Homeಕರ್ನಾಟಕಜನವರಿ 25ಕ್ಕೆ "ಪರಿಷೆ" ತಂಡದಿಂದ "ಸಾಂಸ್ಕೃತಿಕ ಸಂವಿಧಾನ ಪರಿಷೆ"

ಜನವರಿ 25ಕ್ಕೆ “ಪರಿಷೆ” ತಂಡದಿಂದ “ಸಾಂಸ್ಕೃತಿಕ ಸಂವಿಧಾನ ಪರಿಷೆ”

- Advertisement -
- Advertisement -

ಇದೇ ಜನವರಿ 25ರಂದು ಬೆಂಗಳೂರಿನ ಸೈಂಟ್‌ ಜೋಸೆಫ್‌ ಯುನಿವರ್ಸಿಟಿಯ ಝೇವಿಯರ್‌ ಹಾಲ್‌ ನಲ್ಲಿ ಬೆಳಗ್ಗೆ 9.30 ರಿಂದ ಸಂಜೆಯವರೆಗೂ ” ಸಾಂಸ್ಕೃತಿಕ ಸಂವಿಧಾನ ಪರಿಷೆ” ಮಾಡಲು ನಿರ್ಧರಿಸಲಾಗಿದೆ ಎಂದು ಪರಿಷೆ ತಂಡದ ಗುರುಬಸವ ಬರಗೂರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ರಾಜ್ಯದ ಜೀವಪರ ಕಲಾವಿದರ ಒಗ್ಗೂಡುವಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಕಲಾವಿದರು ಸಂವಿಧಾನದ ಮೌಲ್ಯ, ಆಶಯಗಳ ಪರ ಇರುವ ಸಾಂಸ್ಕೃತಿಕ ಪ್ರದರ್ಶನಗಳನ್ನು ನೀಡಲು ಈ ಮೂಲಕ ಆಹ್ವಾನಿಸುತ್ತೇವೆ ಎಂದಿದ್ದಾರೆ.

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲಾ ಜನರ ಹಿತ ಬಯಸುವ ಮಹಿಳೆಯರ, ನೊಂದವರ, ಬಡವರ, ಶೋಷಿತರಿಗೆ ಸಾಮಾಜಿಕ ನ್ಯಾಯ ಕೊಟ್ಟ ಸಮತೆ, ಸಮಾನತೆ, ಬ್ರಾತೃತ್ವ, ಭಾವದ, ಜಾತ್ಯತೀತ – ಸಾಮಾಜಿಕ ನ್ಯಾಯ ಬಹುತ್ವವನ್ನು ಒಳಗೊಂಡ, ಪ್ರಜಾಪ್ರಭುತ್ವ ಆಶಯದ ಭಾರತದ ಸಂವಿಧಾನ ಮತ್ತು ಅದರ ಮೌಲ್ಯಗಳನ್ನು ಈ ನೆಲದ ಹಲವು ಸಾಂಸ್ಕೃತಿಕ ಪ್ರಕಾರಗಳಾದ ತಮಟೆ ಕುಣಿತ, ಹಾಡು, ತತ್ವಪದ, ನಾಟಕ, ಕಥನ ಹಾಡು, ಭರತ ನಾಟ್ಯ, ಹಸಿರು ಪದ, ಯಕ್ಷಗಾನ, ಚೌಡಿಕೆ ಪದ ಹಾಗೂ ಹಲವು ನೆಲ ಸಂಗೀತ ಪರಿಕರಗಳ ಸದ್ದುಗಳ ಮೂಲಕ ಅಭಿವ್ಯಕ್ತಿಸುವ “ಸಾಂಸ್ಕೃತಿಕ ಸಂವಿಧಾನ ಪರಿಷೆ” ಯನ್ನು ಸಂವಿಧಾನ ಆಶಯದ ಪರವಾಗಿ ಇರುವ ಕರ್ನಾಟಕದ ಜೀವಪರ ಕಲಾವಿದರು, ಸಾಹಿತಿಗಳು ಸೇರಿ ಜನವರಿ 25 ಶನಿವಾರ ದಂದು ಇಡೀ ದಿನ
ಬೆಂಗಳೂರಿನ ಶಾಂತಿನಗರದಲ್ಲಿರುವ ಸೇಂಟ್ ಜೋಸೆಫ್ ಯೂನಿವರ್ಸಿಟಿಯಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರಿಷೆಯಲ್ಲಿ ಸಂವಿಧಾನ ಮೌಲ್ಯ ಇರುವ ಪುಸ್ತಕ, ಟೀ ಸರ್ಟ್, ಕೀ ಬಂಚ್, ಪೆನ್ಸ್, ಹೀಗೆ ಅನೇಕ ಪರಿಕರಗಳ ಮಳಿಗೆಗಳನ್ನು ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೇರು ಬೆವರು ಕಲಾ ಬಳಗದ ಚಂದ್ರಶೇಖರ್ ರವರ ನಂ. 8867361110 ಅನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿಕೆಯಲ್ಲಿ ಹೇಳಿದ್ದಾರೆ.

ಛತ್ತೀಸ್‌ಗಢ| ಸುಕ್ಮಾದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ; 12 ನಕ್ಸಲರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...