Homeಮುಖಪುಟವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು 'ಬದುಕುವ ಹಕ್ಕಿನ' ಉಲ್ಲಂಘನೆ : ಬಾಂಬೆ ಹೈಕೋರ್ಟ್

ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು

- Advertisement -
- Advertisement -

‘ವಿಚಾರಣೆಯಿಲ್ಲದೆ ದೀರ್ಘಕಾಲದವರೆಗೆ ಜೈಲಿನಲ್ಲಿಡುವುದು’ ಸಂವಿಧಾನದ ಅಡಿಯಲ್ಲಿ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. 2018ರ ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ.

ವಿಶೇಷ ನ್ಯಾಯಾಲಯವು ಒಂಬತ್ತು ತಿಂಗಳಲ್ಲಿ ಆರೋಪ ರೂಪಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಆರೋಪ ರೂಪಿಸುವುದು ಪ್ರಕರಣದ ವಿಚಾರಣೆ ಆರಂಭದ ಮೊದಲ ಹೆಜ್ಜೆಯಾಗಿದೆ ಎಂದಿದೆ.

ನ್ಯಾಯಮೂರ್ತಿಗಳಾದ ಎ.ಎಸ್ ಗಡ್ಕರಿ ಮತ್ತು ಕಮಲ್ ಖಾಟಾ ಅವರ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠವು ಎಲ್ಗರ್ ಪರಿಷತ್ ಪ್ರಕರಣದಲ್ಲಿ ಜನವರಿ 8ರಂದು ಸಂಶೋಧಕ ರೋನಾ ವಿಲ್ಸನ್ ಮತ್ತು ಹೋರಾಟಗಾರ ಸುಧೀರ್ ಧಾವಳೆ ಅವರಿಗೆ ಜಾಮೀನು ನೀಡಿದೆ.

ಈ ಇಬ್ಬರು ದೀರ್ಘ ಕಾಲದಿಂದ ಸೆರೆವಾಸ ಅನುಭವಿಸುತ್ತಿರುವುದು ಮತ್ತು ಪ್ರಕರಣದ ವಿಚಾರಣೆ ಶೀಘ್ರದಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿಲ್ಲ ಎಂಬ ಅಂಶಗಳನ್ನು ಗಮನಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿಲ್ಸನ್ ಮತ್ತು ಧಾವಳೆ ಅವರು ಈಗಾಗಲೇ ಆರು ವರ್ಷಗಳಿಗೂ ಹೆಚ್ಚು ಸಮಯವನ್ನು ವಿಚಾರಣೆಗೆ ಮುನ್ನ ಜೈಲಿನಲ್ಲಿ ಕಳೆದಿದ್ದಾರೆ ಎಂಬುವುದನ್ನು ಹೈಕೋರ್ಟ್ ಗಮನಿಸಿದೆ.

ಮಂಗಳವಾರ (ಜ.14) ಲಭ್ಯವಾದ ನ್ಯಾಯಾಲಯದ ವಿವರವಾದ ಆದೇಶ ಪ್ರತಿಯಲ್ಲಿ, ಆರೋಪಿಯನ್ನು ವಿಚಾರಣೆಯಿಲ್ಲದೆ ದೀರ್ಘಕಾಲದವರೆಗೆ ಸೆರೆಮನೆಯಲ್ಲಿಡುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂಬುದು ಕಾನೂನಿನ ಸ್ಥಿರ ಮತ್ತು ಮಾನ್ಯತೆ ಪಡೆದ ತತ್ವವಾಗಿದೆ ಎಂದು ಹೈಕೋರ್ಟ್ ಹೇಳಿದೆ.

“ದೀರ್ಘಕಾಲದ ಸೆರೆವಾಸ ಮತ್ತು ವಿಚಾರಣೆ ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆಯಿಲ್ಲದ ಕಾರಣ, ವಿಚಾರಣಾಧೀನ ಕೈದಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಶ್ಯಕತೆಯಿದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ನ್ಯಾಯಾಧೀಶರು (ಎನ್‌ಐಎ) ಆರೋಪಪಟ್ಟಿ ಸಲ್ಲಿಸುವ ಹಂತವನ್ನು ಮತ್ತು ಸಾಧ್ಯವಾದಷ್ಟು ವಿಚಾರಣೆಯನ್ನು ತ್ವರಿತಗೊಳಿಸುವಂತೆ ನಾವು ವಿನಂತಿಸುತ್ತೇವೆ. ಇಂದಿನಿಂದ 9 ತಿಂಗಳ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸುವ ಹಂತವನ್ನು ಪೂರ್ಣಗೊಳಿಸಬೇಕು” ಎಂದು ಹೈಕೋರ್ಟ್ ಹೇಳಿದೆ.

ನ್ಯಾಯಾಲಯವು ವಿಲ್ಸನ್ ಮತ್ತು ಧಾವಳೆ ಅವರಿಗೆ ತಲಾ 1 ಲಕ್ಷ ರೂಪಾಯಿಗಳ ಭದ್ರತಾ ಠೇವಣಿ ಇಡುವಂತೆ ಸೂಚಿಸಿದೆ.

ಆದೇಶದ ಪ್ರತಿ ಈಗ ಲಭ್ಯವಿದ್ದು, ಇಬ್ಬರೂ ತಮ್ಮ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ವಿಶೇಷ ನ್ಯಾಯಾಲಯವನ್ನು ಸಂಪರ್ಕಿಸಬಹುದು. ನಂತರ ಅವರನ್ನು ನವಿ ಮುಂಬೈನ ತಲೋಜಾ ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ.

ವಿಚಾರಣೆಯ ಸಮಯದಲ್ಲಿ ವಿಲ್ಸನ್ ಮತ್ತು ಧಾವಳೆ ಅವರು ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ಹಾಜರಾಗಬೇಕು. ತಮ್ಮ ಪಾಸ್‌ಪೋರ್ಟ್‌ಗಳನ್ನು ಒಪ್ಪಿಸಬೇಕು ಮತ್ತು ವಿಚಾರಣೆ ಮುಗಿಯುವವರೆಗೆ ನಗರವನ್ನು ಬಿಟ್ಟು ಹೋಗಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಜನರಲ್ಲಿ ವಿಲ್ಸನ್ ಮತ್ತು ಧಾವಳೆ ಸೇರಿದಂತೆ ಹತ್ತು ಮಂದಿ ಇಲ್ಲಿಯವರೆಗೆ ಜಾಮೀನು ಪಡೆದಿದ್ದಾರೆ.

ಡಿಸೆಂಬರ್ 31, 2017ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಆರೋಪಿಗಳು ಪ್ರಚೋದನಕಾರಿ ಭಾಷಣಗಳನ್ನು ಮಾಡಿ, ಮರುದಿನ ಜಿಲ್ಲೆಯ ಕೋರೆಗಾಂವ್-ಭೀಮಾದಲ್ಲಿ ಹಿಂಸಾಚಾರಕ್ಕೆ ಕಾರಣರಾದರು ಎಂದು ಆರೋಪಿಸಿ ಪುಣೆ ಪೊಲೀಸರು 2018ರಲ್ಲಿ ಪ್ರಕರಣ ದಾಖಲಿಸಿದ್ದರು.

ಪೊಲೀಸರ ಪ್ರಕಾರ, ಎಲ್ಗರ್ ಪರಿಷತ್ ಸಮಾವೇಶಕ್ಕೆ ಮಾವೋವಾದಿಗಳು ಬೆಂಬಲ ನೀಡಿದ್ದರು.

ಪ್ರಕರಣದಲ್ಲಿ ಜಾಮೀನು ಪಡೆದ ಇತರ ಆರೋಪಿಗಳಲ್ಲಿ ವರವರ ರಾವ್, ಸುಧಾ ಭಾರದ್ವಾಜ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾ, ಶೋಮಾ ಸೇನ್, ಗೌತಮ್ ನವಲಖಾ ಮತ್ತು ಮಹೇಶ್ ರಾವತ್ ಸೇರಿದ್ದಾರೆ.

ಆದಾಗ್ಯೂ, ಎನ್‌ಐಎ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಆದೇಶವನ್ನು ಪ್ರಶ್ನಿಸಿದ ನಂತರ ಮಹೇಶ್ ರಾವತ್ ಅವರು ಜೈಲಿನಲ್ಲೇ ಇದ್ದರು. ಎಲ್‌ಎಲ್‌ಬಿ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡಲು ವಿಶೇಷ ಎನ್‌ಐಎ ನ್ಯಾಯಾಲಯ ಮಂಗಳವಾರ (ಜ.14) ಅವರಿಗೆ 18 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಆರೋಪಿಗಳಲ್ಲಿ ಒಬ್ಬರಾದ ಸ್ಟಾನ್ ಸ್ವಾಮಿ 2021ರಲ್ಲಿ ಜೈಲಿನಲ್ಲಿದ್ದಾಗ ನಿಧನರಾದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆಯನ್ನು ಪುಣೆ ಪೊಲೀಸರಿಂದ ವಹಿಸಿಕೊಂಡು ಆರೋಪಪಟ್ಟಿ ಸಲ್ಲಿಸಿತ್ತು. ಆದರೆ, ವಿಶೇಷ ನ್ಯಾಯಾಲಯವು ಇನ್ನೂ ಆರೋಪಗಳನ್ನು ರೂಪಿಸಿಲ್ಲ.

ಜೂನ್ 2018ರಲ್ಲಿ ದೆಹಲಿಯ ತಮ್ಮ ಮನೆಯಿಂದ ಬಂಧಿಸಲ್ಪಟ್ಟ ವಿಲ್ಸನ್ ಅವರನ್ನು ತನಿಖಾ ಸಂಸ್ಥೆಗಳು ನಗರ ಮಾವೋವಾದಿಗಳ ಪ್ರಮುಖ ನಾಯಕರಲ್ಲಿ ಒಬ್ಬರು ಎಂದು ಬಣ್ಣಿಸಿವೆ. ಧಾವಳೆ ನಿಷೇಧಿತ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ) ದ ಸಕ್ರಿಯ ಸದಸ್ಯರಾಗಿದ್ದರು ಎಂದು ಆರೋಪಿಸಲಾಗಿದೆ.

ಆಗಸ್ಟ್ 2021ರಲ್ಲಿ ಸಲ್ಲಿಸಲಾದ ಎನ್‌ಐಎ ಆರೋಪಪಟ್ಟಿಯಲ್ಲಿ, ವಿಲ್ಸನ್ ಮತ್ತು ಇತರ ಆರೋಪಿಗಳು ನಿಷೇಧಿತ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದರು, ಅವರು ಸರ್ಕಾರವನ್ನು ದುರ್ಬಲಗೊಳಿಸಲು ಮತ್ತು ರಾಜ್ಯವನ್ನು ತಮ್ಮ ವಶಕ್ಕೆ ಪಡೆಯಲು ಸಶಸ್ತ್ರ ಹೋರಾಟದ ಮೂಲಕ ‘ಜನತಾ ಸರ್ಕಾರ್’ ಸ್ಥಾಪಿಸಲು ಬಯಸಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳ ವಿರುದ್ಧ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯ ಕಾಪಾಡಿಕೊಳ್ಳಲು ಹಾನಿಕರವಾದ ಕೃತ್ಯಗಳನ್ನು ಮಾಡುವುದು, ಸರ್ಕಾರದ ವಿರುದ್ಧ ಯುದ್ಧ ನಡೆಸುವುದು ಮತ್ತು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ವಿವಿಧ ಸೆಕ್ಷನ್‌ಗಳಡಿ ಒಂದು ಡಜನ್‌ಗೂ ಹೆಚ್ಚು ಆರೋಪಗಳನ್ನು ಹೊರಿಸಲಾಗಿದೆ.

ಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ – ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...