Homeಕರ್ನಾಟಕಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

ಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

- Advertisement -
- Advertisement -

ಉಪಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನರ್ಹರಿಗೆ ಸಂಬಂಧಿಸಿದ ಸುಪ್ರೀಂಕೋರ್ಟು ತೀರ್ಪು ಸಹಾ ಬಂದ ಮೇಲೆ ಗೆಲುವು ಸೋಲಿನ ಲೆಕ್ಕಾಚಾರಗಳು ಆರಂಭವಾಗಿವೆ. 12ರಲ್ಲಿ ಗೆಲ್ಲುತ್ತೇವೆ, 15 ಗೆದ್ದರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಕೂಗು ಹಾಕುತ್ತಿದ್ದಾರಾದರೂ, ಮೂರೂ ಪಕ್ಷಗಳು ದುಸ್ಥಿತಿಯಲ್ಲೇ ಇವೆ ಎಂಬುದು ಎದ್ದು ಕಾಣುತ್ತಿದೆ. ಮೂರೂ ಪಕ್ಷಗಳ ‘ಒಳಗಿನ’ ಮೂಲಗಳನ್ನು ಮಾತಾಡಿಸಿದಾಗ ಕಂಡುಬಂದಿರುವ ಸಂಗತಿ ಇದಾಗಿದೆ.

ಈಗಾಗಲೇ ಗೆದ್ದು ಬಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರನ್ನು ಪಕ್ಷಾಂತರ ಮಾಡಿಸಿದ ಬಿಜೆಪಿ ಪಕ್ಷವು ಅದೇ (ಅನರ್ಹ) ಶಾಸಕರಿಗೇ ಟಿಕೆಟ್ ಕೊಟ್ಟರೂ, ಬಹುಮತಕ್ಕೆ ಅಗತ್ಯವಿರುವ 8 ಸೀಟುಗಳನ್ನು ಗೆಲ್ಲುವ ಸ್ಥಿತಿಯಲ್ಲಿ ಇಲ್ಲ.

ಅಧಿಕಾರದಲ್ಲಿದ್ದು, ಬಲಿಷ್ಠ ಹೈಕಮ್ಯಾಂಡ್ ಹೊಂದಿರುವ, ವಿರೋಧ ಪಕ್ಷಗಳ ಘಟಾನುಘಟಿ ನಾಯಕರನ್ನೂ ಹೆದರಿಸಿಟ್ಟುಕೊಂಡಿರುವ ಬಿಜೆಪಿಯಲ್ಲೂ ಭಿನ್ನಮತ ಇದೆ. ಹೊಸಕೋಟೆಯಲ್ಲಿ ಈಗಾಗಲೇ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಮತ್ತು ಬಿಜೆಪಿಯ ಪರಾಜಿತ ಅಭ್ಯರ್ಥಿ ಶರತ್ ಪಕ್ಷೇತರರಾಗಿ ನಿಲ್ಲುವುದಾಗಿ ಘೋಷಿಸಿಯಾಗಿದೆ.

ಅಥಣಿಯಲ್ಲಿ ಪರಾಜಿತ ಅಭ್ಯರ್ಥಿ ಲಕ್ಷ್ಮಣ ಸವದಿಯೇ ಈಗ ಉಪಮುಖ್ಯಮಂತ್ರಿ. ಅವರನ್ನೇ ಈ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಎಂದು ಘೋಷಿಸಲಾಗಿದೆ. ಆದರೆ ಅಭ್ಯರ್ಥಿ ಯಾರೆಂದು ಹೇಳಿಲ್ಲ. ಮಹೇಶ್ ಕುಮಟಳ್ಳಿಯವರನ್ನು ತಾವೇ ನಿಂತು ಗೆಲ್ಲಿಸುತ್ತಾರೋ ಸೋಲಿಸುತ್ತಾರೋ ನೋಡಬೇಕು. ಉಳಿದಂತೆ ಭಿನ್ನಮತವನ್ನು ಮೇಲ್ನೋಟಕ್ಕೆ ಬಿಜೆಪಿಯು ಹತ್ತಿಕ್ಕಿದಂತೆ ತೋರುತ್ತದಾದರೂ, ಮತದಾನ ಹೇಗೆ ನಡೆಯುತ್ತದೆಂಬುದು ಗೊತ್ತಾಗಲು ಫಲಿತಾಂಶದ ದಿನದವರೆಗೂ ಕಾಯಬೇಕು. ಹೀಗಾಗಿಯೇ ಬಿಜೆಪಿಯು 7ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಹೊಂದಿಲ್ಲ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿಯ ಅಂದಾಜು ಎಷ್ಟು?

ಇನ್ನು ಕಾಂಗ್ರೆಸ್ನ ದುಸ್ಥಿತಿ ಕಡಿಮೆ ಏನಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹುಡುಕಲು ಸಾಧ್ಯವಾಗಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ಸೋಲುವಂತಾಗಲು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲಬೇಕು. ಹಾಗಾಗಿ ಭೈರತಿ ಸುರೇಶ್ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ. ಯಶವಂತಪುರ ಕ್ಷೇತ್ರದಲ್ಲಿ ಇದುವರೆಗೆ ಅಭ್ಯರ್ಥಿಯನ್ನು ಹುಡುಕಿಕೊಳ್ಳುವುದೇ ಸಾಧ್ಯವಾಗಿಲ್ಲ. ಅಲ್ಲಿ ಜವರಾಯಿಗೌಡರನ್ನು ಕಾಂಗ್ರೆಸ್‍‌ಗೆ ತರುವ ಪ್ರಯತ್ನ ಸಫಲವಾಗದೇ, ಈಗ ಜೆಡಿಎಸ್‌ನ ಜವರಾಯಿಗೌಡರನ್ನು ಗೆಲ್ಲಿಸುವಂತಹ ಕ್ಯಾಂಡಿಡೇಟ್ ಹಾಕುವುದಷ್ಟೇ ಕಾಂಗ್ರೆಸ್‌ಗೆ ಸಾಧ್ಯ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿ ಅಂಜನಪ್ಪ ಹಿಂದೆ ಸರಿದಾಗಿದೆ. ಈ ಸದ್ಯ ಅವರನ್ನೇ ಮನವೊಲಿಸುವ ಕೆಲಸ ಸಾಗಿದೆ. ಆ ಲೆಕ್ಕದಲ್ಲಿ ಸುಧಾಕರ್‌ಗೆ ನಿರಾತಂಕ ಗೆಲುವಿಗೆ ದಾರಿ ಮಾಡಿಕೊಡಲಾಗಿದೆ. ಗೋಕಾಕ್‍‌ನಲ್ಲೂ ಕ್ಯಾಂಡಿಡೇಟ್ ಅಂತಿಮವಾಗಿಲ್ಲ. ಪಕ್ಷಾಂತರದಿಂದ ತೊಂದರೆ ಅನುಭವಿಸಿದ್ದರೂ, ಕಾಗವಾಡ ಮತ್ತು ಗೋಕಾಕ್‌ನಲ್ಲಿ ಬಿಜೆಪಿಯಿಂದ ಬರುವ ಅಭ್ಯರ್ಥಿಗೆ ಕಾಯುತ್ತಿರುವ ಹೀನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಇನ್ನೂ ಕೆಲವು ಕ್ಷೇತ್ರಗಳಲ್ಲೂ ಹೀಗೆಯೇ ಆಗಬಹುದು.

ಜೆಡಿಎಸ್‍ ಮಿಕ್ಕೆಲ್ಲರಿಗಿಂತಲೂ ಕೆಟ್ಟ ಸ್ಥಿತಿಯಲ್ಲಿದೆ. ಉಪಚುನಾವಣೆಯ ಫಲಿತಾಂಶ ನೆಗೆಟಿವ್ ಆದರೆ ಬಿಜೆಪಿಗೆ ತಾನೇ ಬೆಂಬಲ ಕೊಡುವುದಾಗಿ ಗೌಡರು ಮತ್ತು ಮಗ ಘೋಷಿಸಿಯಾಗಿದೆ. ತನ್ನ ಸರ್ಕಾರವನ್ನು ಇಳಿಸಿದ ಪಕ್ಷಕ್ಕೆ ಇಷ್ಟು ಬೇಗ ಬೆಂಬಲ ನೀಡಲು ನಿಂತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆ ಕಡೆಗೆ ಗೋಪಾಲಯ್ಯ ಹೋಗಿದ್ದಷ್ಟೇ ಅಲ್ಲ; ಬಹಳ ಕಾಲದಿಂದ ಜೆಡಿಎಸ್‍‌ ದುಡಿಯುತ್ತಾ ಬಂದಿದ್ದ ಆರ್.ವಿ.ಹರೀಶ್‍ ಸಹಾ ಪಕ್ಷಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಏಕೆಂದರೆ ಅಲ್ಲಿ ಇನ್ಯಾರೋ ವಲಸೆ ಹಕ್ಕಿಯನ್ನು ಅಪ್ಪ ಮಕ್ಕಳು ಹಿಡಿದುಕೊಂಡು ಬರಲಿದ್ದಾರೆ ಎಂಬ ತನ್ನ ಭಾವನೆಯನ್ನೂ ಅವರು ಮುಚ್ಚಿಟ್ಟಿಲ್ಲ.

ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ರನ್ನು ಗೆಲ್ಲಿಸಿಕೊಂಡು ಬಂದಿದ್ದ ಜೆಡಿಎಸ್ ಈಗ ಕಾಂಗ್ರೆಸ್‌ಗೆ ಗೆಲುವು ಬಿಟ್ಟುಕೊಟ್ಟಂತಿದೆ. ದೇವೇಗೌಡರನ್ನು ಹಾವು, ವಿಷ ಎಂದೆಲ್ಲಾ ಬಯ್ದಿದ್ದ ಬಚ್ಚೇಗೌಡರ ಮಗನಿಗೆ ಹೊಸಕೋಟೆಯಲ್ಲಿ ಬೆಂಬಲ ಸೂಚಿಸಿ ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದಿರುವುದೂ ಜೆಡಿಎಸ್‍‌ನ ಪರಿಸ್ಥಿತಿ ಬಿಂಬಿಸುತ್ತಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಇನ್ನೊಂದು ಕ್ಷೇತ್ರವು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಒಲಿಯಬಹುದು, ಬಿಜೆಪಿಗೇ ಸಾಧ್ಯತೆ ಹೆಚ್ಚು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...