Homeಮುಖಪುಟಅಸ್ಸಾಂ | ಅಳಿವಿನಂಚಿನಲ್ಲಿರುವ 'ಹೂಲಾಕ್ ಗಿಬ್ಬನ್' ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

- Advertisement -
- Advertisement -

ಅಸ್ಸಾಂನ ಜೋರ್ಹತ್ ಜಿಲ್ಲೆಯ ‘ಹೊಲ್ಲೊಂಗಪರ್ ಗಿಬ್ಬನ್ ವನ್ಯಜೀವಿ ಅಭಯಾರಣ್ಯ’ದ ಪರಿಸರ ಸೂಕ್ಷ್ಮ ವಲಯದಲ್ಲಿ ವೇದಾಂತ ಗ್ರೂಪ್‌ನ ಕೈರ್ನ್ ತೈಲ ಮತ್ತು ಅನಿಲ ಪರಿಶೋಧನಾ ಕೊರೆಯುವಿಕೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ ಎಂದು ಈಸ್ಟ್‌ಮೋಜೊ ಭಾನುವಾರ (ಜ.12) ವರದಿ ಮಾಡಿದೆ.

ಡಿಸೆಂಬರ್ 21ರಂದು ನಡೆದ ಮಂಡಳಿಯ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

“ರಾಷ್ಟ್ರೀಯ ಹಿತಾಸಕ್ತಿ”ಯ ಆಧಾರದ ಮೇಲೆ ಅಸ್ಸಾಂನ ಅರಣ್ಯ ಇಲಾಖೆಯು ಆಗಸ್ಟ್ 2023 ರಲ್ಲಿ ಯೋಜನೆಗೆ ನಿರಾಪೇಕ್ಷಣ ನೀಡಿತ್ತು ಎಂದು ಪಿಟಿಐ ವರದಿ ಮಾಡಿದೆ.

ಮಾನವ ವಾಸಸ್ಥಳದ ಪ್ರದೇಶಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳಂತಹ ಸಂರಕ್ಷಿತ ಪ್ರದೇಶಗಳ ನಡುವಿನ ಬಫರ್ ವಲಯಗಳು ಅಥವಾ “ಶಾಕ್ ಅಬ್ಸರ್‌ವರ್ಸ್‌’ಗಳನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪರಿಸರ-ಸೂಕ್ಷ್ಮ ವಲಯಗಳು ಎಂದು ಘೋಷಿಸಲಾಗಿದೆ.

ಹೊಲ್ಲೊಂಗಪರ್ ಅಭಯಾರಣ್ಯವು 21 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದ್ದು, ಅದರ ಪರಿಸರ ಸೂಕ್ಷ್ಮ ವಲಯವು 264.9 ಚದರ ಕಿ.ಮೀ.ಗಿಂತಲೂ ಹೆಚ್ಚು ವಿಸ್ತರಿಸಿದೆ. ಡಿಸೋಯ್ ಕಣಿವೆಯ ಮೀಸಲು ಅರಣ್ಯ ಮತ್ತು ನಾಗಾಲ್ಯಾಂಡ್‌ನ ಅರಣ್ಯ ಪ್ರದೇಶಗಳೊಂದಿಗೆ ಇದು ಸಂಪರ್ಕ ಹೊಂದಿದೆ. ಈ ಪ್ರದೇಶವು ಏಳು ಪ್ರೈಮೇಟ್ ಪ್ರಭೇದಗಳಿಗೆ ನೆಲೆಯಾಗಿದೆ, ಇದರಲ್ಲಿ ಭಾರತದ ಏಕೈಕ ಮಂಗವಾದ ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಸೇರಿದೆ.

ಹೊಲ್ಲೊಂಗಪರ್ ಅಭಯಾರಣ್ಯ ಹೊರಗೆ ತೈಲ ಮತ್ತು ಅನಿಲ ಪರಿಶೋಧನೆಗೆ 4.5 ಹೆಕ್ಟೇರ್ ಭೂಮಿ ಬೇಕಾಗುತ್ತದೆ. ಇದರಲ್ಲಿ 1.4 ಹೆಕ್ಟೇರ್ ಬಾವಿ ಮತ್ತು 3 ಹೆಕ್ಟೇರ್ ಪ್ರವೇಶ ರಸ್ತೆ ಸೇರಿವೆ. ಇವು ಸಂರಕ್ಷಿತ ಪ್ರದೇಶದಿಂದ 13 ಕಿ.ಮೀ ದೂರದಲ್ಲಿವೆ.

ನವೆಂಬರ್ 15ರಂದು ಸ್ಥಳ ಪರಿಶೀಲನೆ ನಡೆಸಿದ ನಂತರ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ಅಸ್ಸಾಂನ ಅರಣ್ಯ ಇಲಾಖೆಯ ಅಧಿಕಾರಿಗಳು ಹೀಗೆ ತೀರ್ಮಾನಿಸಿದರು : “ಈ ಅಭಯಾರಣ್ಯವು ಹೂಲಾಕ್ ಗಿಬ್ಬನ್‌ನ ಪ್ರಮುಖ ಆವಾಸಸ್ಥಾನವಾಗಿದೆ. ಪರಿಶೋಧನಾ ಕೊರೆಯುವಿಕೆಯು ಹೆಚ್ಚಿನ ಹಾನಿಯನ್ನುಂಟುಮಾಡದಿರಬಹುದು, ಆದರೆ ವಾಣಿಜ್ಯ ಕೊರೆಯುವಿಕೆಯನ್ನು ಅನುಮತಿಸಲಾಗುವುದಿಲ್ಲ.”

ಈ ಯೋಜನೆಯು ಕಟ್ಟುನಿಟ್ಟಾಗಿ ಪರಿಶೋಧನಾತ್ಮಕವಾಗಿದ್ದು, ಹೈಡ್ರೋಕಾರ್ಬನ್ ನಿಕ್ಷೇಪಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದು ವೇದಾಂತ ಗ್ರೂಪ್ ಅಧಿಕಾರಿಗಳಿಗೆ ಭರವಸೆ ನೀಡಿದೆ. ಪರಿಸರ ಸೂಕ್ಷ್ಮ ವಲಯದ ಹೊರಗೆ ಯಾವುದೇ ನಿಕ್ಷೇಪಗಳು ಪತ್ತೆಯಾದರೆ, ಮಾತ್ರ ಹೊರತೆಗೆಯುವಿಕೆಯನ್ನು ಕೈಗೊಳ್ಳಲು ಕಂಪನಿಯು ಬದ್ಧವಾಗಿದೆ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಈ ಅಭಯಾರಣ್ಯವು ಮಾನವ ಚಟುವಟಿಕೆಗಳಿಂದ ಹೆಚ್ಚುವರಿ ಒತ್ತಡಗಳನ್ನು ಎದುರಿಸುತ್ತಿದೆ, ಅದರಲ್ಲಿ ಅದರ ಮೂಲಕ ಹಾದುಹೋಗುವ ರೈಲು ಮಾರ್ಗವೂ ಸೇರಿದೆ. ಈ ಮಾರ್ಗವನ್ನು ವಿದ್ಯುದ್ದೀಕರಿಸುವ ಯೋಜನೆಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಸಹ ಶಿಫಾರಸು ಮಾಡಿದೆ.

‘ಹೊಸ ಕೃಷಿ ಮಾರುಕಟ್ಟೆ ನೀತಿ’ಗೆ ವಿರೋಧ; ಕರಡಿನ ಪ್ರತಿ ಸುಟ್ಟು ಪಂಜಾಬ್ ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...