Homeಮುಖಪುಟಕಳ್ಳತನ ಯತ್ನದ ವೇಳೆ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ; ಗಂಭೀರವಾಗಿ ಗಾಯಗೊಂಡ ನಟ

ಕಳ್ಳತನ ಯತ್ನದ ವೇಳೆ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ; ಗಂಭೀರವಾಗಿ ಗಾಯಗೊಂಡ ನಟ

- Advertisement -
- Advertisement -

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ಮನೆಯಲ್ಲಿ ಗುರುವಾರ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ ಕಳ್ಳತನ ಯತ್ನ ನಡೆಸಿದ್ದು, ಈ ವೇಳೆ ಕನಿಷ್ಠ ಆರು ಬಾರಿ ನಟನಿಗೆ ಚಾಕುವಿನಿಂದ ಇರಿದಿದ್ದಾನೆ.

ದಾಳಿಯಿಂದ ಸೈಫ್ ಆಲಿ ಖಾನ್‌ ಅವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಬೆಳಗಿನ ಜಾವ 3.30 ಕ್ಕೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ವೈದ್ಯರ ಪ್ರಕಾರ, ಚಾಕುವಿನಿಂದ ಆದ ಒಂದು ಗಾಯವು ನಟನ ಬೆನ್ನುಹುರಿಯ ಹತ್ತಿರದಲ್ಲಿದೆ.

ಪೊಲೀಸರ ಪ್ರಕಾರ, ಶಂಕಿತ ಸೈಫ್ ಅಲಿ ಖಾನ್ ಅವರ ಮನೆಗೆ ಪ್ರವೇಶಿಸಿದಾಗ ಅವರಿಬ್ಬರ ನಡುವೆ ಜಗಳವಾಗಿದ್ದು, ಈ ಸಮಯದಲ್ಲಿ ನಟನಿಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆಯ ಸಮಯದಲ್ಲಿ ನಟನ ಕೆಲವು ಕುಟುಂಬ ಸದಸ್ಯರು ಮನೆಯಲ್ಲಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯನ್ನು ಪತ್ತೆಹಚ್ಚಲು ಮತ್ತು ಆತನ ಬಂಧನವನ್ನು ಖಚಿತಪಡಿಸಿಕೊಳ್ಳಲು ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

“ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬರು ನುಗ್ಗಿದ್ದಾನೆ. ನಟ ಮತ್ತು ವ್ಯಕ್ತಿಯಿಬ್ಬರೂ ಜಗಳವಾಡಿದ್ದಾರೆ. ನಟ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದು, ತನಿಖೆ ನಡೆಯುತ್ತಿದೆ” ಎಂದು ಸ್ಥಳೀಯ ಪ್ರದೇಶದ ಉಪ ಪೊಲೀಸ್ ಆಯುಕ್ತ ದೀಕ್ಷಿತ್ ಗೆಡಮ್ ಅವರು ಈ ವಿಷಯದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು.

ಸೈಫ್ ಅಲಿ ಖಾನ್ ಅವರ ತಂಡವು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರು ‘ಮಾಧ್ಯಮಗಳು ಮತ್ತು ಅಭಿಮಾನಿಗಳು ತಾಳ್ಮೆಯಿಂದಿರಿ’ ಎಂದು ವಿನಂತಿಸಿದ್ದಾರೆ.

“ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಮಾಧ್ಯಮಗಳು ಮತ್ತು ಅಭಿಮಾನಿಗಳು ತಾಳ್ಮೆಯಿಂದಿರಿ ಎಂದು ನಾವು ವಿನಂತಿಸುತ್ತೇವೆ. ಇದು ಪೊಲೀಸ್ ವಿಷಯ; ಪರಿಸ್ಥಿತಿಯ ಕುರಿತು ನಾವು ನಿಮಗೆ ಮಾಹಿತಿ ನೀಡುತ್ತೇವೆ” ಎಂದು ಸೈಫ್ ಅಲಿ ಖಾನ್ ಅವರ ತಂಡವು ಹೇಳಿಕೆಯಲ್ಲಿ ತಿಳಿಸಿದೆ.

ದಾಳಿಯ ನಂತರ, ಲೀಲಾವತಿ ಆಸ್ಪತ್ರೆ ಹೇಳಿಕೆಯಲ್ಲಿ, ಸೈಫ್ ಅಲಿ ಖಾನ್ ಅವರಿಗೆ ಕನಿಷ್ಠ ಆರು ಬಾರಿ ಇರಿತಕ್ಕೊಳಗಾಗಿದ್ದು, ಎರಡು ಆಳವಾದ ಗಾಯಗಳಾಗಿವೆ ಎಂದು ತಿಳಿಸಿದೆ. ಇದಲ್ಲದೆ, ಚಾಕುವಿನಿಂದ ಆದ ಗಾಯಗಳಲ್ಲಿ ಒಂದು ಅವರ ಬೆನ್ನುಹುರಿಗೆ ತುಂಬಾ ಹತ್ತಿರದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಸೈಫ್ ಅಲಿ ಖಾನ್ ಅವರನ್ನು ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಇರಿದಿದ್ದು, ಬೆಳಗಿನ ಜಾವ 3.30 ಕ್ಕೆ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಿಗೆ ಆರು ಇರಿತಗಳಾಗಿದ್ದು, ಎರಡು ಆಳವಾಗಿದ್ದವು. ಇದರಲ್ಲಿ ಒಂದು ಬೆನ್ನುಮೂಳೆಯ ಹತ್ತಿರದಲ್ಲಿದೆ. ನರಶಸ್ತ್ರಚಿಕಿತ್ಸಕ ಡಾ. ನಿತಿನ್ ಡಾಂಗೆ, ಕಾಸ್ಮೆಟಿಕ್ ಸರ್ಜನ್ ಡಾ. ಲೀನಾ ಜೈನ್ ಮತ್ತು ಅರಿವಳಿಕೆ ತಜ್ಞೆ ಡಾ. ನಿಶಾ ಗಾಂಧಿ ನೇತೃತ್ವದ ವೈದ್ಯರ ತಂಡವು ಅವರಿಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದೆ” ಎಂದು ಲೀಲಾವತಿ ಆಸ್ಪತ್ರೆಯ ಡಾ. ಉತ್ತಮಮಣಿ ತಿಳಿಸಿದ್ದಾರೆ.

ಇದನ್ನೂ ಓದಿ; ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...