Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...