Homeಕರ್ನಾಟಕಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

- Advertisement -
- Advertisement -

ಅಮೆರಿಕದ ಕಾನ್ಸುಲೇಟ್ ಕಚೇರಿಯ ಶಾಖೆಯು ಇಂದಿನಿಂದ (ಜನವರಿ 17, 2025 ಶುಕ್ರವಾರ) ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲಿದೆ.

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಮತ್ತು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗ್ಯಾರ್‌ಸೆಟ್‌ ಅವರು ನೂತನ ಕಚೇರಿಗೆ ಚಾಲನೆ ನೀಡಲಿದ್ದಾರೆ.

ನಗರದ ವಿಠ್ಠಲ್ ಮಲ್ಯ ರಸ್ತೆಯ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ವಿದೇಶಾಂಗ ವಾಣಿಜ್ಯ ವ್ಯವಹಾರಗಳ ಸೇವಾ ಕಚೇರಿ ಇದ್ದು, ಅದಕ್ಕೆ ಹೊಂದಿಕೊಂಡಂತೆಯೇ ನೂತನ ಕಾನ್ಸುಲೇಟ್ ಆರಂಭಿಸಲಾಗುತ್ತಿದೆ.

ಇದು ತಾತ್ಕಾಲಿಕ ಕಚೇರಿಯಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಕಚೇರಿಗೆ ಕಾನ್ಸುಲೇಟ್ ಸ್ಥಳಾಂತರಗೊಳ್ಳಲಿದೆ ಎಂದು ವರದಿಯಾಗಿದೆ.

ಬಹು ನಿರೀಕ್ಷಿತ ಕಾನ್ಸುಲೇಟ್ ಕಚೇರಿ ಆರಂಭಗೊಳ್ಳುತ್ತಿದ್ದಂತೆ ಅದರ ಕ್ರೆಡಿಟ್ ಪಡೆಯಲುಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ಶುರುವಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾನ್ಸುಲೇಟ್ ಕಚೇರಿ ಆರಂಭದ ಸಂಪೂರ್ಣ ಕ್ರೆಡಿಟ್ ಕೇಂದ್ರ ಸರ್ಕಾರಕ್ಕೆ ಕೊಟ್ಟರೆ, ಕರ್ನಾಟಕ ಸರ್ಕಾರದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾವು ಮಾಡಿದ್ದು ಎನ್ನುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಕಾನ್ಸುಲೇಟ್ ಕಚೇರಿ ತೆರೆಯುವ ಕನಸು ನನಸಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಶ್ಲಾಘಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ, ಸೂರ್ಯ ಅವರು 2019 ರಿಂದ ಕಾನ್ಸುಲೇಟ್ ಪರವಾಗಿ ವಕಾಲತ್ತು ವಹಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮಾರ್ಚ್ 2023ರಲ್ಲಿ ಬೆಂಗಳೂರು ಭೇಟಿಯ ಸಮಯದಲ್ಲಿ ಸಚಿವ ಜೈಶಂಕರ್ ಅವರಿಗೆ ಬರೆದ ಪತ್ರ ಮತ್ತು ಚರ್ಚೆಗಳನ್ನು ಉಲ್ಲೇಖಿಸಿದ್ದಾರೆ.

ಸಚಿವ ಜೈಶಂಕರ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ‘ಮೈಸೂರು ಪಾಕ್’ ಕೊಟ್ಟು ಧನ್ಯವಾದ ಸಲ್ಲಿಸಿದ್ದಾರೆ. “ಪ್ರಧಾನ ಮಂತ್ರಿಗಳು ಮತ್ತು ನಿಮ್ಮಿಂದ ಇದು ಸಾಕಾರಾವಾಯಿತು” ಎಂದಿದ್ದಾರೆ.

ತೇಜಸ್ವಿ ಸೂರ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ” ಬಿಜೆಪಿ ಅನಗತ್ಯ ಕ್ರೆಡಿಟ್ ಪಡೆದು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ. ಹೂಡಿಕೆ ಮತ್ತು ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಿರುವ ಬೆಂಗಳೂರಿನ ಸ್ಥಾನಮಾನವು ರಾಜಕೀಯ ಪ್ರಭಾವವನ್ನು ಲೆಕ್ಕಿಸದೆ ಸ್ವಾಭಾವಿಕವಾಗಿಯೇ ಅಮೆರಿಕದ ದೂತಾವಾಸಕ್ಕೆ ಸೂಕ್ತ ಸ್ಥಳವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, “ಗುಜರಾತ್‌ನಲ್ಲಿ ಕಾನ್ಸುಲೇಟ್ ಕಚೇರಿ ಸ್ಥಾಪಿಸಲು ಆದ್ಯತೆ ನೀಡಬೇಕು ಎಂಬ ಸುಪ್ರೀಂ ನಾಯಕನ ಒತ್ತಡವು ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲು ಹೇಗೆ ವಿಳಂಬವಾಯಿತು ಎಂಬುದರ ಕುರಿತು ಬಿಜೆಪಿ ಸಂಸದರು ಮತ್ತು ಸಚಿವ ಜೈಶಂಕರ್ ಅವರು ಪ್ರಾಮಾಣಿಕವಾಗಿ ಮಾತನಾಡಬೇಕು” ಎಂದು ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿಯವ ಹೆಸರನ್ನು ಉಲ್ಲೇಖಿಸದೆ ಟಾಂಗ್ ಕೊಟ್ಟಿದ್ದಾರೆ.

“ಕಾನ್ಸುಲೇಟ್ ಸ್ಥಾಪಿಸುವ ನಿರ್ಧಾರವು ಆರ್ಥಿಕ ಆದ್ಯತೆಗಳ ಆಧಾರದ ಮೇಲೆ ಸರ್ಕಾರಗಳ ನಡುವಿನ ಪರಸ್ಪರ ಒಪ್ಪಂದವಾಗಿದೆಯೇ ಹೊರತು, ಬಿಜೆಪಿ ಸಂಸದರು ಅಥವಾ ವಿದೇಶಾಂಗ ಸಚಿವರ ಆಶಯಗಳು ಅಥವಾ ವೈಯಕ್ತಿಕ ಆದ್ಯತೆಗಳ ಮೇಲೆ ಅಲ್ಲ” ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದ್ದಾರೆ.

ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗ್ಯಾರ್‌ಸೆಟ್ ಅವರು ಡಿಸೆಂಬರ್ 2024ರಲ್ಲಿ ನವದೆಹಲಿಯಲ್ಲಿ ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ (ಯುಎಸ್ಐಬಿಸಿ) ಆಯೋಜಿಸಿದ್ದ ಅಧಿವೇಶನದಲ್ಲಿ 2025ರಲ್ಲಿ ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲಾಗುವುದು ಎಂದು ಘೋಷಿಸಿದ್ದರು.

ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ ಅವರು “ಭರವಸೆ ನೀಡಿದಂತೆ ನಡೆದುಕೊಳ್ಳಲಾಗಿದೆ. ಕಳೆದ ಕೆಲವು ವರ್ಷಗಳಿಂದ ನಾನು ಅಮೆರಿಕದ ಪ್ರತಿನಿಧಿಗಳೊಂದಿಗೆ ಚರ್ಚೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯುವ ಅಗತ್ಯವನ್ನು ಒತ್ತಿ ಹೇಳುತ್ತಿದ್ದೇನೆ. ಈ ಪ್ರಯತ್ನಗಳು ಫಲಪ್ರದವಾಗುವುದನ್ನು ನೋಡಲು ಸಂತೋಷವಾಗುತ್ತಿದೆ” ಎಂದು ಹೇಳಿದ್ದರು.

ಕಾನ್ಸುಲೇಟ್ ಉದ್ಘಾಟನೆ ಮಹತ್ವದ್ದಾಗಿದ್ದರೂ, ಆರಂಭದಲ್ಲಿ ಇದು ಅಮೆರಿಕದ ನಾಗರಿಕರು ಮತ್ತು ವ್ಯವಹಾರಗಳಿಗೆ ಮಾತ್ರ ಸೇವೆ ಸಲ್ಲಿಸಲಿದೆ. ವೀಸಾ ಸಂಸ್ಕರಣಾ ಸೇವೆಗಳು ಆರಂಭವಾಗಲು ಹೆಚ್ಚುವರಿ ಸಮಯ ತೆಗೆದುಕೊಳ್ಳುತ್ತದೆ ಎಂದು ಖರ್ಗೆ ತಿಳಿಸಿದ್ದಾರೆ. ಬಿಜೆಪಿ ನಾಯಕರು ಅದರ ಸಿದ್ಧತೆ ಮತ್ತು ವ್ಯಾಪ್ತಿಯ ಬಗ್ಗೆ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಜನರು ಯುಎಸ್‌ ವೀಸಾ ಮತ್ತು ಇತರ ಸೇವೆಗಳನ್ನು ಪಡೆಯುವ ಸಲುವಾಗು ಮುಂಬೈ, ಹೈದರಾಬಾದ್ ಮತ್ತು ಚೆನ್ನೈಗೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ತೆರೆಯಲಾಗುತ್ತಿದೆ.

ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...