Homeಮುಖಪುಟಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

ಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

- Advertisement -
- Advertisement -

ಜನವರಿ 5, 2022ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಫಿರೋಝ್‌ಪುರ ಜಿಲ್ಲೆಯ ಭಾರತಿ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಯೂನಿಯನ್‌ನ 25 ಸದಸ್ಯರ (ರೈತರ) ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ.

ಫಿರೋಝ್‌ಪುರದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿದ್ದ ಪ್ರಧಾನಿ ನರೇಂದ್ರ ಮೋದಿ, ಪಿಯರೇನಾ ಫ್ಲೈಓವರ್‌ನಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದ ಕಾರಣ ಕೆಲ ಹೊತ್ತು ರಸ್ತೆಯಲ್ಲೇ ಬಾಕಿ ಆಗಿದ್ದರು. ಬಳಿಕ ಅವರು ಹಿಂದಿರುಗಿದ್ದರು.

ಈ ಘಟನೆ ಸಂಬಂಧ ಜನವರಿ 6, 2022ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 283 (ಸಾರ್ವಜನಿಕ ದಾರಿಯಲ್ಲಿ ಅಡಚಣೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ.

ನಂತರ ದುರ್ಬಲ ಎಫ್‌ಐಆರ್ ಬಗ್ಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ, ಪ್ರಕರಣದ ತನಿಖೆಗೆ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ಆ ತಂಡದ ತನಿಖೆಯ ಆಧಾರದ ಮೇಲೆ, ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 353 (ಸಾರ್ವಜನಿಕ ಸೇವಕನ ಮೇಲೆ ಹಲ್ಲೆ), 341 (ಸಂಯಮ ಮೀರಿ ವರ್ತಿಸುವುದು), 186 (ಕರ್ತವ್ಯಕ್ಕೆ ಅಡ್ಡಿ), 149 (ಅಕ್ರಮ ಸಭೆ) ಮತ್ತು ರಾಷ್ಟ್ರೀಯ ಹೆದ್ದಾರಿ ಕಾಯ್ದೆಯ 8-ಬಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಹೆಚ್ಚುವರಿ ಆರೋಪಗಳನ್ನು ಹೊರಿಸಲಾಗಿದೆ.

ಭಾರತಿ ಕಿಸಾನ್ ಯೂನಿಯನ್ (ಬಿಕೆಯು) ಕ್ರಾಂತಿಕಾರಿಯ ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಒಕ್ಕೂಟದ ಇತರ ಸದಸ್ಯರು ಮತ್ತು ನಾಯಕರು ಸೇರಿದಂತೆ 26 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆರೋಪಿಗಳಲ್ಲಿ ಒಬ್ಬರಾದ ಮೇಜರ್ ಸಿಂಗ್ ನಿಧನರಾಗಿದ್ದು, 25 ವ್ಯಕ್ತಿಗಳು ಬಂಧನದ ಭೀತಿಯಲ್ಲಿದ್ದಾರೆ.

ಜನವರಿ 3,2025ರಂದು ಫಿರೋಝ್‌ಪುರ ನ್ಯಾಯಾಲಯ ಹೊರಡಿಸಿದ ಬಂಧನ ವಾರೆಂಟ್‌ಗಳ ಪ್ರಕಾರ, ಆರೋಪಿಗಳು ಅನೇಕ ಸಮನ್ಸ್ ಮತ್ತು ವಾರೆಂಟ್‌ಗಳನ್ನು ನೀಡಿದ್ದರೂ ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿದ್ದಾರೆ. ಜನವರಿ 22ರೊಳಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕುಲ್‌ಗಢಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿಗೆ ಸೂಚಿಸಲಾಗಿದೆ.

ಫಿರೋಝ್‌ಪುರ ಪೊಲೀಸರು ಬಂಧನ ವಾರೆಂಟ್‌ ಹೊರಡಿಸಿರುವುದನ್ನು ದೃಢಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆರೋಪಿಗಳಲ್ಲಿ ಒಬ್ಬರಾದ ಪಿಯರೇನಾದ ಕಮಲ್‌ಜೀತ್ ಸಿಂಗ್ (37) ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜನವರಿ 14 ರಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ವರೀಂದರ್ ಅಗರ್ವಾಲ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಪಂಜಾಬ್ ಪೊಲೀಸರು ಆರೋಪಿಗಳಿಗೆ ಬಂಧನ ವಾರೆಂಟ್‌ಗಳನ್ನು ಕಳುಹಿಸುತ್ತಿದ್ದಾರೆ. ಅವರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ, ತನಿಖೆಗೆ ಸಹಕರಿಸಲು ಕುಟುಂಬ ಸದಸ್ಯರ ಮೇಲೆ ಒತ್ತಡ ಹೇರುತ್ತಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಗುರಿಯಾಗಿಸಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಇದನ್ನು ಮಾಡಲಾಗುತ್ತಿದೆ” ಎಂದು ಬಿಕೆಯು ಕ್ರಾಂತಿಕಾರಿಯ ಅಧ್ಯಕ್ಷ ಸುರ್ಜೀತ್ ಸಿಂಗ್ ಫುಲ್ ಆರೋಪಿಸಿದ್ದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರೈತರನ್ನು ಗುರಿಯಾಗಿಸಬೇಡಿ ಎಂದು ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ಮೇಲ್ಸೇತುವೆಯಲ್ಲಿ (ಪಿಯರೇನಾ ಫ್ಲೈಓವರ್‌) ಯಾವುದೇ ಘರ್ಷಣೆ ನಡೆದಿಲ್ಲವಾದ್ದರಿಂದ ಕೊಲೆ ಯತ್ನದ ಆರೋಪಗಳು ಆಧಾರರಹಿತವಾಗಿವೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಯ ಮೇರೆಗೆ ನಾವು ಪ್ರಧಾನಿಯವರ ಭೇಟಿಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದೆವು. ಎಫ್‌ಐಆರ್ ಮತ್ತು ನಂತರದ ಕ್ರಮವು ರೈತ ಒಕ್ಕೂಟದ ನಾಯಕರನ್ನು ಬೆದರಿಸಲು ಕೇಂದ್ರ ಸರ್ಕಾರದ ಒತ್ತಡದ ಪರಿಣಾಮವಾಗಿದೆ” ಎಂದು ಸುರ್ಜೀತ್ ಸಿಂಗ್ ಕಿಡಿಕಾರಿದ್ದಾರೆ.

ಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...