ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್ಚೆಕ್
ಫೇಸ್ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ಚೆಕ್:
ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.
ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್ಗಳನ್ನು ಗೂಗಲ್ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್ಗಳಲ್ಲಿ ಅಪ್ಲೋಡ್ ಆಗಿರುವುದು ಕಂಡು ಬಂದಿವೆ.
2009ರ ನವೆಂಬರ್ 18 ರಂದು ಆಜ್ತಕ್ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.
ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್ನಿಂದ ಕಾಣಬಹುದು.
ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್ಸ್ಟ್ಯಾಂಪ್ನಲ್ಲಿ ತೋರಿಸಲಾಗಿದೆ.
ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.
ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.
ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.
(ಈ ಫ್ಯಾಕ್ಟ್ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)
ಇದನ್ನೂಓದಿ: ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್


