Homeಮುಖಪುಟಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

- Advertisement -
- Advertisement -

ಪಾಟ್ನಾ: ಮಕ್ಕಳು ವಂಚಿತ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ ನೀಡುವ ಅಮಿಷವೊಡ್ಡಿ ಯುವಕರನ್ನು ವಂಚಿಸಿದ್ದಕ್ಕಾಗಿ ಬಿಹಾರ ಪೊಲೀಸರು ಶನಿವಾರ ಮೂವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಇಂತಹ ಕೊಡುಗೆಯ ಭರವಸೆಗಳನ್ನು ನೀಡಿ, ಇದನ್ನು ನಂಬಿ ಬಂದವರಿಂದಲೇ ಹಣವನ್ನು ಸುಲಿಗೆ ಮಾಡುವ ದೊಡ್ಡ ಗ್ಯಾಂಗ್‌ನ ಭಾಗವಾಗಿದ್ದಾರೆಂದು ಶಂಕಿಸಲಾಗಿದೆ. ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು ಎಂದು ನವಾಡ ಡಿಎಸ್‌ಪಿ (ಪ್ರಧಾನ ಕಚೇರಿ) ಇಮ್ರಾನ್ ಪರ್ವೇಜ್ ತಿಳಿಸಿದರು.

ಸೈಬರ್ ಪೊಲೀಸ್ ಠಾಣೆಗೆ ಬಂದ ದೂರಿನ ಮೇರೆಗೆ ಬಲೆ ಬೀಸಲಾಯಿತು ಮತ್ತು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದು ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಿದರೆ ಗ್ರಾಹಕ ಶುಲ್ಕವಾಗಿ ಭಾರಿ ಮೊತ್ತವನ್ನು ನೀಡುವ ಭರವಸೆ ನೀಡಿ ಯುವಕರಿಗೆ ಆಮಿಷವೊಡ್ಡಿದ ಆರೋಪದ ಮೇಲೆ ಬಂಧಿಸಲಾಯಿತು. ಅವರು ನಾದ್ರಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು” ಎಂದು ಅವರು ಹೇಳಿದರು.

ಆರೋಪಿಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜಾಹೀರಾತುಗಳನ್ನು ಪೋಸ್ಟ್ ಮಾಡಿ, ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ದೊಡ್ಡ ಮೊತ್ತದ ಹಣವನ್ನು ನೀಡುವುದಾಗಿ ಭರವಸೆ ನೀಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ತಮ್ಮ ಈ ದಂಧೆಗೆ ಯುವಕರನ್ನು ಆಕರ್ಷಿಸಲು ಅವರು ವೆಬ್‌ಸೈಟ್ ಅನ್ನು ಸಹ ನಡೆಸುತ್ತಿದ್ದರು. ಯುವಕರಿಗೆ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ವಿಫಲವಾದರೂ ರೂ. 50,000 ಭರವಸೆ ನೀಡಲಾಗಿತ್ತು. ಅವರು ಮೊದಲು ತಮ್ಮ ಬಲಿಪಶುಗಳಿಂದ ಆಧಾರ್ ಕಾರ್ಡ್‌ಗೆ ಬೇಡಿಕೆ ಇಡುತ್ತಿದ್ದರು ಮತ್ತು ನಂತರ ನೋಂದಣಿ ಶುಲ್ಕವನ್ನು ಕೇಳುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

ಅವರು ‘All India Pregnant Job Service’ ಎಂಬ ವೆಬ್‌ಸೈಟ್ ಅನ್ನು ನಡೆಸುತ್ತಿದ್ದರು. ಅದರ ಮೂಲಕ ಅವರು ಸಂಭಾವ್ಯ ಗ್ರಾಹಕರನ್ನು ಆಕರ್ಷಿಸುತ್ತಿದ್ದರು. ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ಅವರು ಜನರಿಗೆ ರೂ. 5-10 ಲಕ್ಷ ನೀಡುವ, ವಿಫಲವಾದರೂ ಗ್ರಾಹಕರಿಗೆ ರೂ. 50,000 ಭರವಸೆ ನೀಡುತ್ತಿದ್ದರು ಎಂದು ಡಿಎಸ್‌ಪಿ ಹೇಳಿದರು.

ಆರಂಭದಲ್ಲಿ ಅವರು ತಮ್ಮ ಮೋಸದ ಜಾಲಕ್ಕೆ ಸಿಲುಕಿದ ಯುವಕರರಿಂದ ಪ್ಯಾನ್ ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಅವರು ನೋಂದಣಿ ಮತ್ತು ಹೋಟೆಲ್‌ಗಳ ಬುಕಿಂಗ್ ಹೆಸರಿನಲ್ಲಿ ಅವರಿಂದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಅವರು ಹೇಳಿದರು.

ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇಂಡಿಯಾ ಬಣ ವಿಸರ್ಜನೆಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ: ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...