Homeಚಳವಳಿದಲ್ಲೆವಾಲ್ ಉಪವಾಸ 51ನೇ ದಿನಕ್ಕೆ; ಆಮರಣಾಂತ ಉಪವಾಸ ಆರಂಭಿಸಿದ 111 ರೈತರು

ದಲ್ಲೆವಾಲ್ ಉಪವಾಸ 51ನೇ ದಿನಕ್ಕೆ; ಆಮರಣಾಂತ ಉಪವಾಸ ಆರಂಭಿಸಿದ 111 ರೈತರು

- Advertisement -
- Advertisement -

‘ಜಗಜಿತ್ ಸಿಂಗ್ ದಲ್ಲೆವಾಲ್ ಅವರಿಗಿಂತ ಮೊದಲು ನಾವು ಹುತಾತ್ಮರಾಗುತ್ತೇವೆ’ ಎಂದು ಪಂಜಾಬಿಯಲ್ಲಿ ಘೋಷಣಾ ಫಲಕ ಬರೆದಿರುವ 111 ರೈತರ ಗುಂಪು ಬುಧವಾರ ಖಾನೌರಿ ಗಡಿಯಲ್ಲಿ ದಲ್ಲೆವಾಲ್ ಅವರನ್ನು ಬೆಂಬಲಿಸಿ ಕಪ್ಪು ಬಟ್ಟೆ ಧರಿಸಿ ಮತ್ತು ಕುತ್ತಿಗೆಗೆ ಫಲಕಗಳನ್ನು ಹಾಕಿಕೊಂಡು ಆಮರಣಾಂತ ಉಪವಾಸ ಆರಂಭಿಸಿದೆ. ದಲ್ಲೆವಾಲ್ ಉಪವಾಸ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಮತ್ತು ಇತರ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ರೈತರು ತೀರ್ಮಾನಿಸಿದ್ದಾರೆ. ಹರಿಯಾಣ ಕಡೆಗೆ ತೆರಳಿದ ರೈತರ ಗುಂಪು ಪ್ರಾರ್ಥನೆ ಸಲ್ಲಿಸಿದ ನಂತರ ಆಮರಣಾಂತ ಉಪವಾಸ ಆರಂಭಿಸಿದೆ. ನಂತರ ಅವರು ಮುಳ್ಳುತಂತಿಯನ್ನು ಕತ್ತರಿಸಿ ರಸ್ತೆಯಲ್ಲಿ ಧರಣಿ ಕುಳಿತಿದ್ದಾರೆ.

ಈ ನಡುವೆ, ಹರಿಯಾಣ ಪೊಲೀಸರು ಹರಿಯಾಣ ಭಾಗದ ಗಡಿಯಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಿದ್ದಾರೆ. ಭಾವುಕರಾದ ರೈತರು ಪ್ರತಿಭಟನೆಯನ್ನು ಬೆಂಬಲಿಸಲು ದಲ್ಲೆವಾಲ್ ಅವರಿಗಿಂತ ಮುಂಚೆಯೆ ತಮ್ಮನ್ನು ತಾವು ತ್ಯಾಗ ಮಾಡುತ್ತೇವೆ ಎಂದು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದಲ್ಲೆವಾಲ್ ಅವರ ದೇಹವು ನೀರನ್ನು ಸ್ವೀಕರಿಸುತ್ತಿಲ್ಲ ಮತ್ತು ಬಹು ಅಂಗಾಂಗ ವೈಫಲ್ಯದತ್ತ ಸಾಗುತ್ತಿರುವುದರಿಂದ ಅವರ ಸ್ಥಿತಿ ಹದಗೆಡುತ್ತಿದೆ ಎಂದು ರೈತ ಮುಖಂಡರು ಹೇಳಿದ್ದಾರೆ. ದೀರ್ಘಕಾಲದ ಉಪವಾಸದ ಹೊರತಾಗಿಯೂ ಅವರು ವೈದ್ಯಕೀಯ ಸಹಾಯ ಪಡೆಯಲು ನಿರಾಕರಿಸಿದ್ದಾರೆ, ಇದರಿಂದಾಗಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ದಲ್ಲೆವಾಲ್ ಉಪವಾಸ

ದಲ್ಲೆವಾಲ್ ಅವರನ್ನು ನೋಡಿಕೊಳ್ಳುತ್ತಿದ್ದ ವೈದ್ಯರು ಅವರ ಕೀಟೋನ್ ಮಟ್ಟ ಹೆಚ್ಚಿರುವುದರಿಂದ ಮತ್ತು ಸ್ನಾಯುಗಳ ದ್ರವ್ಯರಾಶಿ ಕಡಿಮೆಯಾಗಿರುವುದರಿಂದ ಅವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರೈತ ನಾಯಕ ಅಭಿಮನ್ಯು ಕೊಹರ್, “ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಗಮನ ಕೊಡುತ್ತಿಲ್ಲ. ಇಂದು, ದಲ್ಲೆವಾಲ್ ಅವರ ಆಮರಣಾಂತ ಉಪವಾಸ 51 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರವು ಯಾವುದನ್ನೂ ಕೇಳಲು ಅಥವಾ ಮಾತುಕತೆಗಳನ್ನು ಪ್ರಾರಂಭಿಸಲು ಅಥವಾ ನಮ್ಮ ಬೇಡಿಕೆಗಳನ್ನು ಈಡೇರಿಸಲು ಸಿದ್ಧವಾಗಿಲ್ಲ. ರೈತರು ಭಾವನಾತ್ಮಕರಾಗಿದ್ದಾರೆ ಮತ್ತು ಅವರು ದಲ್ಲೆವಾಲ್ ಅವರನ್ನು ಅನುಸರಿಸುತ್ತಾರೆ ಹಾಗೂ ಶಾಂತಿಯುತವಾಗಿ ಅನಿರ್ದಿಷ್ಟ ಉಪವಾಸವನ್ನು ಪ್ರಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಚಾಲಕರಾಗಿರುವ ದಲ್ಲೆವಾಲ್, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಳೆದ ವರ್ಷ ನವೆಂಬರ್ 26 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಗಡಿಯಲ್ಲಿ ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಅವರ ಆರೋಗ್ಯದ ನಿರಂತರ ಆರೈಕೆಗಾಗಿ ಪಂಜಾಬ್ ಸರ್ಕಾರವು ರಾಜೀಂದ್ರ ವೈದ್ಯಕೀಯ ಕಾಲೇಜು ಮತ್ತು ಪಟಿಯಾಲಾದ ಮಾತಾ ಕೌಶಲ್ಯ ಆಸ್ಪತ್ರೆಯ ವೈದ್ಯಕೀಯ ತಂಡಗಳನ್ನು ನಿಯೋಜಿಸಿದೆ. ಪ್ರತಿಭಟನಾ ಸ್ಥಳದ ಬಳಿ ಎಲ್ಲಾ ತುರ್ತು ಔಷಧಗಳು ಮತ್ತು ಸಲಕರಣೆಗಳೊಂದಿಗೆ ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿದೆ.

ದಲ್ಲೆವಾಲ್‌ಗೆ ಏನಾದರೂ ಅಹಿತಕರ ಘಟನೆ ನಡೆದರೆ, ನಂತರ ಕೇಂದ್ರ ಸರ್ಕಾರಕ್ಕೆ ಯಾವುದನ್ನೂ ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಭಟನಾಕಾರ ರೈತರು ಈ ಹಿಂದೆ ಎಚ್ಚರಿಸಿದ್ದಾರೆ.

ಇದನ್ನೂಓದಿ:  ಮಧ್ಯಪ್ರದೇಶ – ಪಕ್ಷದ ನಾಯಕಿಯ ಮೇಲೆಯೆ ಅತ್ಯಾಚಾರ; ಬಿಜೆಪಿ ನಾಯಕ ಅರೆಸ್ಟ್‌

ಮಧ್ಯಪ್ರದೇಶ – ಪಕ್ಷದ ನಾಯಕಿಯ ಮೇಲೆಯೆ ಅತ್ಯಾಚಾರ; ಬಿಜೆಪಿ ನಾಯಕ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...