Homeಅಂತರಾಷ್ಟ್ರೀಯಮೋದಿ ಸರ್ಕಾರದ ಕುರಿತು ಜುಕರ್‌ಬರ್ಗ್‌ ಹೇಳಿಕೆ; ಸಂಸದೀಯ ಸ್ಥಾಯಿ ಸಮಿತಿಯಿಂದ ಮೆಟಾಗೆ ಸಮನ್ಸ್

ಮೋದಿ ಸರ್ಕಾರದ ಕುರಿತು ಜುಕರ್‌ಬರ್ಗ್‌ ಹೇಳಿಕೆ; ಸಂಸದೀಯ ಸ್ಥಾಯಿ ಸಮಿತಿಯಿಂದ ಮೆಟಾಗೆ ಸಮನ್ಸ್

- Advertisement -
- Advertisement -

2024 ರ ಲೋಕಸಭಾ ಚುನಾವಣೆಯ ಕುರಿತು ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರ ವಿವಾದಾತ್ಮಕ ಹೇಳಿಕೆಗಳ ನಂತರ ಸಾಮಾಜಿಕ ಮಾಧ್ಯಮ ದೈತ್ಯ ಮೆಟಾ ಸಂಸ್ಥೆಗೆ ಸಂಸದೀಯ ಸಮಿತಿಯ ಸಮನ್ಸ್‌ ನೀಡಿದೆ.

ಜೋ ರೋಗನ್ ಎಕ್ಸ್‌ಪೀರಿಯೆನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಕಾಣಿಸಿಕೊಂಡ ಜುಕರ್‌ಬರ್ಗ್, ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ‘ದುರ್ಬಲ ಕೋವಿಡ್ -19 ನಿರ್ವಹಣೆ’ಯಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಸೋತಿದೆ ಎಂದು ಹೇಳಿದ್ದರು.

ಈ ಬಗ್ಗೆ, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಮೆಟಾ ಕ್ಷಮೆಯಾಚಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

“ನನ್ನ ಸಮಿತಿಯು ಈ ತಪ್ಪು ಮಾಹಿತಿಗಾಗಿ ಮೆಟಾಗೆ ಸಮನ್ಸ್‌ ನೀಡುತ್ತದೆ. ಯಾವುದೇ ಪ್ರಜಾಪ್ರಭುತ್ವ ದೇಶದಲ್ಲಿ ತಪ್ಪು ಮಾಹಿತಿಯು ದೇಶದ ಪ್ರತಿಷ್ಠೆಯನ್ನು ಹಾಳು ಮಾಡುತ್ತದೆ. ಈ ತಪ್ಪಿಗಾಗಿ ಆ ಸಂಸ್ಥೆಯು ಭಾರತೀಯ ಸಂಸತ್ತಿನಲ್ಲಿ ಮತ್ತು ಇಲ್ಲಿನ ಜನರಲ್ಲಿ ಕ್ಷಮೆಯಾಚಿಸಬೇಕಾಗುತ್ತದೆ” ಎಂದು ದುಬೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಭಾರತ ಸೇರಿದಂತೆ ವಿಶ್ವದಾದ್ಯಂತದ ಹೆಚ್ಚಿನ ಅಧಿಕಾರದಲ್ಲಿರುವ ಸರ್ಕಾರಗಳು ಕೋವಿಡ್ -19 ರ ನಂತರ ನಡೆದ ಚುನಾವಣೆಗಳಲ್ಲಿ ಸೋತಿವೆ ಎಂದು ಜುಕರ್‌ಬರ್ಗ್ ಸೂಚಿಸಿದ್ದರು. ಅವರ ಹೇಳಿಕೆಯು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಯಿತು. ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಈ ಹೇಳಿಕೆಗಳನ್ನು ‘ವಾಸ್ತವವಾಗಿ ತಪ್ಪು’ ಎಂದು ಹೇಳಿದ್ದರು.

“ಜುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿಯನ್ನು ನೋಡುವುದು ನಿರಾಶಾದಾಯಕವಾಗಿದೆ. ಸತ್ಯಗಳು ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮುಖ್ಯಸ್ಥರಾಗಿರುವ ವೈಷ್ಣವ್ ಮೆಟಾ-ಮಾಲೀಕತ್ವದ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

“2024 ರ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನಿರ್ಣಾಯಕ ಗೆಲುವು ಸಾಧಿಸಿತು, ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿತು” ಎಂದು ಕೇಂದ್ರ ಸಚಿವರು ಗಮನಸೆಳೆದರು.

ಭಾರತವು ತನ್ನ 2024 ರ ಸಾರ್ವತ್ರಿಕ ಚುನಾವಣೆಯನ್ನು 640 ಮಿಲಿಯನ್‌ಗಿಂತಲೂ ಹೆಚ್ಚು ಮತದಾರರೊಂದಿಗೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿಯವರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಗೆಲುವು ಸಾರ್ವಜನಿಕ ವಿಶ್ವಾಸದ ಸ್ಪಷ್ಟ ಪ್ರತಿಬಿಂಬವಾಗಿದೆ ಎಂದು ಹೇಳಿದರು.

“2024 ರ ಚುನಾವಣೆಗಳಲ್ಲಿ ಭಾರತ ಸೇರಿದಂತೆ ಹೆಚ್ಚಿನ ಅಧಿಕಾರದಲ್ಲಿರುವ ಸರ್ಕಾರಗಳು ಕೋವಿಡ್ ನಂತರ ಸೋತವು ಎಂಬ ಜುಕರ್‌ಬರ್ಗ್ ಅವರ ಹೇಳಿಕೆ ವಾಸ್ತವಿಕವಾಗಿ ತಪ್ಪು” ಎಂದು ವೈಷ್ಣವ್ ಪ್ರತಿಪಾದಿಸಿದರು.

800 ಮಿಲಿಯನ್ ಜನರಿಗೆ ಉಚಿತ ಆಹಾರ ವಿತರಣೆ, 2.2 ಬಿಲಿಯನ್ ಕೋವಿಡ್ -19 ಲಸಿಕೆ ಡೋಸ್‌ಗಳ ವಿತರಣೆ, ಸಾಂಕ್ರಾಮಿಕ ಸಮಯದಲ್ಲಿ ವಿಶ್ವಾದ್ಯಂತ ರಾಷ್ಟ್ರಗಳಿಗೆ ಒದಗಿಸಲಾದ ನೆರವು ಸೇರಿದಂತೆ ಮೋದಿ ಸರ್ಕಾರದ ಸಾಧನೆಗಳನ್ನು ಅವರು ಒತ್ತಿ ಹೇಳಿದರು.

“800 ಮಿಲಿಯನ್‌ಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ಕೋವಿಡ್ ಸಮಯದಲ್ಲಿ ವಿಶ್ವಾದ್ಯಂತ ರಾಷ್ಟ್ರಗಳಿಗೆ ನೆರವು ನೀಡುವುದರಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ ಮೂರನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಸಚಿವರು ಹೇಳಿದರು.

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಸೇರಿದಂತೆ ಜನಪ್ರಿಯ ವೇದಿಕೆಗಳನ್ನು ನಿರ್ವಹಿಸುವ ಮೆಟಾ, ವಿವಾದಕ್ಕೆ ಇನ್ನೂ ಅಧಿಕೃತ ಪ್ರತಿಕ್ರಿಯೆಯನ್ನು ನೀಡಿಲ್ಲ.

ಇದನ್ನೂ ಓದಿ; ‘ಇಷ್ಟೊಂದು ಜನದಟ್ಟಣೆಯ ಸ್ಥಳಕ್ಕೆ ಎಂದಿಗೂ ಹೋಗಿಲ್ಲ..’; ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...