Homeಚಳವಳಿಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ಛತ್ತೀಸ್‌ಗಢ ಬಿಜೆಪಿ ಸರ್ಕಾರದಿಂದ 3 ಸಾವಿರ ಶಿಕ್ಷಕರ ವಜಾ

ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವ ಶಿಕ್ಷಕಿಯರು

- Advertisement -
- Advertisement -

ಛತ್ತೀಸ್‌ಗಢದಲ್ಲಿ ಶಿಕ್ಷಕರ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ವಯನಾಡ್‌ನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಶಿಕ್ಷಕರು ರಸ್ತೆಯಲ್ಲೆ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರತಿಭಟಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಛತ್ತೀಸ್‌ಗಢ ಬಿಜೆಪಿ

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಮತ್ತು ಇತ್ತೀಚೆಗೆ 3,000 ಶಿಕ್ಷಕರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ವೀಡಿಯೊದಲ್ಲಿ, ಮಹಿಳೆಯರು ಚಳಿಯಲ್ಲಿಯೂ ರಸ್ತೆಯಲ್ಲಿ ಮಲಗಿ ತಮ್ಮ ಉದ್ಯೋಗಗಳನ್ನು ಉಳಿಸುವಂತೆ ಸರ್ಕಾರವನ್ನು ಬೇಡಿಕೊಳ್ಳುವುದನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ ಗಾಂಧಿ, ಛತ್ತೀಸ್‌ಗಢದ ಈ ವೀಡಿಯೊ ದೇಶದ ಯುವಜನರ ದುಃಸ್ಥಿತಿಗೆ ಒಂದು ಸಣ್ಣ ಉದಾಹರಣೆಯಾಗಿದೆ. ರಾಜ್ಯದಲ್ಲಿ 33 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಸರ್ಕಾರ 3 ಸಾವಿರ ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಹೇಳಿದ್ದಾರೆ.

“ಈ ಹುಡುಗಿಯರು ಈ ಕಠಿಣ ಚಳಿಯಲ್ಲಿ ರಸ್ತೆಯಲ್ಲಿ ಮಲಗಿ ಉದ್ಯೋಗಕ್ಕಾಗಿ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಇಂದು, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಛತ್ತೀಸ್‌ಗಢ ಸೇರಿದಂತೆ ಪ್ರತಿಯೊಂದು ರಾಜ್ಯದಿಂದ ಯುವಕರು ಬಿಜೆಪಿಯ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಬಿಜೆಪಿ ಇಡೀ ದೇಶದ ಯುವಕರ ಭವಿಷ್ಯವನ್ನು ಕತ್ತಲೆಗೆ ತಳ್ಳಿದೆ” ಎಂದು ಪ್ರಿಯಾಂಕ ಹೇಳಿದ್ದಾರೆ. ಛತ್ತೀಸ್‌ಗಢ ಬಿಜೆಪಿ

 

ರಾಜ್ಯ ಸರ್ಕಾರವು ಇತ್ತಿಚೆಗೆ ಬಿ.ಇಡಿ ಪದವಿ ಪಡೆದ ಸುಮಾರು 2900 ಸಹಾಯಕ ಶಿಕ್ಷಕರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿದೆ. ಇದನ್ನು ವಿರೋಧಿಸಿ ಗುರುವಾರ ರಾಜ್ಯ ಬಿಜೆಪಿ ಕಚೇರಿಯ ಹೊರಗೆ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 30 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದಾಗ್ಯೂ, ಪೊಲೀಸರ ಕ್ರಮದಿಂದ ವಿಚಲಿತರಾಗದ ಶಿಕ್ಷಕರು, ನ್ಯಾಯಕ್ಕಾಗಿ ನಯಾ ರಾಯ್‌ಪುರದ ಟುಟಾದಲ್ಲಿ ತಮ್ಮ ಆಂದೋಲನವನ್ನು ಮುಂದುವರೆಸಿದ್ದಾರೆ.

“ನೀವು ನಮಗೆ ಕೆಲಸ ನೀಡಲು ಸಾಧ್ಯವಾಗದಿದ್ದರೆ, ನಮಗೆ ದಯಾಮರಣ ನೀಡಿ” ಪ್ರತಿಭಟನಾಕಾರರು ಅಂದು ಆಗ್ರಹಿಸಿದ್ದರು. ತಮ್ಮನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗಿದೆ ಮತ್ತು ತಿಂಗಳುಗಳಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರೂ, ನಂತರ ಹಠಾತ್ತನೆ ವಜಾಗೊಳಿಸಲಾಗಿದೆ ಎಂದು ಅವರು ಹೇಳಿದ್ದ, ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿದ್ದರು.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...