Homeಮುಖಪುಟಅಸ್ಸಾಂ | ಅಳಿವಿನಂಚಿನಲ್ಲಿರುವ 'ಹೂಲಾಕ್ ಗಿಬ್ಬನ್' ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

ಅಸ್ಸಾಂ | ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಆವಾಸಸ್ಥಾನದಲ್ಲಿ ತೈಲ, ಅನಿಲ ಪರಿಶೋಧನೆಗೆ ಕೇಂದ್ರ ಅನುಮತಿ

- Advertisement -
- Advertisement -

ಅಸ್ಸಾಂನ ಜೋರ್ಹತ್ ಜಿಲ್ಲೆಯ ‘ಹೊಲ್ಲೊಂಗಪರ್ ಗಿಬ್ಬನ್ ವನ್ಯಜೀವಿ ಅಭಯಾರಣ್ಯ’ದ ಪರಿಸರ ಸೂಕ್ಷ್ಮ ವಲಯದಲ್ಲಿ ವೇದಾಂತ ಗ್ರೂಪ್‌ನ ಕೈರ್ನ್ ತೈಲ ಮತ್ತು ಅನಿಲ ಪರಿಶೋಧನಾ ಕೊರೆಯುವಿಕೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ ಎಂದು ಈಸ್ಟ್‌ಮೋಜೊ ಭಾನುವಾರ (ಜ.12) ವರದಿ ಮಾಡಿದೆ.

ಡಿಸೆಂಬರ್ 21ರಂದು ನಡೆದ ಮಂಡಳಿಯ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

“ರಾಷ್ಟ್ರೀಯ ಹಿತಾಸಕ್ತಿ”ಯ ಆಧಾರದ ಮೇಲೆ ಅಸ್ಸಾಂನ ಅರಣ್ಯ ಇಲಾಖೆಯು ಆಗಸ್ಟ್ 2023 ರಲ್ಲಿ ಯೋಜನೆಗೆ ನಿರಾಪೇಕ್ಷಣ ನೀಡಿತ್ತು ಎಂದು ಪಿಟಿಐ ವರದಿ ಮಾಡಿದೆ.

ಮಾನವ ವಾಸಸ್ಥಳದ ಪ್ರದೇಶಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳಂತಹ ಸಂರಕ್ಷಿತ ಪ್ರದೇಶಗಳ ನಡುವಿನ ಬಫರ್ ವಲಯಗಳು ಅಥವಾ “ಶಾಕ್ ಅಬ್ಸರ್‌ವರ್ಸ್‌’ಗಳನ್ನು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪರಿಸರ-ಸೂಕ್ಷ್ಮ ವಲಯಗಳು ಎಂದು ಘೋಷಿಸಲಾಗಿದೆ.

ಹೊಲ್ಲೊಂಗಪರ್ ಅಭಯಾರಣ್ಯವು 21 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದ್ದು, ಅದರ ಪರಿಸರ ಸೂಕ್ಷ್ಮ ವಲಯವು 264.9 ಚದರ ಕಿ.ಮೀ.ಗಿಂತಲೂ ಹೆಚ್ಚು ವಿಸ್ತರಿಸಿದೆ. ಡಿಸೋಯ್ ಕಣಿವೆಯ ಮೀಸಲು ಅರಣ್ಯ ಮತ್ತು ನಾಗಾಲ್ಯಾಂಡ್‌ನ ಅರಣ್ಯ ಪ್ರದೇಶಗಳೊಂದಿಗೆ ಇದು ಸಂಪರ್ಕ ಹೊಂದಿದೆ. ಈ ಪ್ರದೇಶವು ಏಳು ಪ್ರೈಮೇಟ್ ಪ್ರಭೇದಗಳಿಗೆ ನೆಲೆಯಾಗಿದೆ, ಇದರಲ್ಲಿ ಭಾರತದ ಏಕೈಕ ಮಂಗವಾದ ಅಳಿವಿನಂಚಿನಲ್ಲಿರುವ ‘ಹೂಲಾಕ್ ಗಿಬ್ಬನ್’ ಸೇರಿದೆ.

ಹೊಲ್ಲೊಂಗಪರ್ ಅಭಯಾರಣ್ಯ ಹೊರಗೆ ತೈಲ ಮತ್ತು ಅನಿಲ ಪರಿಶೋಧನೆಗೆ 4.5 ಹೆಕ್ಟೇರ್ ಭೂಮಿ ಬೇಕಾಗುತ್ತದೆ. ಇದರಲ್ಲಿ 1.4 ಹೆಕ್ಟೇರ್ ಬಾವಿ ಮತ್ತು 3 ಹೆಕ್ಟೇರ್ ಪ್ರವೇಶ ರಸ್ತೆ ಸೇರಿವೆ. ಇವು ಸಂರಕ್ಷಿತ ಪ್ರದೇಶದಿಂದ 13 ಕಿ.ಮೀ ದೂರದಲ್ಲಿವೆ.

ನವೆಂಬರ್ 15ರಂದು ಸ್ಥಳ ಪರಿಶೀಲನೆ ನಡೆಸಿದ ನಂತರ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ಅಸ್ಸಾಂನ ಅರಣ್ಯ ಇಲಾಖೆಯ ಅಧಿಕಾರಿಗಳು ಹೀಗೆ ತೀರ್ಮಾನಿಸಿದರು : “ಈ ಅಭಯಾರಣ್ಯವು ಹೂಲಾಕ್ ಗಿಬ್ಬನ್‌ನ ಪ್ರಮುಖ ಆವಾಸಸ್ಥಾನವಾಗಿದೆ. ಪರಿಶೋಧನಾ ಕೊರೆಯುವಿಕೆಯು ಹೆಚ್ಚಿನ ಹಾನಿಯನ್ನುಂಟುಮಾಡದಿರಬಹುದು, ಆದರೆ ವಾಣಿಜ್ಯ ಕೊರೆಯುವಿಕೆಯನ್ನು ಅನುಮತಿಸಲಾಗುವುದಿಲ್ಲ.”

ಈ ಯೋಜನೆಯು ಕಟ್ಟುನಿಟ್ಟಾಗಿ ಪರಿಶೋಧನಾತ್ಮಕವಾಗಿದ್ದು, ಹೈಡ್ರೋಕಾರ್ಬನ್ ನಿಕ್ಷೇಪಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದು ವೇದಾಂತ ಗ್ರೂಪ್ ಅಧಿಕಾರಿಗಳಿಗೆ ಭರವಸೆ ನೀಡಿದೆ. ಪರಿಸರ ಸೂಕ್ಷ್ಮ ವಲಯದ ಹೊರಗೆ ಯಾವುದೇ ನಿಕ್ಷೇಪಗಳು ಪತ್ತೆಯಾದರೆ, ಮಾತ್ರ ಹೊರತೆಗೆಯುವಿಕೆಯನ್ನು ಕೈಗೊಳ್ಳಲು ಕಂಪನಿಯು ಬದ್ಧವಾಗಿದೆ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಈ ಅಭಯಾರಣ್ಯವು ಮಾನವ ಚಟುವಟಿಕೆಗಳಿಂದ ಹೆಚ್ಚುವರಿ ಒತ್ತಡಗಳನ್ನು ಎದುರಿಸುತ್ತಿದೆ, ಅದರಲ್ಲಿ ಅದರ ಮೂಲಕ ಹಾದುಹೋಗುವ ರೈಲು ಮಾರ್ಗವೂ ಸೇರಿದೆ. ಈ ಮಾರ್ಗವನ್ನು ವಿದ್ಯುದ್ದೀಕರಿಸುವ ಯೋಜನೆಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಸಹ ಶಿಫಾರಸು ಮಾಡಿದೆ.

‘ಹೊಸ ಕೃಷಿ ಮಾರುಕಟ್ಟೆ ನೀತಿ’ಗೆ ವಿರೋಧ; ಕರಡಿನ ಪ್ರತಿ ಸುಟ್ಟು ಪಂಜಾಬ್ ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...