Homeಮುಖಪುಟಅವಧಿ ಮೀರಿದ ಔಷಧ ಬಳಕೆ - 1 ಸಾವು; ಮೂವರು ಬಾಣಂತಿಯರು ಗಂಭೀರ

ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

- Advertisement -
- Advertisement -

ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಇಂಟ್ರಾವೆನಸ್ ದ್ರವಗಳನ್ನು ನೀಡಿದ್ದರಿಂದ ಹೆರಿಗೆಯ ನಂತರ ತೀವ್ರವಾಗಿ ಅಸ್ವಸ್ಥರಾಗಿದ್ದ ಮೂವರು ಮಹಿಳೆಯರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಭಾನುವಾರ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ಸ್ಥಳಾಂತರಿಸಲು ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತರ ಮಹಿಳೆಯ ಸ್ಥಿತಿ ಸುಧಾರಿಸಿದ್ದು, ಮಿಡ್ನಾಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (MMCH) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಅವಧಿ ಮೀರಿದ ಔಷಧ

“ಪ್ರಸ್ತುತ ಜೀವರಕ್ಷಕ ವ್ಯವಸ್ಥೆಗಳಲ್ಲಿರುವ ಮೂವರು ಮಹಿಳೆಯರಿಗೆ ಬಹು ತೊಂದರೆಗಳು ಉಂಟಾಗಿವೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೊಲ್ಕತ್ತಾದ SSKM ಆಸ್ಪತ್ರೆಯ ICCU ಗೆ ದಾಖಲಿಸಲು ನಾವು ನಿರ್ಧರಿಸಿದ್ದೇವೆ” ಎಂದು ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. ಅವಧಿ ಮೀರಿದ ಔಷಧ

MMCH ನಲ್ಲಿ ಹೆರಿಗೆಯ ನಂತರ ಒಬ್ಬ ಮಹಿಳೆ ಸಾವನ್ನಪ್ಪಿದ್ದು ಇತರ ನಾಲ್ವರು ಮಹಿಳೆಯರು ಗಂಭೀರ ಸ್ಥಿತಿಯಲ್ಲಿದ್ದರು ಎಂದು ಹೇಳಲಾಗಿದ್ದು, ಈ ವಿಷಯದ ತನಿಖೆಗಾಗಿ ಆರೋಗ್ಯ ಇಲಾಖೆಯು 13 ಸದಸ್ಯರ ಸಮಿತಿಯನ್ನು ರಚಿಸಿದೆ. ಪಶ್ಚಿಮ ಮೇದಿನಿಪುರದಿಂದ ಅವರನ್ನು ಸ್ಥಳಾಂತರ ಮಾಡಲು ರಾಜ್ಯ ಸರ್ಕಾರವು ‘ಗ್ರೀರ್ ಕಾರಿಡಾರ್’ ರಚಿಸಲು ಆದೇಶಿಸಿದ್ದು, ಈ ಬಗ್ಗೆ ಎಲ್ಲಾ ಟೋಲ್ ಪ್ಲಾಜಾಗಳಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೂವರನ್ನು ವಿವಿಧ ರೀತಿಯ ಬೆಂಬಲ ವ್ಯವಸ್ಥೆಗಳನ್ನು ಹೊಂದಿರುವ ALS ಆಂಬ್ಯುಲೆನ್ಸ್‌ಗಳಲ್ಲಿ ನಗರಕ್ಕೆ ಕರೆತರಲಾಗುವುದು. ಈ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ತಿಳಿಸಲಾಗಿದೆ,” ಎಂದು ರಾಜ್ಯದ ಆರೋಗ್ಯ ಅಧಿಕಾರಿ ಹೇಳಿದ್ದಾರೆ, ಮೂವರು ರೋಗಿಗಳಿಗೆ ಹಾಸಿಗೆಗಳನ್ನು ಸಿದ್ಧವಾಗಿಡಲಾಗಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ರೋಗಿಗಳನ್ನು ಕೊಲ್ಕತ್ತಾದ SSKM ಆಸ್ಪತ್ರೆಗೆ ಸ್ಥಳಾಂತರಿಸುವ ನಿರ್ಧಾರದ ಬಗ್ಗೆ ಅಧಿಕಾರಿಗಳು ತಮ್ಮೊಂದಿಗೆ ಸಮಾಲೋಚಿಸಲಿಲ್ಲ ಎಂದು ಮೂವರು ಮಹಿಳೆಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

MMCH ಅಲ್ಲಿರುವ ವೈದ್ಯಕೀಯ ಮಂಡಳಿಯು ರೋಗಿಗಳ ಪ್ರಸ್ತುತ ಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದ್ದು, ಅವರನ್ನು ಕೋಲ್ಕತ್ತಾಗೆ ಸ್ಥಳಾಂತರಿಸಲು “ಮುಂದುವರಿಯಲು” ಅನುಮತಿ ನೀಡುತ್ತಿದೆ. “ಮೂವರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಮೇದಿನಿಪುರದಿಂದ ಕೋಲ್ಕತ್ತಾಗೆ ಪ್ರಯಾಣಿಸುವ ಒತ್ತಡವನ್ನು ಅವರು ನಿಭಾಯಿಸಲು ಸಾಧ್ಯವಾಗುತ್ತದೆಯೇ ಎಂದು ವೈದ್ಯಕೀಯ ಮಂಡಳಿಯು ಮೌಲ್ಯಮಾಪನ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

MMCH ಅಲ್ಲಿ ನಡೆದ ಅಪಘಾತದ ಕುರಿತು ತಮ್ಮ ಸಂಶೋಧನೆಗಳ ಕುರಿತು ಸಮಿತಿಯು ಸೋಮವಾರ ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಎನ್.ಎಸ್. ನಿಗಮ್ ಹೇಳಿದ್ದಾರೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು MMCH ಪ್ರಾಂಶುಪಾಲರು ಭಾನುವಾರ SSKM ನಲ್ಲಿ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ಈ ವಿಷಯದ ಬಗ್ಗೆ ನಾವು ವಿವರವಾದ ಚರ್ಚೆ ನಡೆಸಿದ್ದೇವೆ. ಅವರು (ಸಮಿತಿ) ನಾಳೆ ಅಂತಿಮ ವರದಿಯನ್ನು ನಮಗೆ ಸಲ್ಲಿಸಲಿದ್ದಾರೆ ಮತ್ತು ನಂತರ ಮುಂದಿನ ಕ್ರಮಗಳನ್ನು ನಿರ್ಧರಿಸಲಾಗುವುದು. ಮೂವರು ಮಹಿಳೆಯರ ಆರೋಗ್ಯ ಸ್ಥಿತಿಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ” ಎಂದು ನಿಗಮ್ ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ವಿಶೇಷ ಕರ್ತವ್ಯ ಅಧಿಕಾರಿ ಅನಿರುದ್ಧ ನಿಯೋಗಿ, ನೀಡಲಾದ ರಿಂಗರ್ಸ್ ಲ್ಯಾಕ್ಟೇಟ್ (ಆರ್‌ಎಲ್) ಕಲ್ಮಶಗಳನ್ನು ಹೊಂದಿರಬಹುದು, ಆದಾಗ್ಯೂ, ಅದನ್ನು ಔಷಧ ನಿಯಂತ್ರಣ ಅಧಿಕಾರಿಗಳು ಪರೀಕ್ಷಿಸಬೇಕಾಗಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಿಪಿಐ(ಎಂ)ನ ಯುವ ಮತ್ತು ವಿದ್ಯಾರ್ಥಿ ಘಟಕಗಳಾದ ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಎಂಎಂಸಿಎಚ್ ಹೊರಗೆ ಪ್ರತಿಭಟನೆ ನಡೆಸಿವೆ. ಪ್ರತಿಭಟನಾರ್ಥವಾಗಿ ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಕಾರ್ಯಕರ್ತರು ಅಲ್ಲಿ ಸ್ವಲ್ಪ ಸಮಯದವರೆಗೆ ರಸ್ತೆ ತಡೆ ನಡೆಸಿದ್ದಾರೆ.

ಘಟನೆಗೆ ಪಶ್ಚಿಮ ಬಂಗಾಳ ಸರ್ಕಾರವೇ ಕಾರಣ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದ್ದು, ಆರೋಗ್ಯ ಸಚಿವೆಯಾಗಿಯೂ ಸೇವೆ ಸಲ್ಲಿಸುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ವಿವರಣೆ ಕೋರಿದೆ. ಈ ದುರ್ಘಟನೆಗೆ ರಾಜ್ಯ ಆರೋಗ್ಯ ಇಲಾಖೆಯ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶುಭಂಕರ್ ಸರ್ಕಾರ್ ಹೇಳಿದ್ದಾರೆ, ಘಟನೆಯನ್ನು ಪ್ರತಿಭಟಿಸಿ ಪಕ್ಷವು ಸೋಮವಾರ ಸ್ವಾಸ್ಥ್ಯ ಭವನದ “ಘೇರಾವ್” ಆಯೋಜಿಸುವುದಾಗಿ ಘೋಷಿಸಿದೆ.

ಇದನ್ನೂಓದಿ:  ಮೈಸೂರು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಹೆಚ್ಚಳ – ಎಐಡಿಎಸ್ಓ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಹೆಚ್ಚಳ – ಎಐಡಿಎಸ್ಓ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...