Homeಅಂಕಣಗಳುಗೌರಿ ಲಂಕೇಶ್‍ರ ಮರುಹುಟ್ಟಿನ ತಯಾರಿಯ ಮೊದಲ ಹಂತ ಮುಗಿಸಿ... ನಿಮ್ಮೊಡನೆ ಎರಡು ಮಾತು

ಗೌರಿ ಲಂಕೇಶ್‍ರ ಮರುಹುಟ್ಟಿನ ತಯಾರಿಯ ಮೊದಲ ಹಂತ ಮುಗಿಸಿ… ನಿಮ್ಮೊಡನೆ ಎರಡು ಮಾತು

- Advertisement -
- Advertisement -

ನಿಯತಕಾಲಿಕ ಪತ್ರಿಕೆಗಳ ಯುಗ ಮುಗಿದು ಹೋಗಿದೆಯಾ? ಅದರಲ್ಲೂ ಟ್ಯಾಬ್ಲಾಯ್ಡ್‍ಗಳು ನಡೆಯುವುದಿಲ್ಲವಾ? ಈ ಚರ್ಚೆ ಗೌರಿ ಲಂಕೇಶ್ ಪತ್ರಿಕಾ ಕಚೇರಿಯಲ್ಲಿ ವರ್ಷಕ್ಕೊಂದು ಬಾರಿಯಾದರೂ ನಡೆದಿತ್ತು. ಒಂದು ಲಕ್ಷದಷ್ಟು ಪ್ರಸಾರ ಹೊಂದಿದ್ದ ಪತ್ರಿಕೆಗಳೂ ಈಗ ಏದುಸಿರು ಬಿಡುತ್ತಿವೆ ಎಂಬ ವರ್ತಮಾನ ಮೊದಮೊದಲು ಆಶ್ಚರ್ಯ ತರುತ್ತಿದ್ದವು. ‘ಬೇರೇನೋ’ ಉದ್ದೇಶ ಅಥವಾ ‘ಬೇರೆ ರೀತಿಯ’ ಆದಾಯ ಇದ್ದವರು ಮಾತ್ರ ಟ್ಯಾಬ್ಲಾಯ್ಡ್ ತರಲು ಸಾಧ್ಯ ಎಂಬ ಕನ್‍ಕ್ಲೂಷನ್ ಗಾಬರಿ ತರುವ ಹೊತ್ತಿಗೆ, ಗೌರಿಯವರ ಪತ್ರಿಕೆ ಉಳಿಸಿಕೊಳ್ಳಲು ಗೈಡ್ ಪತ್ರಿಕೆಯನ್ನು ಆರಂಭಿಸಬೇಕಾಗಿ ಬಂದಿತು. ಗೈಡ್ ಪ್ರಕಾಶನವೂ ಆರಂಭವಾಗಿ ಇನ್ನೊಂದಷ್ಟು ಚೈತನ್ಯ ತಂದಿತು. ಲಂಕೇಶ್ ಪ್ರಕಾಶನ ಯಾವತ್ತೂ ಕೈಬಿಡಲಿಲ್ಲ.
ಇಷ್ಟೆಲ್ಲಾ ಇದ್ದರೂ, ಅಂತಿಮವಾಗಿ ಎಷ್ಟು ಜನರಿಗೆ ಪತ್ರಿಕೆ ತಲುಪುತ್ತಿದೆ ಎಂಬುದು ಯಾರಿಗೂ ಸಮಾಧಾನ ತಂದಿರಲಿಲ್ಲ; ಆರ್ಥಿಕ ನಿಭಾವಣೆಯೂ ಸುಲಭದ್ದಾಗಿರಲಿಲ್ಲ. ಹೀಗಾಗಿ ಪತ್ರಿಕೆಯ ಗುಣಮಟ್ಟದಲ್ಲೂ ದೊಡ್ಡ ಚೇತರಿಕೆ ಬರಲಿಲ್ಲ. ಅದೊಂಥರಾ ಕೋಳಿ ಮೊದಲೋ ಮೊಟ್ಟೆ ಮೊದಲೋ ಕಥೆಯಾಗಿತ್ತು. ಇನ್ನೂ ಬಹಳ ಚೆನ್ನಾಗಿ ತರಬೇಕೆಂದರೆ, ಹೆಚ್ಚಿನ ಹಣ ಹೂಡಿಕೆ ಮಾಡಬೇಕು. ಹೆಚ್ಚಿನ ಹಣ ಹೂಡಿಕೆ ಮಾಡಬೇಕೆಂದರೆ, ಪತ್ರಿಕೆ ಇನ್ನೂ ಚೆನ್ನಾಗಿ ಬರಬೇಕು. ಅದಕ್ಕಿಂತ ಮುಖ್ಯವಾದ ಪ್ರಶ್ನೆಯೆಂದರೆ ‘ಚೆನ್ನಾಗಿ’ ಬಂದರೂ ಕೊಂಡು ಓದುವವರಿದ್ದಾರಾ ಎಂಬುದು.
ಅಂತರ್ಜಾಲದಲ್ಲೇ ಬೇಕಾದಷ್ಟು ಸಿಗುತ್ತದೆ; ಅಂತರ್ಜಾಲವೂ ಸುಲಭಕ್ಕೆ ಸಿಗುತ್ತದೆ. ಆದರೆ, ಅಲ್ಲಿಯೂ ಅಂತರ್ಜಾಲದಲ್ಲಿ ನೋಡುಗರ ಸಂಖ್ಯೆಗೆ ಅನುಗುಣವಾಗಿ ದಕ್ಕುವ ಜಾಹೀರಾತಿನಿಂದ ಮಾಧ್ಯಮ ಸಂಸ್ಥೆ ಸ್ವಾವಲಂಬಿಯಾಗಿ ನಡೆಯುವುದು ಕಷ್ಟ. ಅದೇನೇ ಆದರೂ, ವೆಬ್ ಮ್ಯಾಗಝೀನೇ ಭವಿಷ್ಯದ ಮಾಧ್ಯಮ ಎಂಬುದರಲ್ಲಿ ಯಾರಿಗೂ ಸಂಶಯವಿರಲಿಲ್ಲ. ಹೀಗಿದ್ದರೂ 2019ರ ಮಧ್ಯಭಾಗದವರೆಗೆ ಪತ್ರಿಕೆಯನ್ನು ನಿಲ್ಲಿಸುವುದು ಬೇಡ ಎಂದು ಗೌರಿ ಮೇಡಂ ಇದ್ದಾಗಲೇ ನಡೆದ ಚರ್ಚೆಯ ಅಂತಿಮ ತೀರ್ಮಾನವಾಗಿತ್ತು. ಅಲ್ಲಿಯವರೆಗೂ ಮುದ್ರಿತ ಪತ್ರಿಕೆಯನ್ನು ನಡೆಸುವುದು, ನಂತರ ಸೂಕ್ತವಾದ ಮಾಧ್ಯಮಕ್ಕೆ ರೂಪಾಂತರ ಹೊಂದುವುದರ ಬಗ್ಗೆ ಬಳಗದ ಎಲ್ಲರಿಗೂ ಸಹಮತವಿತ್ತು. ಈ ಚರ್ಚೆಗಳೆಲ್ಲಾ ನಡೆದದ್ದು ಬಹುಶಃ 2017ರ ಜೂನ್, ಜುಲೈನಲ್ಲಿ.
ಆ ದಿಕ್ಕಿನಲ್ಲಿ ಕೆಲಸ ಶುರು ಮಾಡುವ ಹೊತ್ತಿಗೆ ದುರಂತ ನಡೆದು ಹೋಯಿತು. ಕ್ಯಾಪ್ಟನ್ ಇಲ್ಲವಾದರು. ತಾವು ನಂಬಿದ ಧ್ಯೇಯಕ್ಕೆ ಬದ್ಧರಾಗಿ ದುಡಿಯುವ ಹಾದಿಯಲ್ಲಿ ಅವರು ಹುತಾತ್ಮರಾದರು. ಆಘಾತ, ಆಕ್ರೋಶ, ತೀರದ ದುಃಖಗಳ ನಡುವೆಯೇ ಪತ್ರಿಕೆ ನಿಲ್ಲಿಸಬಾರದು ಎಂಬ ಚರ್ಚೆ ರಾಜರಾಜೇಶ್ವರಿನಗರದ ಮನೆಯ ಮುಂದೆಯೇ ನಡೆಯಿತು. ಮರುದಿನವೇ ಬರಬೇಕಿದ್ದ ಪತ್ರಿಕೆಯನ್ನು ರೂಪಿಸಲು ಕಚೇರಿಯನ್ನು ಬಳಸುವುದು ಸಾಧ್ಯವಿರಲಿಲ್ಲ. ಅದಾಗಲೇ ಪೊಲೀಸರ ವಶದಲ್ಲಿತ್ತು. ಸೆಪ್ಟೆಂಬರ್ 12ರ ‘ನಾನು ಗೌರಿ’ ಸಮಾವೇಶದಲ್ಲಿ ಸಂಪಾದಕರ ಫೋಟೋವನ್ನೇ ಮುಖಪುಟವಾಗಿಸಿಕೊಂಡು ‘ನನ್ನ ದನಿ ಅಡಗುವುದಿಲ್ಲ’ವೆಂಬ ಸಂದೇಶ ಹೊತ್ತ ಗೌರಿ ನೆನಪಿನ ಸಂಚಿಕೆ ಹೊರಬಂದಿತು.
ಅಲ್ಲಿಂದ ಮುಂದೆ ಹಲವು ಎಡರುತೊಡರುಗಳು. ಗೌರಿ ಸ್ಮಾರಕ ಟ್ರಸ್ಟ್ ರಚನೆ, ಪತ್ರಿಕೆ ತರಲಿಕ್ಕಾಗಿ ಮೀಡಿಯಾ ಟ್ರಸ್ಟ್ ರಚನೆ, ಆರ್‍ಎನ್‍ಐ ನೋಂದಣಿ ಪಡೆಯಲು ದೀರ್ಘವಾದ ಪ್ರಕ್ರಿಯೆ, ಒಂದು ರೀತಿಯಲ್ಲಿ ನಿರೀಕ್ಷಿತ ರೀತಿಯಲ್ಲಿ ಟೈಟಲ್ ನಿರಾಕರಣೆ …….. ಹೀಗೆ. ಆರ್‍ಎನ್‍ಐ ಸಮಸ್ಯೆ ಬಗೆಹರಿಸಿಕೊಳ್ಳಲು ಗಮನ ಕೊಡುತ್ತಲೇ ವೆಬ್ ಎಡಿಷನ್ ಆರಂಭಿಸುವುದೆಂದು ತೀರ್ಮಾನವಾಯಿತು. ಅಷ್ಟು ಹೊತ್ತಿಗೆ ವಾರ್ಷಿಕ ಚಂದಾ ಕೊಡಲು ಹಲವರು ಮುಂದೆ ಬಂದಿದ್ದರಿಂದಲೂ ಟ್ರಸ್ಟ್‍ನ ಅಧ್ಯಕ್ಷರು ಖಾಸಗಿ ಪ್ರಸಾರದ ಪತ್ರಿಕೆ ತರಬೇಕೆಂದು ಸೂಚಿಸಿದ್ದರಿಂದಲೂ, ಮುದ್ರಿತ ಪತ್ರಿಕೆಯನ್ನೂ ತರುವುದೆಂದು ನಿರ್ಧರಿಸಲಾಯಿತು.
ಇದುವರೆಗೆ 11 ಸಂಚಿಕೆಗಳು ಮುಗಿದು, 12ನೇ ಸಂಚಿಕೆ ನಿಮ್ಮ ಕೈಯ್ಯಲ್ಲಿದೆ. ಒಂದು ರೀತಿಯಲ್ಲಿ ಇವೆಲ್ಲವೂ ಮುಂದೆ ದೊಡ್ಡ ಪ್ರಮಾಣದಲ್ಲಿ ರೀ ಲಾಂಚ್ ಮಾಡಲು ನಡೆಸುತ್ತಿರುವ ತಯಾರಿ. ಪತ್ರಿಕೆಯ ಸ್ವರೂಪ, ಹೂರಣ, ಧೋರಣೆ, ಭಾಷೆಯನ್ನು ರೂಪಿಸಿಕೊಳ್ಳುವುದು ಮತ್ತು ವಾರದ ಡೆಡ್‍ಲೈನ್‍ಗೆ ಸರಿಯಾಗಿ ಪತ್ರಿಕೆಯ ಎಲ್ಲಾ ಪುಟಗಳ ಬರವಣಿಗೆ, ಟೈಪಿಂಗ್, ಡಿಸೈನ್ ಮುಗಿಸಿ ಮುದ್ರಣಕ್ಕೆ ಕಳಿಸುವುದು… ಇದರ ತಾಲೀಮು ನಡೆಯುತ್ತಿದೆ.
‘ಬಹಳ ಚೆನ್ನಾಗಿ ಬರುತ್ತಿದೆ’ ಎಂಬ ಅಭಿಪ್ರಾಯದಿಂದ ಹಿಡಿದು ‘ತುಂಬಾ ಅಕ್ಯಾಡೆಮಿಕ್ ಎನಿಸುತ್ತದೆ’ ಎನ್ನುವವರೆಗೆ, ‘ಪೊಲಿಟಿಕ್ಸ್ ಜಾಸ್ತಿ ಆಯಿತು’ ಎಂಬಲ್ಲಿಂದ, ‘ಇಷ್ಟೊಂದು ಪೊಲಿಟಿಕ್ಸ್ ಬೇಕಾ?’ ಎಂಬವರೆಗೆ ಭಿನ್ನವಾದ ಅಭಿಪ್ರಾಯಗಳು ಬಂದಿವೆ. ಖಾಸಗಿ ಪ್ರಸಾರದ ಪತ್ರಿಕೆಯಾದ್ದರಿಂದ ಸದ್ಯಕ್ಕೆ ಸ್ಟಾಂಡ್ ಮಾರಾಟ ಸಾಧ್ಯವಿಲ್ಲ; ಆದರೆ ಪೋಸ್ಟ್‍ನಲ್ಲಿ (ಪೋಸ್ಟಲ್ ರಿಯಾಯಿತಿಯೂ ಇಲ್ಲದೇ) ಕಳಿಸಿದ್ದು ತಲುಪುತ್ತಿಲ್ಲ ಎಂಬ ದೂರು ಇದೆ. ಇವೆಲ್ಲವೂ ಹಿಂದಿನಿಂದಲೂ ಇದ್ದಂಥದ್ದೇ.
ಮಾರುಕಟ್ಟೆಯ ಅಧ್ಯಯನ ಹೇಳುವುದೇ ಬೇರೆ. ಈಗ ಡಜನ್‍ಗಟ್ಟಲೆ ಸುದ್ದಿ ಚಾನೆಲ್‍ಗಳಿವೆ. ಅಲ್ಲದೆ ದಿನಪತ್ರಿಕೆಗಳೇ ಟ್ಯಾಬ್ಲಾಯ್ಡ್ ರೀತಿಯ ಶೈಲಿಯಲ್ಲಿ ಬರತೊಡಗಿದ ಮೇಲೆ ಎಲ್ಲಾ ಟ್ಯಾಬ್ಲಾಯ್ಡ್‍ಗಳ ಪ್ರಸಾರವೂ ಕಡಿಮೆಯಾಗುತ್ತಾ ಸಾಗಿದೆ. ಇದೀಗ (ನಮ್ಮ ಮ್ಯಾನೇಜರ್ ಪ್ರಕಾರ – ಟಿವಿ ಸೀರಿಯಲ್‍ಗಳು ಹೆಚ್ಚಾದ ಮೇಲೆ) ಕೌಟುಂಬಿಕ ನಿಯತಕಾಲಿಕಗಳ ಪ್ರಸಾರವೂ ಗಣನೀಯವಾಗಿ ಇಳಿದುಹೋಗಿದೆ. ಏನು ಬೇಕೋ ಎಲ್ಲವೂ ಅವರವರ ಸ್ಮಾರ್ಟ್ ಫೋನ್‍ನಲ್ಲೇ ಲಭ್ಯ. ಹೀಗೆ ಟ್ಯಾಬ್ಲಾಯ್ಡ್ ಪತ್ರಿಕೋದ್ಯಮ ಸಂಕೀರ್ಣ ಸವಾಲುಗಳನ್ನು ಎದುರಿಸುತ್ತಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಬೇಕೆಂದರೆ ಪತ್ರಿಕೆಯ ಸ್ವರೂಪ, ಹೂರಣ, ಧೋರಣೆ, ಭಾಷೆ ಏನಿರಬೇಕು ಎಂಬ ಕುರಿತು ಓದುಗರಾದ ಮತ್ತು ಗೌರಿಯವರ ಬಳಗದ ಭಾಗವೂ ಆದ ನಿಮ್ಮನ್ನೇ ಕೇಳಬೇಕೆಂದುಕೊಂಡಿದ್ದೇವೆ.
ಸದ್ಯದಲ್ಲೇ ಈ ಪತ್ರಿಕೆಯು ಪೂರ್ಣ ಪ್ರಮಾಣದಲ್ಲಿ ರೀಲಾಂಚ್ ಆಗಲಿದೆ. ಇಷ್ಟು ದಿನಗಳ ಅನುಭವದಿಂದ ನಮಗೂ (ಪತ್ರಿಕೆಯ ತಂಡಕ್ಕೂ) ಕೆಲವು ಅಭಿಪ್ರಾಯಗಳಿವೆ. ಆದರೆ, ಹೊಸ ಪತ್ರಿಕೆ/ವೆಬ್ ಮ್ಯಾಗಜೀನ್ ನಮ್ಮೆಲ್ಲರದ್ದೂ ಆಗಿದೆ. ಗೌರಿಯವರ ಆಶಯವನ್ನು ಮುಂದುವರೆಸಿಕೊಂಡು ಹೋಗಬೇಕೆಂದು ಬಯಸುವ ಎಲ್ಲರದ್ದೂ.. ಹಾಗಾಗಿ ಇದನ್ನು ರೂಪಿಸುವುದರಲ್ಲಿ ಹಾಗೂ ಮುಂದಕ್ಕೊಯ್ಯುವುದರಲ್ಲಿ ನಾವೆಲ್ಲರೂ ಜೊತೆಯಾಗಬೇಕು. ನಿಮಗೆ ಪತ್ರಿಕೆ ಹೇಗೆ ಬಂದರೆ ಚೆನ್ನ ಅನಿಸುತ್ತದೆ ಎಂಬುದನ್ನೂ ತಿಳಿಸಿ, ಮಾರುಕಟ್ಟೆಯಲ್ಲಿ ವಿಶಿಷ್ಟ ಛಾಪು ಮೂಡಿಸಬೇಕೆಂದರೆ ಏನು ಮಾಡಬೇಕೆಂಬುದನ್ನೂ ತಿಳಿಸಿ.
ನಮ್ಮ ಕಚೇರಿಯ ವಿಳಾಸಕ್ಕೆ (ಕಡೆಯ ಪುಟದ ಕೆಳಭಾಗದಲ್ಲಿ ಲಭ್ಯ) ಪತ್ರ ಬರೆಯಬಹುದು, 9880302817 ಈ ನಂಬರ್‍ಗೆ ವಾಟ್ಸಾಪ್ ಮಾಡಬಹುದು, ಇಲ್ಲವೇ ನಮ್ಮ ಫೇಸ್‍ಬುಕ್ ಪುಟ ‘Naanu Gauri magazine ನಾನು ಗೌರಿ ಪತ್ರಿಕೆ’ಯಲ್ಲಿ ತಿಳಿಸಬಹುದು ಅಥವಾ [email protected] ಗೆ ಇ-ಮೇಲ್ ಸಹಾ ಮಾಡಬಹುದು. ನಿಮ್ಮ ಪ್ರತಿಕ್ರಿಯೆಗಾಗಿ ಎದುರು ನೋಡುತ್ತಿರುತ್ತೇವೆ.

– ಸಂಪಾದಕ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...