Homeಕರ್ನಾಟಕಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ; ಸತ್ಯ ಬರೆಯೋಕೆ ಪ್ರಯತ್ನಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ; ಸತ್ಯ ಬರೆಯೋಕೆ ಪ್ರಯತ್ನಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ಎಲ್ಲ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ; ತಿದ್ದಿಕೊಳ್ಳುತ್ತೇನೆ. ಆದರೆ, ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್’ ಎಂದು ನಿಷ್ಠುರವಾಗಿ ಮಾತನಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

“ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು” ಎಂದು ಸಿಎಂ ವ್ಯಂಗ್ಯವಾಡಿದರು.

“ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ; ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ, ನೀವು ಜನರ ಧ್ವನಿಯಾಗಿ ಕೆಲಸ ಮಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಪ್ರಯತ್ನಿಸಿ ನೋಡೋಣ” ಎಂದರು.

“ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಡ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರು ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ, ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ವೋ” ಎಂದು ಪ್ರಶ್ನಿಸಿದರು.

“ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ” ಎಂದು ಸಲಹೆ ನೀಡಿದರು.

“ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ” ಎಂದು ಟೀಕಿಸಿದರು.

“ಬುದ್ದ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ. ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ” ಎಂದು ಹೇಳಿದರು.

ಇದನ್ನೂ ಓದಿ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಮಂಡನೆ – ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...