Homeಕರ್ನಾಟಕಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್...

ಬಾಬಾ ಬುಡಾನ್ | ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ತಿಳಿಸಲಿ: ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

- Advertisement -
- Advertisement -

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರದಲ್ಲಿ ನ್ಯಾಯಬದ್ಧವಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ಬಿಜೆಪಿ ಸೇರಿದಂತೆ ಹಿಂದಿನ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ದರ್ಗಾದ ವಿಚಾರಗಳ ಬಗ್ಗೆ ರಾಜ್ಯ ಸರಕಾರ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಸರಕಾರ ಪೂರಕ ದಾಖಲೆಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ತನ್ನ ನಿಲುವು ತಿಳಿಸಬೇಕು ಎಂದು ಸೈಯದ್ ಬುಡಾನ್ ಶಾ ಖಾದ್ರಿ ವಂಶಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಫಕ್ರುದ್ದೀನ್ ಶಾ ಖಾದ್ರಿ (ಅಜ್ಮತ್ ಪಾಷ) ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಲಾಭ ಪಡೆಯುವ ಕೆಲಸ ಮಾಡುತ್ತಿದ್ದರೆ, ಸಂಘಪರಿವಾರ ವಿವಾದ ಸೃಷ್ಟಿಸಿ ಕೋಮು ಸಾಮರಸ್ಯ ಹದಗೆಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಹೇಳಿದರು.

ಸಂಘಪರಿವಾರದವರು ಗುಹೆಯ ಒಳ ಭಾಗದಲ್ಲಿರುವ ಸೂಫಿ ಪಂಥದ ಗಾದಿ(ಪೀಠ), ಛಿಲ್ಲಾ(ಧ್ಯಾನ ಸ್ಥಳ), ಚಿರಾಗ್(ನಂದಾದೀಪ) ಮತ್ತು ಖಡಾವೆ(ಪಾದುಕೆ)ಗಳ ವಿಚಾರ ಮುಂದಿಟ್ಟುಕೊಂಡು ದೇಶದ ಮುಜರಾಯಿ ಇಲಾಖೆ ಅಧೀನದಲ್ಲಿರುವ ಮುಹಮ್ಮದನ್ ಸಂಸ್ಥೆಯ ಧಾರ್ಮಿಕ ಆಚರಣೆಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಈ ಸಂಸ್ಥೆಯ ವಿಚಾರದಲ್ಲಿ ಕೆಲ ಪಕ್ಷಗಳು ನಾವು ಅಲ್ಪಸಂಖ್ಯಾತರ ಪರ ಇದ್ದೇವೆ ಎನ್ನುತ್ತಿದ್ದರೂ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿವೆ. ಬಿಜೆಪಿ ಪಕ್ಷ ಈ ವಿಚಾರದಲ್ಲಿ ಹಿಂದೂಗಳ ಪರ ಎಂಬಂತೆ ಬಿಂಬಿಸಿಕೊಂಡು ರಾಜಕೀಯ ಲಾಭ ಪಡೆಯುವ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ಮುಹಮ್ಮದನ್ ಸಂಸ್ಥೆಯಲ್ಲಿನ ಸೂಫಿ ಪಂಥದ ಆಚರಣೆಗಳನ್ನು ತಡೆಯುವ ಹುನ್ನಾರಗಳು ಇತ್ತೀಚೆಗೆ ನಡೆಯುತ್ತಿವೆ. ಇದರ ವಿರುದ್ಧ ಸರಕಾರ ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳು ಮೇಲಿನ ದಾಖಲೆಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ನಮಗೆ ನ್ಯಾಯ ಒದಗಿಸಬೇಕು. ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿನ ಪೂಜೆ ಹಕ್ಕಿನ ಕುರಿತು 8 ವಾರಗಳ ಒಳಗೆ ತನ್ನ ನಿಲುವು ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದು, ಸರಕಾರ ಮೇಲಿನ ಸರಕಾರಿ ಆದೇಶ, ಮಹಾರಾಜರ ಕಾಲದ ಸರಕಾರಿ ಆದೇಶ ಹಾಗೂ ಗೆಜೆಟ್ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ನಮ್ಮೊಂದಿಗೆ ಚರ್ಚಿಸಿ ನ್ಯಾಯಾಲಯಕ್ಕೆ ಸೂಕ್ತ ನಿಲುವು ತಿಳಿಸಿ, ನ್ಯಾಯ ಒದಗಿಸಬೇಕು ಎಂದು ಶಾಖಾದ್ರಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೈಯದ್ ನಿಝಾಮುದ್ದೀನ್ ಖಾದ್ರಿ, ಸಲೀಂ ಮಲಿಕ್, ಅರ್ಬಾಝ್, ತನ್ವೀರ್ ಅಹ್ಮದ್, ಮುಹಮ್ಮದ್ ಅತೀಕ್ ಉಪಸ್ಥಿತರಿದ್ದರು.

……………………………………………………….

ತಾಲ್ಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಕಳೆದ ವರ್ಷ ಜನವರಿಯಲ್ಲಿ ಬಾಬಾ ಬುಡನ್ ವಂಶಸ್ಥ ಸಯ್ಯದ್ ಫಕ್ರುದ್ದೀನ್ ಷಾ ಖಾದ್ರಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ  ಕಲಿಮ ತಯ್ಯಿಬಿನ ಜಪ ನಡಿಸಿ, ಪ್ರತಿವರ್ಷದಂತೆ ಹರಕೆಯ ರೀತಿಯಲ್ಲಿ ಝಿಕ್ರ್ ಎ ಕಲಿಮ ಎ ಫಾತೀಹ ನಡೆಸಿದ್ದರು. ಈ ವೇಳೆ ತಮ್ಮ ಪೂರ್ವಜರ ಇತಿಹಾಸ ಹಂಚಿಕೊಂಡ ಅವರು, ದರ್ಗಾದ ವ್ಯವಸ್ಥಾಪನಾ ಸಮಿತಿ ರಚನೆ ಆದ ಬಳಿಕ ಅಲ್ಲಿರುವ ಪವಿತ್ರ ಕಲಿಮ ತಯ್ಯಿಬವನ್ನು ಮರೆಮಾಚಿಸಿ ಆ ಶ್ಲೋಕದ ಮೇಲೆ ಮುಜಾವರ್ ಹಾಗೂ ಅರ್ಚಕರಿಗೆ ಮಾತ್ರ ಅವಕಾಶವೆಂದು ಬರೆದು ಶ್ಲೋಕವನ್ನು ರಟ್ಟಿನ ತುಂಡಿನಿಂದ ಮರೆಮಾಚಲಾಗಿತ್ತು.

ಐತಿಹಾಸಿಕ ಶ್ಲೋಕದ ಪ್ರಕಾರ ದರ್ಗಾಕ್ಕೆ ಸಂಬಂಧಪಟ್ಟ ಗುರುಗಳಾದ ಸಜ್ಜಾದ್ ಎ ನಶೀನ್ ಹಾಗೂ ಶಾ ಖಾದ್ರಿ ಮತ್ತು ನಂತರ ಮುಜಾವರ್ ಅವರಿಗೆ ಪ್ರವೇಶಕ್ಕೆ ಅವಕಾಶವಿತ್ತು. ಈಚೆಗೆ ಹಲವಾರು ವಿರೋಧದ ನಡುವೆ ನೇಮಕವಾದ ಅರ್ಚಕರು ಪವಿತ್ರವಾದ ಕಲಿಮ ತಯ್ಯಿಬವನ್ನೂ ಒಪ್ಪಿ ಒಳಗಡೆ ಪ್ರವೇಶ ಮಾಡಿದ್ದಾರೆಂದು ನಾವು ನಂಬಿದ್ದೇವೆ ಎಂದಿದ್ದರು.

ದರ್ಗಾದ ಸಜ್ಜಾದ್ ಎ ನಶೀನ್(ಪೀಠಾಧಿಪತಿ) ಎಂದರೇನು? ಶಾ ಖಾದ್ರಿ (ಪೀಠಾಧೀಶರು) ಎಂದರೇನು? ಎಂಬುದನ್ನು ಮುಜರಾಯಿ ಇಲಾಖೆ ಗೆಜೆಟ್‌ನಲ್ಲಿ ಸ್ಪಷ್ಟವಾಗಿ ವಿವರಿಸಿದೆ. ಅದರಂತೆ ಸಜ್ಜಾದ್ ಎ ನಶೀನ್ ಹಜರತ್ ಸಯ್ಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಅವರಿಗೂ ಇಲಾಖೆ ಗೌರವ ನೀಡಬೇಕು. ಜಿಕರ್ ಫಾತೀಹಾ ನಡೆಸಲು ಅವಕಾಶ ಮಾಡಿ ಕೊಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...