರಾಗಿರುವುದರಿಂದ ಮತ್ತು ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾದ ಕೆಲವರು ವಂಜರಿ ಸಮುದಾಯದವರು ಎಂಬ ಕಾರಣಕ್ಕೆ ಜಾತಿ ಸಂಘರ್ಷದ ಭೀತಿ ಉಂಟಾಗಿದೆ. ಮಹಾರಾಷ್ಟ್ರದ ಸಹಜ ಸ್ಥಿತಿ
ಡಿಸೆಂಬರ್ 10 ರಂದು ಪರ್ಭಾನಿಯಲ್ಲಿ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿದ ನಂತರ ಸಂಭವಿಸಿದ ಹಿಂಸಾಚಾರದ ನಂತರ ಬಂಧಿಸಲ್ಪಟ್ಟ ಸೋಮನಾಥ್ ಸೂರ್ಯವಂಶಿ, ಹಠಾತ್ ಅನಾರೋಗ್ಯಕ್ಕೊಳಗಾಗಿ ಜೈಲಿನಿಂದ ಆಸ್ಪತ್ರೆಗೆ ಸಾಗಿಸಲ್ಪಟ್ಟ ನಂತರ ಡಿಸೆಂಬರ್ 15 ರಂದು ನಿಧನರಾಗಿದ್ದರು.
ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪವಾರ್, 1993 ರಲ್ಲಿ 10,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ವಿನಾಶಕಾರಿ ಲಾತೂರ್ ಭೂಕಂಪ ಮತ್ತು ಅದೇ ವರ್ಷ ಮುಂಬೈನಲ್ಲಿ ನಡೆದ ಸರಣಿ ಸ್ಫೋಟಗಳನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಅನುಭವವನ್ನು ಉಲ್ಲೇಖಿಸಿದ್ದಾರೆ. ಮಹಾರಾಷ್ಟ್ರದ ಜನರು ಸಾಮಾಜಿಕವಾಗಿ ಜಾಗೃತರಾಗಿದ್ದು, ಯಾವಾಗಲೂ ಒಗ್ಗಟ್ಟಿನಿಂದ ನಿಂತು ಬಿಕ್ಕಟ್ಟಿನ ಸಂದರ್ಭಗಳಲ್ಲಿ ಆಡಳಿತದೊಂದಿಗೆ ಸಹಕರಿಸಿದ್ದರು ಎಂದು ಅವರು ಹೇಳಿದ್ದಾರೆ.
“ಉದ್ವಿಗ್ನತೆಯನ್ನು ಶಮನಗೊಳಿಸಿ ಶಾಂತಿಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನದ ಅಗತ್ಯವಿದೆ. ಆದರೆ ಒಬ್ಬ ಮುಖ್ಯಮಂತ್ರಿ ಅದನ್ನು ಒಬ್ಬಂಟಿಯಾಗಿ ಮಾಡಲು ಸಾಧ್ಯವಿಲ್ಲ. ಈ ಘಟನೆಗಳ ನಂತರ ಬೀಡ್ ಮತ್ತು ಪರ್ಭಾನಿಯಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ನಾನು ಇಂದು ಸಿಎಂ ಫಡ್ನವೀಸ್ ಅವರೊಂದಿಗೆ ವಿವರವಾದ ಚರ್ಚೆ ನಡೆಸಿದೆ. ಈ ದಿನಗಳಲ್ಲಿ ನನ್ನ ಹೆಚ್ಚಿನ ಸಮಯ ಬೀಡ್ ಮತ್ತು ಪರ್ಭಾನಿಯಲ್ಲಿ ಪರಿಸ್ಥಿತಿಯನ್ನು ಶಮನಗೊಳಿಸುವುದು ಮತ್ತು ಸಮಸ್ಯೆಗಳನ್ನು ಹೇಗೆ ಪರಿಹರಿಸುವುದು ಎಂಬುದರ ಮೇಲೆ ಮೀಸಲಿಡಲಾಗಿದೆ” ಎಂದು ಶರದ್ ಪವಾರ್ ಹೇಳಿದ್ದಾರೆ.
“ಸೌಹಾರ್ದಯುತವಾಗಿ ಬದುಕುತ್ತಿದ್ದ ಜನರು ಈಗ ಭಯದಲ್ಲಿ ಬದುಕುತ್ತಿದ್ದಾರೆ ಮತ್ತು ಪರಸ್ಪರ ದ್ವೇಷ ಬೆಳೆಸಿಕೊಂಡಿದ್ದಾರೆ. ನಾನು ಸಿಎಂ ಜೊತೆ ಮಾತನಾಡಿದೆ. ನಮ್ಮಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು ಆದರೆ ಏನೇ ಬಂದರೂ ಜನರನ್ನು ಒಗ್ಗಟ್ಟಿನಿಂದ ಇರಿಸಲು ನಾವು ಕೆಲಸ ಮಾಡಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ: ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ
ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ


