Homeಮುಖಪುಟಮಹಾರಾಷ್ಟ್ರದ ಸಹಜ ಸ್ಥಿತಿ ಪುನಃಸ್ಥಾಪನೆಗೆ ಒಗ್ಗಟ್ಟಿನ ಪ್ರಯತ್ನ ಅಗತ್ಯ: ಶರದ್ ಪವಾರ್

ಮಹಾರಾಷ್ಟ್ರದ ಸಹಜ ಸ್ಥಿತಿ ಪುನಃಸ್ಥಾಪನೆಗೆ ಒಗ್ಗಟ್ಟಿನ ಪ್ರಯತ್ನ ಅಗತ್ಯ: ಶರದ್ ಪವಾರ್

- Advertisement -
- Advertisement -

ಮಹಾರಾಷ್ಟ್ರದ ಬೀಡ್ ಮತ್ತು ಪರ್ಭಾನಿಯಲ್ಲಿ ನಡೆದ ಸರಪಂಚ್ ಹತ್ಯೆ ಮತ್ತು ನ್ಯಾಯಾಂಗ ಬಂಧನದಲ್ಲಿದ್ದ ದಲಿತ ಯುವಕನ ಸಾವಿನ ನಂತರ ಬೀಡ್ ಮತ್ತು ಪರ್ಭಾನಿಯಲ್ಲಿ ಆವರಿಸಿರುವ ಸಾಮಾಜಿಕ ಉದ್ವಿಗ್ನತೆಯನ್ನು ಶಮನಗೊಳಿಸುವ ಪ್ರಯತ್ನಗಳ ಕುರಿತು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಾತನಾಡಿದ್ದಾಗಿ ಹೇಳಿಕೊಂಡಿದ್ದಾರೆ. ಮಹಾರಾಷ್ಟ್ರದ ಸಹಜ ಸ್ಥಿತಿ

ಬೀಡ್ ಮತ್ತು ಪರ್ಭಾನಿಯಲ್ಲಿ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಒಗ್ಗಟ್ಟಿನ ಪ್ರಯತ್ನಗಳು ಅಗತ್ಯವಾಗಿವೆ ಎಂದು ಶರದ್ ಪವಾರ್ ಶನಿವಾರ ಹೇಳಿದ್ದಾರೆ.

ಡಿಸೆಂಬರ್ 9 ರಂದು ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ಸಂತೋಷ್ ದೇಶಮುಖ್ ಅವರ ಹತ್ಯೆಯ ನಂತರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ನಡುವೆ ಗದ್ದಲಕ್ಕೆ ಕಾರಣವಾಗಿತ್ತು. ಸಂಬಂಧಿತ ಸುಲಿಗೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಗಳಲ್ಲಿ ಒಬ್ಬರು ರಾಜ್ಯದ ಸಚಿವ ಧನಂಜಯ್ ಮುಂಡೆ ಅವರ ಆಪ್ತರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ನಂತರ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದು, ಜೊತೆಗೆ ದೇಶಮುಖ್ ಮರಾಠರಾಗಿರುವುದರಿಂದ ಮತ್ತು ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾದ ಕೆಲವರು ವಂಜರಿ ಸಮುದಾಯದವರು ಎಂಬ ಕಾರಣಕ್ಕೆ ಜಾತಿ ಸಂಘರ್ಷದ ಭೀತಿ ಉಂಟಾಗಿದೆ. ಮಹಾರಾಷ್ಟ್ರದ ಸಹಜ ಸ್ಥಿತಿ

ಡಿಸೆಂಬರ್ 10 ರಂದು ಪರ್ಭಾನಿಯಲ್ಲಿ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿದ ನಂತರ ಸಂಭವಿಸಿದ ಹಿಂಸಾಚಾರದ ನಂತರ ಬಂಧಿಸಲ್ಪಟ್ಟ ಸೋಮನಾಥ್ ಸೂರ್ಯವಂಶಿ, ಹಠಾತ್ ಅನಾರೋಗ್ಯಕ್ಕೊಳಗಾಗಿ ಜೈಲಿನಿಂದ ಆಸ್ಪತ್ರೆಗೆ ಸಾಗಿಸಲ್ಪಟ್ಟ ನಂತರ ಡಿಸೆಂಬರ್ 15 ರಂದು ನಿಧನರಾಗಿದ್ದರು.

ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪವಾರ್, 1993 ರಲ್ಲಿ 10,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ವಿನಾಶಕಾರಿ ಲಾತೂರ್ ಭೂಕಂಪ ಮತ್ತು ಅದೇ ವರ್ಷ ಮುಂಬೈನಲ್ಲಿ ನಡೆದ ಸರಣಿ ಸ್ಫೋಟಗಳನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಅನುಭವವನ್ನು ಉಲ್ಲೇಖಿಸಿದ್ದಾರೆ. ಮಹಾರಾಷ್ಟ್ರದ ಜನರು ಸಾಮಾಜಿಕವಾಗಿ ಜಾಗೃತರಾಗಿದ್ದು, ಯಾವಾಗಲೂ ಒಗ್ಗಟ್ಟಿನಿಂದ ನಿಂತು ಬಿಕ್ಕಟ್ಟಿನ ಸಂದರ್ಭಗಳಲ್ಲಿ ಆಡಳಿತದೊಂದಿಗೆ ಸಹಕರಿಸಿದ್ದರು ಎಂದು ಅವರು ಹೇಳಿದ್ದಾರೆ.

“ಉದ್ವಿಗ್ನತೆಯನ್ನು ಶಮನಗೊಳಿಸಿ ಶಾಂತಿಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನದ ಅಗತ್ಯವಿದೆ. ಆದರೆ ಒಬ್ಬ ಮುಖ್ಯಮಂತ್ರಿ ಅದನ್ನು ಒಬ್ಬಂಟಿಯಾಗಿ ಮಾಡಲು ಸಾಧ್ಯವಿಲ್ಲ. ಈ ಘಟನೆಗಳ ನಂತರ ಬೀಡ್ ಮತ್ತು ಪರ್ಭಾನಿಯಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ನಾನು ಇಂದು ಸಿಎಂ ಫಡ್ನವೀಸ್ ಅವರೊಂದಿಗೆ ವಿವರವಾದ ಚರ್ಚೆ ನಡೆಸಿದೆ. ಈ ದಿನಗಳಲ್ಲಿ ನನ್ನ ಹೆಚ್ಚಿನ ಸಮಯ ಬೀಡ್ ಮತ್ತು ಪರ್ಭಾನಿಯಲ್ಲಿ ಪರಿಸ್ಥಿತಿಯನ್ನು ಶಮನಗೊಳಿಸುವುದು ಮತ್ತು ಸಮಸ್ಯೆಗಳನ್ನು ಹೇಗೆ ಪರಿಹರಿಸುವುದು ಎಂಬುದರ ಮೇಲೆ ಮೀಸಲಿಡಲಾಗಿದೆ” ಎಂದು ಶರದ್ ಪವಾರ್ ಹೇಳಿದ್ದಾರೆ.

“ಸೌಹಾರ್ದಯುತವಾಗಿ ಬದುಕುತ್ತಿದ್ದ ಜನರು ಈಗ ಭಯದಲ್ಲಿ ಬದುಕುತ್ತಿದ್ದಾರೆ ಮತ್ತು ಪರಸ್ಪರ ದ್ವೇಷ ಬೆಳೆಸಿಕೊಂಡಿದ್ದಾರೆ. ನಾನು ಸಿಎಂ ಜೊತೆ ಮಾತನಾಡಿದೆ. ನಮ್ಮಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು ಆದರೆ ಏನೇ ಬಂದರೂ ಜನರನ್ನು ಒಗ್ಗಟ್ಟಿನಿಂದ ಇರಿಸಲು ನಾವು ಕೆಲಸ ಮಾಡಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ

ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...