Homeಚಳವಳಿ'ಎಮರ್ಜೆನ್ಸಿ' ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

- Advertisement -
- Advertisement -

ನಟಿ-ಸಂಸದೆ ಕಂಗನಾ ರನೌತ್ ಅವರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀವನ ಚರಿತ್ರೆ ಕುರಿತಾದ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಯ ದಿನವಾದ ಇಂದು (ಜ.17) ಈ ಹಿಂದಿನ ದಿನಕ್ಕಿಂತಲೂ ಇನ್ನೂ ಪ್ರಕ್ಷುಬ್ದ ವಾತಾವರಣವಿದೆ. ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್‌ಜಿಪಿಸಿ) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ರಾಜ್ಯದಲ್ಲಿ ಅದರ ಪ್ರದರ್ಶನದ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿದೆ. ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಬಿಡುಗಡೆಯನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಕಳುಹಿಸಿದ್ದಾರೆ.

ಚಿತ್ರವು ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಏತನ್ಮಧ್ಯೆ, ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಪತ್ರದ ಪ್ರತಿಯನ್ನು ಗುಂಪಿನ ಅಧಿಕೃತ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಳ್ಳಲಾಗಿದೆ. “ಸಿಖ್ಖರ ಪವಿತ್ರ ದೇವಾಲಯ ಶ್ರೀ ಹರ್ಮಂದರ್ ಸಾಹಿಬ್, ಅತ್ಯುನ್ನತ ಧಾರ್ಮಿಕ ಸ್ಥಳ ಅಕಲ್ ತಖ್ತ್ ಸಾಹಿಬ್ ಮತ್ತು ಇತರ ಗುರುದ್ವಾರಗಳ ಮೇಲಿನ ದಾಳಿಗಳು ಮತ್ತು ಸಿಖ್ ನರಮೇಧ (1984 ರ)ಕ್ಕೆ ಸಂಬಂಧಿಸಿದ ಸಂಗತಿಗಳನ್ನು ಮರೆಮಾಚುವ ಮೂಲಕ, ಈ ಚಿತ್ರವು ಸಿಖ್ ವಿರೋಧಿ ಕಾರ್ಯಸೂಚಿಯಡಿಯಲ್ಲಿ ವಿಷವನ್ನು ಹರಡಲು ಕೆಲಸ ಮಾಡುತ್ತದೆ. ಆದ್ದರಿಂದ, ಪಂಜಾಬ್‌ನಲ್ಲಿ ಈ ಚಿತ್ರವನ್ನು ಪ್ರದರ್ಶಿಸುವುದನ್ನು ನಿಷೇಧಿಸಬೇಕೆಂದು ನಾವು ಮತ್ತೆ ಒತ್ತಾಯಿಸುತ್ತೇವೆ. ಬಿಡುಗಡೆಯಾದರೆ, ನಾವು ಅದನ್ನು ಬಲವಾಗಿ ಪ್ರತಿಭಟಿಸಬೇಕಾಗುತ್ತದೆ” ಎಂದಿದ್ದಾರೆ.

ಕೋಲಾಹಲದ ನಡುವೆ, ಅಮೃತಸರದ ಚಿತ್ರಮಂದಿರಗಳ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ಎಸ್‌ಜಿಪಿಸಿ ಸದಸ್ಯರೊಬ್ಬರು ಈ ವಿಷಯದ ಕುರಿತು ಎಎನ್‌ಐ ಜೊತೆ ಮಾತನಾಡುತ್ತಾ, “ಕಂಗನಾ ರನೌತ್ ಅವರ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ ನಮ್ಮ ಇಂದಿನ ಪ್ರತಿಭಟನೆ. ಈ ಚಿತ್ರದಲ್ಲಿ ಸಿಖ್ ಧರ್ಮದ ಇತಿಹಾಸ ಮತ್ತು 1984ರ ಇತಿಹಾಸವನ್ನು ವಿರೂಪಗೊಳಿಸಿದ ರೀತಿಯಲ್ಲಿ ಚಿತ್ರಿಸಲಾಗಿದೆ. ಇದರ ಟೀಸರ್ ಹೊರಬಂದಾಗಲೂ ನಾವು ಇದರ ವಿರುದ್ಧ ಮೊದಲೇ ಪ್ರತಿಭಟಿಸಿದ್ದೆವು, ಆದರೆ ಸರ್ಕಾರ ಅದರ ವಿರುದ್ಧ ಯಾವ ಕ್ರಮಕೈಗೊಂಡಿಲ್ಲ. ಸೆನ್ಸಾರ್ ಮಂಡಳಿ ಅದನ್ನು ನಿಷೇಧಿಸುವ ಬದಲು ಹಸಿರು ನಿಶಾನೆ ತೋರಿಸಿದೆ. ಚಿತ್ರದ ಪ್ರದರ್ಶನದ ವಿರುದ್ಧ ಪ್ರತಿಭಟಿಸಲು ನಾವು ನಿರ್ಧರಿಸಿದ್ದೇವೆ. ಇಂದು ಚಿತ್ರಮಂದಿರದ ಮಾಲೀಕರು ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಲಿಲ್ಲ. ಆದರೆ ದಿನ ಕಳೆದಂತೆ ಈ ಕುರಿತು ಏನೂ ಮಾಡುತ್ತಾರೆ ಎಂಬುದನ್ನು ಕಾಯ್ದು ನೋಡಬೇಕು. ಇದು ಹೀಗೆಯೇ ಮುಂದುವರಿದರೆ, ಎಲ್ಲವೂ ಸರಿಯಾಗುತ್ತದೆ. ಇಲ್ಲದಿದ್ದರೆ ಚಿತ್ರ ಬಿಡುಗಡೆಯಾದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಪಂಜಾಬ್ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆಯ ಅಡಚಣೆಗೆ ಕಾರಣವಾಗಿರುತ್ತದೆ. ಏಕೆಂದರೆ ನಾವು ಮುಖ್ಯಮಂತ್ರಿಗೂ ಪತ್ರ ಬರೆದಿದ್ದೆವು, ಆದರೆ ಅವರಿಂದ ಯಾವುದೇ ಉತ್ತರ ಬಂದಿಲ್ಲ.” ಎಂದಿದ್ದಾರೆ.

1975ರಲ್ಲಿ ಗಾಂಧಿಯವರು ಹೇರಿದ ತುರ್ತು ಪರಿಸ್ಥಿತಿಯ ಅವಧಿಯ ಜೊತೆಗೆ, ಚಿತ್ರವು ಆಗಿನ ಪ್ರಧಾನಿಯ ಹತ್ಯೆ ಮತ್ತು 80ರ ದಶಕದಲ್ಲಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ನೇತೃತ್ವದ ಖಲಿಸ್ತಾನ್ ಚಳುವಳಿಯನ್ನು ಸಹ ಚಿತ್ರಿಸುತ್ತದೆ. ಇದನ್ನು ಬಿಡುಗಡೆಯಾದ ಟ್ರೇಲರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

ವಿವಿಧ ಸಿಖ್ ಸಮುದಾಯಗಳು ಚಿತ್ರದಲ್ಲಿ ನಿರ್ಮಾಪಕರು ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ್ದಾರೆ ಮತ್ತು ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿವೆ ಮತ್ತು ಇಂಟರ್ನೆಟ್‌ನಲ್ಲಿ ಈ ಹಿಂದೆ ಬಿಡುಗಡೆಯಾದ ಪ್ರೋಮೋವನ್ನು ವಿರೋಧಿಸಿವೆ.

ಗೋಧ್ರಾ ರೈಲು ದಹನ ದುರಂತ: ಫೆ.13ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...