Homeಮುಖಪುಟಮಣಿಪುರ| ಉಗ್ರಗಾಮಿ ಗುಂಪಿಗೆ ₹6 ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ 

ಮಣಿಪುರ| ಉಗ್ರಗಾಮಿ ಗುಂಪಿಗೆ ₹6 ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ 

- Advertisement -
- Advertisement -

ಮಣಿಪುರದ ಬಿಜೆಪಿ ನೇತೃತ್ವದ ಸರ್ಕಾರವು ಜುಲೈ 2024 ರಲ್ಲಿ ಕುಕಿ-ಝೋ ಉಗ್ರಗಾಮಿ ಗುಂಪಿಗೆ ₹6.27 ಕೋಟಿಗಳನ್ನು ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, “ನಾನು ಅದರ ಬಗ್ಗೆ ಏನೂ ಹೇಳಬೇಕಾಗಿಲ್ಲ” ಎಂದು ನೇರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಸಂಬಂಧಿತ ಅಧಿಕಾರಿಗಳು ಸೂಕ್ತ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.

ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಅವರು, “ಆ ಹಣವನ್ನು ಕಾರ್ಯಾಚರಣೆಗಳ ಅಮಾನತು ಒಪ್ಪಂದಕ್ಕೆ ಸಹಿ ಹಾಕಿದ ಹ್ಮಾರ್ ಪೀಪಲ್ಸ್ ಕನ್ವೆನ್ಷನ್ (ಡೆಮಾಕ್ರಟಿಕ್) ಸಂಘಟನೆಗೆ ನೀಡಲಾಗಿದೆ. ಆದರೂ, ರಾಜ್ಯ ಸರ್ಕಾರ ಫೆಬ್ರವರಿ 2023 ರಲ್ಲಿ ಒಪ್ಪಂದದಿಂದ ಹಿಂದೆ ಸರಿದಿತ್ತು” ಎಂದು ಶನಿವಾರ ಹೇಳಿದ್ದರು.

ಒಪ್ಪಂದದಲ್ಲಿ ನಿಗದಿಪಡಿಸಲಾದ ಷರತ್ತುಗಳ ಪ್ರಕಾರ, ಎಚ್‌ಪಿಸಿ-ಡಿ ಸದಸ್ಯರಿಗೆ ಮಣಿಪುರದಲ್ಲಿ ಎಲ್ಲಿಯಾದರೂ ಬಂದೂಕುಗಳಿಲ್ಲದೆ ಮುಕ್ತವಾಗಿ ಚಲಿಸಲು ಅವಕಾಶ ನೀಡಲಾಗುವುದು. ಭದ್ರತಾ ಪಡೆಗಳು ನಿಯಮಗಳು ಮತ್ತು ಷರತ್ತುಗಳನ್ನು ಉಲ್ಲಂಘಿಸದ ಹೊರತು ಅದರ ಸದಸ್ಯರ ವಿರುದ್ಧ ಯಾವುದೇ ಕಾರ್ಯಾಚರಣೆಯನ್ನು ಪ್ರಾರಂಭಿಸುವುದಿಲ್ಲ ಎಂದು ಮಾತುಕತೆಯಾಗಿದೆ.

“ಸಂಘರ್ಷದ ಉತ್ತುಂಗದಲ್ಲಿದ್ದಾಗ, ರಾಜ್ಯ ಸರ್ಕಾರವು ಜುಲೈ 2024 ರಲ್ಲಿ ಎಚ್‌ಪಿಸಿ-ಡಿ ಗೆ ಚೆಕ್ ಮೂಲಕ ₹6.27 ಕೋಟಿಗಳನ್ನು ನೀಡಿತು. ಆದರೂ ರಾಜ್ಯ ಸರ್ಕಾರವು ಒಪ್ಪಂದದಿಂದ ಹಿಂದೆ ಸರಿದಿದೆ ಎಂದು ಮೊದಲೇ ತಿಳಿಸಿತ್ತು” ಎಂದು ಮೇಘಚಂದ್ರ ಇಂಫಾಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಜನವರಿ 21, 2024 ರಂದು, ಬಿಜೆಪಿ ಶಾಸಕರು ಕುಕಿ-ಝೋ ಸಶಸ್ತ್ರ ಗುಂಪುಗಳೊಂದಿಗಿನ ಒಪ್ಪಂದವನ್ನು ಹಿಂತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಿದರು. ಅದೇ ರೀತಿ, ಫೆಬ್ರವರಿ 29, 2024 ರಂದು, ಮಣಿಪುರ ವಿಧಾನಸಭೆಯು ಕುಕಿ-ಝೋ ಉಗ್ರಗಾಮಿಗಳೊಂದಿಗಿನ ಒಪ್ಪಂದವನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಣಯವನ್ನು ಅಂಗೀಕರಿಸಿತು” ಎಂದು ಅವರು ಆರೋಪಿಸಿದರು.

ಒಪ್ಪಂದ ಹಿಂತೆಗೆದುಕೊಂಡಿದ್ದರೂ, ಬಿಡುಗಡೆ ಮಾಡಲಾಗುತ್ತಿರುವ ಹಣವು ಕೇಂದ್ರ ಸರ್ಕಾರದದ್ದಲ್ಲ, ರಾಜ್ಯ ಸರ್ಕಾರದದ್ದು ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಜುಲೈ 9, 2024 ರಂದು ಇಬ್ಬರು ಎಚ್‌ಪಿಸಿ-ಡಿ ಸದಸ್ಯರಿಗೆ ಚೆಕ್ ಮೂಲಕ ₹6.27 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮೇಘಚಂದ್ರ ಆರೋಪಿಸಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿರುವುದಾಗಿ ಅವರು ಪ್ರತಿಪಾದಿಸಿದರು. ಆದರೆ, ಸದನದ ನಾಯಕರು ಅಂತಹ ವಹಿವಾಟು ನಡೆದಿರುವುದನ್ನು ನಿರಾಕರಿಸಿದರು. “ಸದನದ ನಾಯಕರಾಗಿ ಮುಖ್ಯಮಂತ್ರಿಗಳು ರಾಜ್ಯ ವಿಧಾನಸಭೆಯನ್ನು ದಾರಿ ತಪ್ಪಿಸಿದ್ದಾರೆ ಎಂಬುದನ್ನು ಸಾಬೀತುಪಡಿಸುವ ವಿವರವಾದ ಪುರಾವೆಗಳನ್ನು ನಾನು ಪಡೆದುಕೊಂಡಿದ್ದೇನೆ” ಎಂದು ಅವರು ಆರೋಪಿಸಿದ್ದಾರೆ.


ಮಣಿಪುರದಲ್ಲಿ ಮತ್ತೆ ಅಶಾಂತಿ; 2 ಗ್ರಾಮಗಳಲ್ಲಿ ಕರ್ಫ್ಯೂ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...