Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಯುವತಿಯ ಕೊಲೆಗೆ ಯತ್ನಿಸಿದ ಮುಸ್ಲಿಂ ಯುವತಿ...ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಹಿಂದೂ ಯುವತಿಯ ಕೊಲೆಗೆ ಯತ್ನಿಸಿದ ಮುಸ್ಲಿಂ ಯುವತಿ…ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಯುವಕನೊಬ್ಬ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ರಸ್ತೆ ಮಧ್ಯೆ ಯುವತಿಯೊಬ್ಬರ ಕತ್ತು ಹಿಸುಕಲು ಪ್ರಯತ್ನಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋದಲ್ಲಿ, ದಾಳಿ ಮಾಡಿದವನಿಂದ ಯುವತಿಯನ್ನು ರಕ್ಷಿಸಲು ಹಲವಾರು ಜನರು ಮಧ್ಯಪ್ರವೇಶಿಸುತ್ತಿರುವುದನ್ನು ಕಾಣಬಹುದು.

ಈ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ ಎಂಬ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. “ತಾನು ಕರೆದಾಗ ಬರದ ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಕೊಲ್ಲಲು ಯತ್ನಿಸಿದ್ದಾನೆ” ಎಂದು ಆರೋಪಿಸಲಾಗಿದೆ.

ಜನವರಿ 6ರಂದು ‘ಯತಿ ನರಸಿಂಗಾನಂದ ಸರಸ್ವತಿ’ ಎಂಬ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಈ ಘಟನೆ ಉತ್ತರ ಪ್ರದೇಶದ ಅಮ್ರೋಹದಲ್ಲಿ ನಡೆದಿದೆ. ಜಿಹಾದಿಯೊಬ್ಬ ಹಿಂದೂ ಯುವತಿ ಮೇಲೆ ದಾಳಿ ನಡೆಸಲು ಯತ್ನಿಸಿದ್ದ. ಈ ವೇಳೆ ರಕ್ಷಣೆಗೆ ಬಂದ ಹಿಂದೂ ಯುವಕರು, ಆತನ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಫೈಟರ್ 3.0 ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಕೂಡ ಅದೇ ಪ್ರತಿಪಾದನೆಯೊಂದಿಗೆ ಜನವರಿ 5ರಂದು ವೈರಲ್ ವಿಡಿಯೋ ಹಂಚಿಕೊಂಡಿದ್ದರು.

ನಮ್ರತಾ ಸಿಂಗ್ ಎಂಬ ಇನ್ನೊಬ್ಬರು ಎಕ್ಸ್ ಬಳಕೆದಾರರು ಜನವರಿ 6ರಂದು ವಿಡಿಯೋ ಹಂಚಿಕೊಂಡು ಮೇಲ್ಗಡೆ ಉಲ್ಲೇಖಿಸಿದ ಖಾತೆಗಳಲ್ಲಿ ಮಾಡಿದ್ದ ಪ್ರತಿಪಾದನೆಯನ್ನೇ ಮಾಡಿದ್ದರು.

ಫ್ಯಾಕ್ಟ್‌ಚೆಕ್

ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಹುಡುಕಿದ್ದೇವೆ. ಈ ವೇಳೆ ಜನವರಿ 6, 2025ರಂದು ಅಮರ್ ಉಜಾಲ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ವರದಿಯ ಪ್ರಕಾರ, ಈ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಗಜ್ರೌಲಾದಲ್ಲಿ ಸಂಭವಿಸಿದೆ. ಹಾಡಹಗಲೇ ಯುವಕನೊಬ್ಬ ಮಫ್ಲರ್ ಹಾಕಿಕೊಂಡು ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಹಿಸುಕಲು ಯತ್ನಿಸಿದ್ದಾನೆ. ಅದು ವಿಫಲವಾದಾಗ ಆತ ಸ್ಥಳದಿಂದ ಪರಾರಿಯಾಗಿ ಮೊರಾದಾಬಾದ್‌ನಲ್ಲಿರುವ ತನ್ನ ಸಹೋದರಿಯ ಮನೆಯಲ್ಲಿ ಆಶ್ರಯ ಪಡೆದಿದ್ದ. ಪೊಲೀಸರು ಆತನನ್ನು ಪತ್ತೆಹಚ್ಚಿ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಆತನನ್ನು ಜೈಲಿಗೆ ಕಳುಹಿಸಲಾಗಿದೆ. ಆರೋಪಿಯನ್ನು ಅಮ್ರೋಹಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ.

ಅಮ್ರೋಹಾ ಪೊಲೀಸರ ಎಕ್ಸ್ ಹ್ಯಾಂಡಲ್ ಅನ್ನೂ ನಾವು ಪರಿಶೀಲಿಸಿದ್ದೇವೆ. ಅದರಲ್ಲಿ ಪೊಲೀಸರು ಘಟನೆ ಕುರಿತು ಸ್ಪಷ್ಟೀಕರಣ ನೀಡಿರುವುದು ಕಂಡು ಬಂದಿದೆ.

“ಪ್ರಕರಣ ಸಂಬಂಧ ಆರೋಪಿಯನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಒಂದೇ ಜಾತಿಯವರು ಮತ್ತು ಪರಸ್ಪರ ಪರಿಚಿತರು. ಹಾಗಾಗಿ, ದಯವಿಟ್ಟು ದಾರಿ ತಪ್ಪಿಸುವ ಸುದ್ದಿಗಳನ್ನು ಹರಡಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮ ವರದಿ ಮತ್ತು ಪೊಲೀಸರ ಸೃಷ್ಟೀಕರಣದಿಂದ ವೈರಲ್ ವಿಡಿಯೋ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಗಜ್ರೌಲಾದಲ್ಲಿ ನಡೆದ ಘಟನೆಯದ್ದು, ಅದರ ಹಿಂದೆ ಯಾವುದೇ ಕೋಮು ಆಯಾಮಗಳಿಲ್ಲ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಲ್ಲಿ ಮಾಡಿರುವ ಪ್ರತಿಪಾದನೆ ಸುಳ್ಳು ಎಂದು ಗೊತ್ತಾಗಿದೆ.

FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...