Homeಮುಖಪುಟಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

- Advertisement -
- Advertisement -

ಪದ್ಮಾವತಿ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ. ಸ್ಯಾಂಡಲ್‍ವುಡ್ ಅಂಗಳಲ್ಲಿ ಒಳ್ಳೆ ನೇಮು ಫೇಮು ಗಿಟ್ಟಿಸಿಕೊಂಡಿದ್ದ ರಮ್ಯಾ, ರಾಜ್ಯಭಾರ ಮಾಡೋ ಮನಸ್ಸಾಗಿ ಚಿತ್ರರಂಗಕ್ಕೆ ಗುಡ್‍ಬೈ ಹೇಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಎಂಟ್ರಿಯಲ್ಲೇ ಜಯಭೇರಿ ಬಾರಿಸಿದ ರಮ್ಯಾಗೆ ಆರು ತಿಂಗಳಷ್ಟೇ ರಾಜಕೀಯ ಅಧಿಕಾರ ಅನುಭವಿಸೋ ಚಾನ್ಸ್ ಸಿಕ್ಕಿದ್ದು. ಎರಡನೇ ಇನ್ನಿಂಗ್ಸ್‍ನಲ್ಲಿ ಸೋಲುಂಡ ಮೋಹಕ ತಾರೆ ರಾತ್ರೋರಾತ್ರಿ ಲಂಡನ್‍ಗೆ ಹಾರಿದರು. ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷೆ ಪಟ್ಟ ಗಿಟ್ಟಿಸಿಕೊಂಡು ಕಾಂಟ್ರೋವರ್ಸಿ ಪೋಸ್ಟ್ ಮೂಲಕ ಆಗಾಗ್ಗೆ ಟ್ರೋಲ್ ಆಗುತ್ತಿದ್ದ ರಮ್ಯಾ ‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲರು’ ಎಂಬಂತೆ ಐಟಿ ಸೆಲ್‍ಗೂ ಗುಡ್‍ಬೈ ಹೇಳಿ ನಾಪತ್ತೆಯಾಗಿದ್ದರು. ರಾಜಕೀಯ ಜಂಜಾಟಕ್ಕಿಂತ ಸಿನಿಮಾ ಮಾಡ್ಕೊಂಡ್, ಅಭಿಮಾನಿಗಳಿಗೆ ಆಟೋಗ್ರಾಫ್ ಹಾಕೊಂಡ್ ಇರೋದೆ ವಾಸಿ ಅನ್ನೋದನ್ನ ಅರಿತುಕೊಂಡು ಈಗಲೂ ಸಿನಿಮಾ ಆಫರ್ ಬರ್ತಾಯಿವೆ, ಸಿನಿಮಾ ಮಾಡ್ತಿನಿ ಅಂತ ಹೇಳ್ತಿದ್ದಾರೆ. ಸದ್ಯಕ್ಕೆ ಈಗಾಗಲೇ ಸುಮಾರು ವರ್ಷಗಳ ಹಿಂದೆ ಚಿತ್ರೀಕರಣಗೊಂಡಿದ್ದ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರೋ ‘ದಿಲ್ ಕಾ ರಾಜಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅಂತೂ ಆಫ್ಟರ್ ಲಾಂಗ್ ಟೈಮ್ ಸಿನಿಮಾ ರಂಗಕ್ಕೆ ರಮ್ಯಾ ಅಭಿನಯದ ಸಿನಿಮಾ ರಿಲೀಸ್ ಆಗ್ತಿದೆ. ಆದರೆ ಮೋದಿ, ಬಿಜೆಪಿಗಳ ವಿರುದ್ಧ ಟೀಕಿಸಿ ಭಾಜಪಾ ಭಜನಾ ಮಂಡಳಿಯ ವಿರೋಧ ಕಟ್ಟಿಕೊಂಡಿರೋ ಕೆಂಪೇಗೌಡ ಕಟ್ಟಿದ್ ಊರಿನ ಪದ್ಮಾವತಿಯನ್ನ ಅಭಿಮಾನಿಗಳು ಅದ್ಯಾವ ರೀತಿ ವೆಲ್‍ಕಮ್ ಮಾಡ್ತಾರೋ ನೋಡಬೇಕು.

ಹಿರಿಯರನ್ನು ಮರೀತಿದ್ಯಾ ಸ್ಯಾಂಡಲ್‍ವುಡ್

ಕನ್ನಡ ಚಿತ್ರರಂಗದಲ್ಲಿ ಒಂದೆಡೆ ನಾಯಕ ನಟರು ಸ್ಟಾರ್‍ಗಳಾದ್ರೆ, ಮತ್ತೊಂದೆಡೆ ಕಾಮಿಡಿ ನಟರೇ ಹೀರೋಗಳಿಗಿಂತ ಸ್ಟಾರ್‍ಗಳಾಗಿ ಮಿಂಚುತ್ತಿದ್ದರು. ಅಭಿಮಾನಿಗಳು ಎಷ್ಟೋ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ ಕಾಮಿಡಿ ನಟರಿದ್ದಾರೆಂಬ ಕಾರಣಕ್ಕೆ ಸಿನಿಮಾ ನೋಡಲು ಹೋಗುತ್ತಿದ್ದರು. ಈಗಲೂ ಆ ಟ್ರೆಂಡ್ ಹಾಗೇ ಉಳಿದಿದೆ. ಇಂತಹ ಟ್ರೆಂಡ್ ಕ್ರಿಯೇಟ್ ಮಾಡಿದವರಲ್ಲಿ ಹಾಸ್ಯ ನಟ ದೊಡ್ಡಣ್ಣ, ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ ಮೊದಲಿಗರು. ಸ್ಯಾಂಡಲ್‍ವುಡ್ ಸಿನಿಮಾಗಳಲ್ಲಿ ಹಾಸ್ಯದ ಔತಣ ನೀಡಿದ್ದ ಇಂತಹ ಪ್ರತಿಭೆಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದು ಹೋಗಿವೆ. ಹಾಗೊಮ್ಮೆ ಹೀಗೊಮ್ಮೆ ಕಾಣಸಿಗುವ ನಟನೆಂದರೆ ಅದು ದೊಡ್ಡಣ್ಣ ಮಾತ್ರ. ಉಳಿದವರು ಇದ್ದಾರೆ ಎಂಬುದಕ್ಕೆ ಕುರುಹೂ ಇಲ್ಲದಷ್ಟು ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅಂದಹಾಗೆ ‘ರಾಜಲಕ್ಷ್ಮೀ’ ಟೈಟಲ್‍ನ ಸಿನಿಮಾದಲ್ಲಿ ನಟಿಸುತ್ತಿರುವ ಟೆನ್ನಿಸ್ ಕೃಷ್ಣರದ್ದೂ ಇದೇ ಮಾತು. ಕನ್ನಡ ಇಂಡಸ್ಟ್ರಿಯಲ್ಲಿ ಹಳಬರಿಗೆ ಅವಕಾಶವಿಲ್ಲ. ವಯಸ್ಸಾಗ್ತಿದ್ದಂತೆ ಮೂಲೆಗೆ ತಳ್ಳಿಬಿಡುತ್ತಾರೆ. ಅಭಿಮಾನಿಗಳೇ ನೀವು ಸಿನಿಮಾದಲ್ಲಿ ಕಾಣಸಿಗುತ್ತಿಲ್ಲವಲ್ಲಾ, ಯಾಕೆ ಎಂದು ಕೇಳುತ್ತಾರೆ. ಆದರೆ ಸಿನಿಮಾ ಮಾಡೋರಿಗೆ ಹಿರಿಯರ ಅವಶ್ಯಕತೆ ಇಲ್ಲದಂತಾಗಿದೆ ಅಂತಾರೆ ಟೆನ್ನಿಸ್.

ಲತಾ ಮಂಗೇಶ್ಕರ್ ಆರೋಗ್ಯಸ್ಥಿತಿ ಗಂಭೀರ

ಗಾಯನ ಕ್ಷೇತ್ರದಲ್ಲಿ ಖ್ಯಾತಿ ಪಡೆದು ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಗಾಯಕಿ ಲತಾ ಮಂಗೇಶ್ಕರ್.
90 ವಸಂತಗಳನ್ನು ದಾಟಿರುವ ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ರೂಲರ್ ಈಸ್ ದ ಮಾಡೆಲ್

ಈಗಿನ ಜನರೇಷನ್ ಹೈಕ್ಳಿಗೆ ಸಿನಿಮಾ ಸ್ಟಾರ್‍ಗಳೇ ಯೂತ್ ಐಕಾನ್‍ಗಳು. ಯಾವುದೇ ಹುಡಗನ್ನ ಕೇಳಿದ್ರು ಅವರು ಯಾವುದಾದ್ರು ಒಬ್ಬ ನಟನ ಹೆಸರೇಳಿ ಅವನೇ ನಮ್ಮ ರೋಲ್ ಮಾಡಲ್ ಅಂತ ಹೇಳ್ತಾರೆ. ಹಂಗೇನೇ ಸಿನಿಮಾ ಸ್ಟಾರ್‍ಗಳಿಗೂ ಯಾರಾದ್ರು ಒಬ್ರು ರೋಲ್ ಮಾಡಲ್‍ಗಳು ಇದ್ದೇಯಿರ್ತಾರೆ. ಸದ್ಯಕ್ಕೆ ಮ್ಯಾಟ್ರು ಏನಪ್ಪಾ ಅಂದ್ರೆ. ತನ್ನ ಪ್ರತಿ ಸಿನಿಮಾದಲ್ಲೂ ಒಬ್ಬೊಬ್ಬರ ಹೆಸರೇಳ್ಕಂಡು ಬೆಳೆದು ಬಂದ ರಾಕಿಂಗ್ ಸ್ಟಾರ್ ಯಶ್‍ನ ರೋಲ್ ಮಾಡೆಲ್ ಯಾರು ಅನ್ನೋದು. ರಾಮಾಚಾರಿ ಸಿನಿಮಾದಲ್ಲಿ ವಿಷ್ಣು ಟ್ಯಾಟೂ ಹಾಕಂಡ್ ವಿಷ್ಣು ಅಭಿಮಾನಿಗಳನ್ನೂ, ಗಜಕೇಸರಿಯಲ್ಲಿ ರಾಜ್‍ಕುಮಾರ್ ಅಭಿಮಾನಿಗಳನ್ನೂ, ಡ್ರಾಮಾ ಸಿನಿಮಾದಲ್ಲಿ ಅಂಬಿ ಜೊತೆ ಆ್ಯಕ್ಟ್ ಮಾಡಿದ ನಂತರ ಅಂಬಿ ಅಣ್ಣ ಅಂತ ಅಂಬಿಯ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಂಡ ಯಶ್ ಅಂಬಿ ಇರುವವರೆಗೂ ಅಂಬಿಯೇ ತನ್ನ ರೋಲ್ ಮಾಡೆಲ್ ಎಂಬಂತೆ ಹೇಳಿಕೊಳ್ಳುತ್ತಿದ್ದರು. ಇವಾಗ ಇದ್ದಕ್ಕಿದ್ದಂಗೆ ರೋಲ್ ಮಾಡಲ್ ಚೇಂಜ್ ಮಾಡ್ಕಂಡಿರೋ ಯಶ್, ನಿಮ್ಮ ಸ್ಫೂರ್ತಿ ಯಾರು ಅಂದ್ರೆ ಮೋದಿ ಅಂದ್ಬುಟ್ಟಿದ್ದಾರೆ. ಅಂದಹಾಗೆ 2014ರಲ್ಲಿ ಮೋದಿ ಅಧಿಕಾರಕ್ಕೆ ಬರೋಕಿಂತ ಮುಂಚೆ ಮೋದಿ ಗೊತ್ತಿತ್ತೋ ಇಲ್ವೋ ಗೊತ್ತಿಲ್ಲ. ಆದ್ರೆ ಸದ್ಯಕ್ಕೆ ಎಲ್ಲರನ್ನೂ ಸೆಳೀತಿರೋ ಮೋದಿನೇ ನನ್ನ ರೋಲ್ ಮಾಡ್ಲು ಅಂತ ಯಶ್ ಹೊಗುಳ್ತಾಯಿರೋದು ನೋಡಿದ್ರೆ ಅಂಬಿ ಮೇಲಿನ ಅಭಿಮಾನ ಕಡ್ಮೆ ಆಗೋಯ್ತಾ ಅನ್ನುಸ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...