Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ನಾಡಕಚೇರಿ ಮುಂಭಾಗ ಕಳೆದ 1018 ದಿನಗಳಿಂದ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ರೈತರ ಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕ ಪ್ರಾಂತ ರೈತ‌ಸಂಘ ಸೇರಿದಂತೆ ಹಲವು ಎಡ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗಿದ್ದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ ಬಯ್ಯಾರೆಡ್ಡಿ ಅಗಲಿಕೆಯ ಹಿನ್ನೆಲೆ, ಇಂದು (ಜ.15) ಧರಣಿ ಸ್ಥಳಕ್ಕೆ ಬಂದ ಎಡ ಸಂಘಟನೆಗಳ ಮುಖಂಡರು, ಬಯ್ಯಾರೆಡ್ಡಿಯವರ ಅನುಪಸ್ಥಿತಿಯಲ್ಲಿಯೂ ನಾವು ಸಂಘಟನೆಯಾಗಿ ರೈತರ ಜೊತೆಗಿದ್ದೇವೆ ಎಂದು ಘೋಷಿಸಿದರು.

ಈ ವೇಳೆ ಮಾತನಾಡಿದ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಅವರು, “ವಿವಿಧ ಸಂಘಟನೆಗಳ ಸಾಮೂಹಿಕ ನಾಯಕತ್ವದಲ್ಲಿ ನಡೆದು ಬಂದಿರುವ ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗೆ ನಮ್ಮ ಕಾಮ್ರೇಡ್ ಬಯ್ಯಾರೆಡ್ಡಿಯವರೂ ಕೂಡ ಮುಂಚೂಣಿಯಲ್ಲಿದ್ದರು. ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹೋರಾಟದ ಸ್ಪೂರ್ತಿ ನಮ್ಮ ಜೊತೆಗಿದೆ ಎಂದರು.

ಮೂರುಕಾಸಿನ ಸಂಬಳಕ್ಕೆ ಕೆಲಸ ಮಾಡಲು ಬಂಡವಾಳಶಾಹಿಗಳಿಗೆ ನೌಕರರು ಬೇಕು, ಅದಕ್ಕಾಗಿ ಕೃಷಿ ನಂಬಿರುವ ಜನರ ಭೂಮಿ‌ಯನ್ನು ಕಸಿದುಕೊಳ್ಳುವ‌ ಮೂಲಕ ಸರ್ಕಾರಗಳು ಕೂಲಿಯಾಳುಗಳನ್ನು ಸೃಷ್ಟಿಸುತ್ತಿದೆ. ರೈತರ ಕೈಯಲ್ಲಿ ಭೂಮಿ‌ ಇರಲೇ ಬಾರದು ಎಂಬುದು ಸರ್ಕಾರಗಳ ನಿರ್ಧಾರ. ಅದನ್ನು ನಾವು ವಿರೋಧಿಸಲೇಬೇಕು. ಮುಖ್ಯಮಂತ್ರಿಗಳು ಒಳ್ಳೆಯವರಾಗಿದ್ದರು ಕೂಡ ಬಂಡವಾಳಶಾಹಿಗಳಿಗೆ ಹೆದುರುತ್ತಿದ್ದಾರೆ. ಅವರು ತಕ್ಷಣವೇ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಚನ್ನರಾಯಪಟ್ಟಣ ಹೋರಾಟ ಕೃಷಿ ಭಾರತವನ್ನು ಕಬಳಿಸಲು ಹೊರಟಿರುವ ಬಹುರಾಷ್ಟ್ರೀಯ ಕಂಪನಿಗಳ ವಿರುದ್ದ ನಡೆಸುತ್ತಿರುವ ಹೋರಾಟ. ನಾವಿದನ್ನು ಗೆಲ್ಲಲೇಬೇಕು, ಗೆಲ್ಲುತ್ತೇವೆ. ಅಲ್ಲಿಯವರೆಗೆ ಹೋರಾಡೋಣ ನಾವು ಸದಾ ಜೊತೆಗಿರುತ್ತೇವೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜು ಹೇಳಿದರು.

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರು ಮಾತನಾಡಿ, ಹಿಂದೆ ಭೂಮಿಗಾಗಿ ಚಳವಳಿ ನಡೆಯುತ್ತಿದ್ದವು. ಈಗ ನಮಗಿರುವ ಭೂಮಿಯನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಾಗಿದೆ, ಇದು ದುರಂತವೇ ಸರಿ. ಚಳವಳಿಯನ್ನು ಇಷ್ಟು ದೀರ್ಘಕಾಲ ಜೀವಂತವಾಗಿಟ್ಟಿರುವುದು ಇಲ್ಲಿನ ರೈತರ ಹೆಗ್ಗಳಿಕೆ ಮತ್ತು ಇದೊಂದು ಸಾಹಸವೇ ಸರಿ. ಹೋರಾಟಕ್ಕೆ ಎಂದಿಗೂ ಸೋಲಾಗುವುದಿಲ್ಲ. ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಜನವರಿ ತಿಂಗಳಲ್ಲಿ ಯಾವುದೇ ನಿರ್ಧಾರಕ್ಕೆ ಬರದಿದ್ದರೆ ಫಬ್ರವರಿ ತಿಂಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗೋಣ ಎಂದರು.

ಕರ್ನಾಟಕ ಪ್ರಾಂತ್ಯ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ್ ಮಾತನಾಡಿ, ಚನ್ನರಾಯಪಟ್ಟಣ ಭೂಮಿ ಹೋರಾಟದ ವಿಷಯವನ್ನು ಪ್ರಾಧಾನವಾಗಿಟ್ಟುಕೊಂಡು, ರೈತರ, ಕಾರ್ಮಿಕರ ವಿವಿಧ ಒತ್ತಾಯಗಳ ಜೊತೆಗೆ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟವನ್ನು ರೂಪಿಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳ ಕನಿಷ್ಟ ಹತ್ತು ಸಾವಿರ ಜನರನ್ನು ಒಟ್ಟಿಗೆ ಸೇರಿಸುವ ಯೋಜನೆ ಇದೆ. ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಬನ್ನಿ ಎಂದು ಕರೆಕೊಟ್ಟರು.

ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳೂ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ನಮ್ಮೊಂದಿಗಿವೆ. ಕರ್ನಾಟಕದ ಐಕ್ಯ ಹೋರಾಟಕ್ಕೆ ಇದೊಂದು ಜಿವಂತ ಉದಾಹರಣೆ. ನೀವೆಲ್ಲರೂ ಜೊತೆಗಿರುವುದೆ ನಮ್ಮ ರೈತ ಹೋರಾಟಕ್ಕೆ ಆನೆ ಬಲ. ಬಯ್ಯಾರೆಡ್ಡಿಯವರು ಇಲ್ಲದಿರುವ ಖಾಲಿ ತನವನ್ನು ತಾವು ತುಂಬಲು ಬಂದಿದ್ದೀರಿ. ನೀವೆಲ್ಲರು ಜೊತೆಗಿದ್ದರೆ ಯಾವುದೇ ಸಂದರ್ಭದಲ್ಲಿಯಾದರೂ ಸರಿ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ. ಅದಕ್ಕಾಗಿ ಎಂತಹ ಹೋರಾಟಕ್ಕಾದರೂ ನಾವು ಸಿದ್ದ ಎಂದು ಚನ್ನರಾಯಪಟ್ಟಣ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯ ಮುಖಂಡ ಕಾರಳ್ಳಿ ಶ್ರೀನಿವಾಸ್ ತಿಳಿಸಿದರು.

ಹೋರಾಟಗಾರರಾದ ಚಂದ್ರ ತೇಜಸ್ವಿ, ಪ್ರಭಾ ಬೆಳವಂಗಲ, ನಲ್ಲಪ್ಪನಹಳ್ಳಿ ನಂಜಪ್ಪ, ಸಿದ್ದಾರ್ಥ, ಮಾರೇಗೌಡ, ಮೀನಾಕ್ಷಿ ಸುಂದರಂ, ಮುನಿವೆಂಕಟಪ್ಪ ಸೇರಿದಂತೆ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತಸಂಘ ಮತ್ತಿತರ ಸಂಘಟನೆಗಳ ಮುಖಂಡರು, 13 ಹಳ್ಳಿಗಳ ರೈತರು, ರೈತ ಮಹಿಳೆಯರು, ಯುವ ಜನರು ಇಂದು ಧರಣಿಯಲ್ಲಿ ಭಾಗಿಯಾಗಿದ್ದರು.

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...