Homeಮುಖಪುಟಭಾರತದ ಸ್ವಾತಂತ್ರ್ಯ ಕುರಿತ ಭಾಗವತ್ ಹೇಳಿಕೆ 'ದೇಶದ್ರೋಹಕ್ಕೆ ಸಮ' : ರಾಹುಲ್ ಗಾಂಧಿ

ಭಾರತದ ಸ್ವಾತಂತ್ರ್ಯ ಕುರಿತ ಭಾಗವತ್ ಹೇಳಿಕೆ ‘ದೇಶದ್ರೋಹಕ್ಕೆ ಸಮ’ : ರಾಹುಲ್ ಗಾಂಧಿ

- Advertisement -
- Advertisement -

ರಾಮ ಮಂದಿರ ಪ್ರತಿಷ್ಠಾಪನೆಯ ನಂತರ ಭಾರತಕ್ಕೆ ‘ನಿಜವಾದ ಸ್ವಾತಂತ್ರ್ಯ’ ಬಂತು ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ್ರೋಹಕ್ಕೆ ಸಮನಾಗಿದ್ದು, ಭಾಗವತ್ ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ (ಜ.14) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯ ಕೋಟ್ಲಾ ರಸ್ತೆಯಲ್ಲಿರುವ ನಿರ್ಮಿಸಿರುವ ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, “ಸ್ವಾತಂತ್ರ್ಯ ಚಳವಳಿ ಮತ್ತು ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನವನ್ನು ಮೋಹನ್ ಭಾಗವತ್ ಪ್ರದರ್ಶಿಸಿದ್ದಾರೆ. ನಿನ್ನೆ ಅವರು ಏನು ಹೇಳಿದ್ದಾರೊ ಅದು ದೇಶದ್ರೋಹಕ್ಕೆ ಸಮವಾಗಿದೆ” ಎಂದು ಹೇಳಿದ್ದಾರೆ.

“ಬೇರೆ ದೇಶದಲ್ಲಾಗಿದ್ದರೆ ಸಾರ್ವಜನಿಕವಾಗಿ ಇಂತಹ ಹೇಳಿಕೆ ನೀಡುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದರು. ಭಾಗವತ್ ಅವರು ಇಷ್ಟೊತ್ತಿಗೆ ಬಂಧನವಾಗಬೇಕಿತ್ತು” ಎಂದಿದ್ದಾರೆ.

ಹೊಸ ಪ್ರಧಾನ ಕಚೇರಿಯು ಸಂವಿಧಾನದ ಅಡಿಪಾಯದ ಸಂಕೇತವನ್ನು ಹೊಂದಿದೆ ಎಂದು ಒತ್ತಿ ಹೇಳಿದ ರಾಹುಲ್ ಗಾಂಧಿ, ಕೇಸರಿ ಪಕ್ಷ ಮತ್ತು ಕಾಂಗ್ರೆಸ್‌ನ ಸಿದ್ಧಾಂತ ನಡುವೆ ಸಂಘರ್ಷ ಇರುವುದರಿಂದ ಆರ್‌ಎಸ್‌ಎಸ್‌ನೊಂದಿಗೆ ನಮ್ಮ ಕಾರ್ಯಕರ್ತರು ನಾಗರಿಕ ಯುದ್ಧ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನೂ ತನ್ನ ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತೀಯ ರಾಜ್ಯಗಳ ವಿರುದ್ಧವೇ ಹೋರಾಡುವಂತಾಗಿದೆ” ಎಂದಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರವು ಭಾರತದ ಬಗ್ಗೆ ಕಾಂಗ್ರೆಸ್‌ಗಿಂತ ಸಂಪೂರ್ಣವಾಗಿ ಭಿನ್ನವಾದ ದೃಷ್ಟಿಕೋನವನ್ನು ಹೊಂದಿದೆ. “ಅವರು ಭಾರತವನ್ನು ನೆರಳಿನ, ಗುಪ್ತ, ರಹಸ್ಯ ಸಮಾಜದಿಂದ ಹಾಗೂ ಒಬ್ಬ ವ್ಯಕ್ತಿ ನಡೆಸಬೇಕೆಂದು ಬಯಸುತ್ತಾರೆ. ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ಜಾತಿಗಳ ಮತ್ತು ಬುಡಕಟ್ಟು ಜನಾಂಗದವರ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ. ಇದು ಅವರ ಕಾರ್ಯಸೂಚಿ” ಎಂದು ಹೇಳಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬ ಮಾತು ಪ್ರತಿ ಭಾರತೀಯರಿಗೆ ಮಾಡಿದ ಅವಮಾನವಾಗಿದೆ. ಅಜ್ಞಾನದಿಂದ ಕೂಡಿದ ಇಂತಹ ಹೇಳಿಕೆಗಳನ್ನು ಆಲಿಸದೇ ಇರುವುದು ಸೂಕ್ತ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...