Homeಚಳವಳಿ'ಎಮರ್ಜೆನ್ಸಿ' ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

- Advertisement -
- Advertisement -

ನಟಿ-ಸಂಸದೆ ಕಂಗನಾ ರನೌತ್ ಅವರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀವನ ಚರಿತ್ರೆ ಕುರಿತಾದ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಯ ದಿನವಾದ ಇಂದು (ಜ.17) ಈ ಹಿಂದಿನ ದಿನಕ್ಕಿಂತಲೂ ಇನ್ನೂ ಪ್ರಕ್ಷುಬ್ದ ವಾತಾವರಣವಿದೆ. ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್‌ಜಿಪಿಸಿ) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ರಾಜ್ಯದಲ್ಲಿ ಅದರ ಪ್ರದರ್ಶನದ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿದೆ. ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಬಿಡುಗಡೆಯನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಕಳುಹಿಸಿದ್ದಾರೆ.

ಚಿತ್ರವು ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಏತನ್ಮಧ್ಯೆ, ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಪತ್ರದ ಪ್ರತಿಯನ್ನು ಗುಂಪಿನ ಅಧಿಕೃತ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಳ್ಳಲಾಗಿದೆ. “ಸಿಖ್ಖರ ಪವಿತ್ರ ದೇವಾಲಯ ಶ್ರೀ ಹರ್ಮಂದರ್ ಸಾಹಿಬ್, ಅತ್ಯುನ್ನತ ಧಾರ್ಮಿಕ ಸ್ಥಳ ಅಕಲ್ ತಖ್ತ್ ಸಾಹಿಬ್ ಮತ್ತು ಇತರ ಗುರುದ್ವಾರಗಳ ಮೇಲಿನ ದಾಳಿಗಳು ಮತ್ತು ಸಿಖ್ ನರಮೇಧ (1984 ರ)ಕ್ಕೆ ಸಂಬಂಧಿಸಿದ ಸಂಗತಿಗಳನ್ನು ಮರೆಮಾಚುವ ಮೂಲಕ, ಈ ಚಿತ್ರವು ಸಿಖ್ ವಿರೋಧಿ ಕಾರ್ಯಸೂಚಿಯಡಿಯಲ್ಲಿ ವಿಷವನ್ನು ಹರಡಲು ಕೆಲಸ ಮಾಡುತ್ತದೆ. ಆದ್ದರಿಂದ, ಪಂಜಾಬ್‌ನಲ್ಲಿ ಈ ಚಿತ್ರವನ್ನು ಪ್ರದರ್ಶಿಸುವುದನ್ನು ನಿಷೇಧಿಸಬೇಕೆಂದು ನಾವು ಮತ್ತೆ ಒತ್ತಾಯಿಸುತ್ತೇವೆ. ಬಿಡುಗಡೆಯಾದರೆ, ನಾವು ಅದನ್ನು ಬಲವಾಗಿ ಪ್ರತಿಭಟಿಸಬೇಕಾಗುತ್ತದೆ” ಎಂದಿದ್ದಾರೆ.

ಕೋಲಾಹಲದ ನಡುವೆ, ಅಮೃತಸರದ ಚಿತ್ರಮಂದಿರಗಳ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ಎಸ್‌ಜಿಪಿಸಿ ಸದಸ್ಯರೊಬ್ಬರು ಈ ವಿಷಯದ ಕುರಿತು ಎಎನ್‌ಐ ಜೊತೆ ಮಾತನಾಡುತ್ತಾ, “ಕಂಗನಾ ರನೌತ್ ಅವರ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ ನಮ್ಮ ಇಂದಿನ ಪ್ರತಿಭಟನೆ. ಈ ಚಿತ್ರದಲ್ಲಿ ಸಿಖ್ ಧರ್ಮದ ಇತಿಹಾಸ ಮತ್ತು 1984ರ ಇತಿಹಾಸವನ್ನು ವಿರೂಪಗೊಳಿಸಿದ ರೀತಿಯಲ್ಲಿ ಚಿತ್ರಿಸಲಾಗಿದೆ. ಇದರ ಟೀಸರ್ ಹೊರಬಂದಾಗಲೂ ನಾವು ಇದರ ವಿರುದ್ಧ ಮೊದಲೇ ಪ್ರತಿಭಟಿಸಿದ್ದೆವು, ಆದರೆ ಸರ್ಕಾರ ಅದರ ವಿರುದ್ಧ ಯಾವ ಕ್ರಮಕೈಗೊಂಡಿಲ್ಲ. ಸೆನ್ಸಾರ್ ಮಂಡಳಿ ಅದನ್ನು ನಿಷೇಧಿಸುವ ಬದಲು ಹಸಿರು ನಿಶಾನೆ ತೋರಿಸಿದೆ. ಚಿತ್ರದ ಪ್ರದರ್ಶನದ ವಿರುದ್ಧ ಪ್ರತಿಭಟಿಸಲು ನಾವು ನಿರ್ಧರಿಸಿದ್ದೇವೆ. ಇಂದು ಚಿತ್ರಮಂದಿರದ ಮಾಲೀಕರು ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಲಿಲ್ಲ. ಆದರೆ ದಿನ ಕಳೆದಂತೆ ಈ ಕುರಿತು ಏನೂ ಮಾಡುತ್ತಾರೆ ಎಂಬುದನ್ನು ಕಾಯ್ದು ನೋಡಬೇಕು. ಇದು ಹೀಗೆಯೇ ಮುಂದುವರಿದರೆ, ಎಲ್ಲವೂ ಸರಿಯಾಗುತ್ತದೆ. ಇಲ್ಲದಿದ್ದರೆ ಚಿತ್ರ ಬಿಡುಗಡೆಯಾದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಪಂಜಾಬ್ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆಯ ಅಡಚಣೆಗೆ ಕಾರಣವಾಗಿರುತ್ತದೆ. ಏಕೆಂದರೆ ನಾವು ಮುಖ್ಯಮಂತ್ರಿಗೂ ಪತ್ರ ಬರೆದಿದ್ದೆವು, ಆದರೆ ಅವರಿಂದ ಯಾವುದೇ ಉತ್ತರ ಬಂದಿಲ್ಲ.” ಎಂದಿದ್ದಾರೆ.

1975ರಲ್ಲಿ ಗಾಂಧಿಯವರು ಹೇರಿದ ತುರ್ತು ಪರಿಸ್ಥಿತಿಯ ಅವಧಿಯ ಜೊತೆಗೆ, ಚಿತ್ರವು ಆಗಿನ ಪ್ರಧಾನಿಯ ಹತ್ಯೆ ಮತ್ತು 80ರ ದಶಕದಲ್ಲಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ನೇತೃತ್ವದ ಖಲಿಸ್ತಾನ್ ಚಳುವಳಿಯನ್ನು ಸಹ ಚಿತ್ರಿಸುತ್ತದೆ. ಇದನ್ನು ಬಿಡುಗಡೆಯಾದ ಟ್ರೇಲರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

ವಿವಿಧ ಸಿಖ್ ಸಮುದಾಯಗಳು ಚಿತ್ರದಲ್ಲಿ ನಿರ್ಮಾಪಕರು ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ್ದಾರೆ ಮತ್ತು ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿವೆ ಮತ್ತು ಇಂಟರ್ನೆಟ್‌ನಲ್ಲಿ ಈ ಹಿಂದೆ ಬಿಡುಗಡೆಯಾದ ಪ್ರೋಮೋವನ್ನು ವಿರೋಧಿಸಿವೆ.

ಗೋಧ್ರಾ ರೈಲು ದಹನ ದುರಂತ: ಫೆ.13ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...