Homeಮುಖಪುಟಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

ಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

- Advertisement -
- Advertisement -

ಚೆನ್ನೈ: ರೈತರ ಹೊಲಗಳಲ್ಲಿ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆಗಾಗಿ ಕೇಂದ್ರ ಯೋಜನೆಯಡಿ ತರಬೇತಿ ಪಡೆದ ರಾಜ್ಯದ ಮೊದಲ ಮಹಿಳಾ ತಂಡವನ್ನು ನಿಯೋಜಿಸಲಾಗಿದೆ. ನೀರು ತುಂಬಿದ ಹೊಲಗಳಿಗೆ ಡ್ರೋನ್‌ ಸಾಗಣೆಯು ಅದರ ಭಾರವಾದ ತೂಕವು ಒಂದು ಸವಾಲಾಗಿದೆ.

ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆಯಾದ 27 ವರ್ಷದ ನಂದಿನಿ ಸುಗುಮಾರ್ ಯಾವಾಗಲೂ ಡ್ರೋನ್‌ಗಳ ಬಗ್ಗೆ ಆಕರ್ಷಣೆಯನ್ನು ಹೊಂದಿದ್ದರು.

ಮದುವೆಗಳಲ್ಲಿ ಫೋಟೊ ಮತ್ತು ವೀಡಿಯೋ ರೆಕಾರ್ಡ್ ಗಳಿಗೆ ಬಳಸುತ್ತಿದ್ದ ಈ ಡ್ರೋನ್ ಗಳು ಜನರ ತಲೆಯ ಮೇಲೆ ಗಿರಕಿ ಹೊಡೆಯುವುದನ್ನು ಮಾತ್ರ ನೋಡಿದ್ದ ಅವರು, ಕೃಷಿ ಪ್ರಧಾನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಸಲುವಾಗಿ ಈ ಡ್ರೋನ್‌ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್‌ಗಳಲ್ಲಿ ನಂದಿನಿ ಒಬ್ಬರಾಗಿದ್ದಾರೆ.

ಪೊಂಗಲ್‌ಗೆ ಹದಿನೈದು ದಿನಗಳ ಮೊದಲು, ಶಂಕರಪುರಂ ಬಳಿಯ ಗ್ರಾಮವಾದ ದೇವಪಂಡಲಂ ನಿವಾಸಿಗಳು ನಂದಿನಿಯವರು ಡ್ರೋನ್ ಮೂಲಕ ಕಬ್ಬಿನ ಹೊಲದಲ್ಲಿ  ಸುಳಿದಾಡುತ್ತಾ ಮೇಲೆ ಕ್ರಿಮಿನಾಶಕ ಸಿಂಪಡಿಸುವುದನ್ನು ವಿಸ್ಮಯದಿಂದ ನೋಡಿದರು. ಈ ವಿಶಿಷ್ಟವಾದ ಹಾರಾಟವು ಕೇವಲ ಏಳು ನಿಮಿಷಗಳಲ್ಲಿ ಇಡೀ ಕಬ್ಬಿನ ಹೊಲವನ್ನು ಆವರಿಸಿತು ಮತ್ತು ಗ್ರಾಮಸ್ಥರ ಜೋರಾದ ಹರ್ಷೋದ್ಗಾರಗಳ ನಡುವೆ ಭೂಮಿಗೆ ಮರಳಿತು.

ನಂದಿನಿ ಅವರು ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆಯಡಿ ಆಯ್ಕೆಯಾದ ತಮಿಳುನಾಡಿನ ಮೊದಲ ಮಹಿಳಾ ಸ್ವ-ಸಹಾಯ ಗುಂಪು ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ಡ್ರೋನ್ ಪೈಲಟ್‌ಗಳಾಗಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮತ್ತು ಸ್ಥಳೀಯ ಕೃಷಿ ಚಟುವಟಿಕೆಗೆ ಅವಿಭಾಜ್ಯ ಪಾಲುದಾರರನ್ನಾಗಿ ಮಾಡುವ ಗುರಿಯನ್ನು ಇದು ಹೊಂದಿದೆ.

ಕಲ್ಲಕುರಿಚಿಯಲ್ಲಿ ನಂದಿನಿಯವರು ಡ್ರೋನ್ ದೀದಿ ಯೋಜನೆಯ ಬಗ್ಗೆ ತಿಳಿದುಕೊಂಡರು ಮತ್ತು ಯಾವುದೇ ಆಲೋಚನೆ ಮಾಡದೇ ತರಬೇತಿಗಾಗಿ ಅರ್ಜಿ ಸಲ್ಲಿಸಿದರು. ತಮಿಳುನಾಡು ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯಾಗಿ ಗುರುತಿಸಲ್ಪಟ್ಟ ನಂತರ, ಅವರನ್ನು ಕಲ್ಲಕುರಿಚಿ ಜಿಲ್ಲೆಯ ಕ್ಲಸ್ಟರ್‌ಗಳಲ್ಲಿ ಈ ತರಬೇತಿಗಾಗಿ ಆಯ್ಕೆ ಮಾಡಲಾಯಿತು.

ನಂದಿನಿ ಚೆನ್ನೈನಲ್ಲಿ ಗರುಡ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಡ್ರೋನ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಐದು ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ರಿಮೋಟ್ ಪೈಲಟ್ ತರಬೇತಿ ತರಗತಿಗಳನ್ನು ಪೂರ್ಣಗೊಳಿಸಿದ ನಂತರ, ಅವರಿಗೆ ಎರಡು ಟ್ಯಾಂಕ್‌ಗಳು ಮತ್ತು ಬ್ಯಾಟರಿ ಸೆಟ್ ಹೊಂದಿರುವ 7 ಲಕ್ಷ ರೂ. ಮೌಲ್ಯದ ಉಚಿತ ಡ್ರೋನ್ ನೀಡಲಾಯಿತು.

ನುರಿತ ಡ್ರೋನ್ ಪೈಲಟ್ ಆಗಿ ಪದವಿ ಪಡೆದ ನಂದಿನಿ, ರೈತರ ವ್ಯಾಪಕ ಕೃಷಿ ಚಟುವಟಿಕೆಗಳ ಅವಶ್ಯಕತೆಗಳನ್ನು ಪೂರೈಸುವುದು, ರಸಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ಮತ್ತು ಹೊಲಗಳಿಗೆ ನೀರುಣಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಉತ್ಸುಕರಾಗಿದ್ದಾರೆ.

ಡ್ರೋನ್ ಹಾರಾಟ ನಡೆಸುವುದು ಎಂದರೆ ನನಗೆ ತುಂಬಾ ಖುಷಿ. ನಾನು ಸ್ಥಳೀಯ ರಸಗೊಬ್ಬರ ಅಂಗಡಿಗಳಿಗೆ ನನ್ನ ಸಂಪರ್ಕ ವಿವರಗಳನ್ನು ನೀಡಿದ್ದೇನೆ ಮತ್ತು ರೈತರಿಗೆ ಸಹಾಯ ಮಾಡಲು ಹತ್ತಿರದ ಹಳ್ಳಿಗಳಿಗೆ ಪ್ರವಾಸ ಮಾಡುತ್ತಿದ್ದೇನೆ. ಡ್ರೋನ್ ಮೂಲಕ ದ್ರವಗೊಬ್ಬರ ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ತುಂಬಾ ವೆಚ್ಚದಾಯಕವಾಗಿದೆ ಮತ್ತು ಒಂದು ಎಕರೆ ಕೃಷಿ ಭೂಮಿಯನ್ನು ಆವರಿಸಲು ಸುಮಾರು ಏಳು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳುತ್ತಾರೆ.

ಅವರು ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಿಸುವುದಕ್ಕಾಗಿ ಎಕರೆಗೆ 400 ರೂ. ಶುಲ್ಕ ವಿಧಿಸುತ್ತಾರೆ. ದೇವಪಂಡಲಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೆಚ್ಚಿನ ರೈತರು 1ರಿಂದ 4 ಎಕರೆಗಳವರೆಗಿನ ಸಣ್ಣ ಭೂ ಹಿಡುವಳಿಗಳನ್ನು ಹೊಂದಿದ್ದಾರೆ.

“ದೇವಪಂಡಲಂನಲ್ಲಿರುವ ರೈತನ ಒಡೆತನದ ಕಬ್ಬಿನ ಹೊಲ ನನ್ನ ಮೊದಲ ಭೇಟಿ. ಇಲ್ಲಿ ನಾನು ಡ್ರೋನ್ ನ ಮೊದಲ ಹಾರಾಟ ನಡೆಸಿದೆ ಮತ್ತು ಈ ಸೇವೆಯು ರೈತನಿಗೆ ತೃಪ್ತಿಕರ ಫಲಿತಾಂಶವನ್ನು ಕೊಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಯಾವ ಶುಲ್ಕವನ್ನು ವಿಧಿಸಲಿಲ್ಲ” ಎಂದು ಅವರು ಹೇಳುತ್ತಾರೆ. ಡ್ರೋನ್ ಸಹಾಯಕ ತರಬೇತಿಯನ್ನು ಪೂರ್ಣಗೊಳಿಸಿದ ಅವರ ಪತಿ ಸುಗುಮಾರ್ ಕೂಡ ಸಾಧನವನ್ನು ನಿರ್ವಹಿಸಲು ಸಹಾಯ ಮಾಡುತ್ತಾರೆ.

ಕಲ್ಲಕುರಿಚಿ ಜಿಲ್ಲೆಯ ಎರೈಯೂರ್ ಬಳಿಯ ಕೊಮ್ಮಸಮುತಿರಂನ ವಿ.ಶರಣ್ಯ ಕೂಡ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್. ಅವರು 10ನೇ ತರಗತಿಯವರೆಗೆ ಅಧ್ಯಯನ ಮಾಡಿದ್ದಾರೆ ಮತ್ತು ಮಹಿಳೆಯರಿಗೆ ಕಡಿಮೆ ಉದ್ಯೋಗಾವಕಾಶಗಳು ಇರುವುದರಿಂದ ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.

ಚೆನ್ನೈನಲ್ಲಿ ಡ್ರೋನ್ ಪೈಲಟ್ ತರಬೇತಿಯನ್ನು ಪೂರ್ಣಗೊಳಿಸಿದ ಶರಣ್ಯ, ಈಗ ಉಲುಂದೂರ್ಪೇಟೆ ಬ್ಲಾಕ್‌ನ ಹಳ್ಳಿಗಳಲ್ಲಿ ಸಂಚರಿಸಿ, ಮಾಸಿಕ ಆದಾಯವನ್ನು ಕೊಡುವ ಹೊಲಗಳಲ್ಲಿ ಕೃಷಿ ಸಂಬಂಧಿತ ಡ್ರೋನ್ ಸಿಂಪಡಣೆಯ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.

“ರೈತರಿಂದ ಬರುವ ಸಾಮಾನ್ಯ ಬೇಡಿಕೆಯೆಂದರೆ ರಸಗೊಬ್ಬರಗಳು ಮತ್ತು ಕೀಟನಾಶಕಗಳ ಸಿಂಪಡಣೆ. ನಾನು ಡ್ರೋನ್ ನಿಂದ ಒಂದು ಎಕರೆಯನ್ನು ಆವರಿಸಿದ ತಕ್ಷಣ ಬ್ಯಾಟರಿ ಬೇಗನೆ ಖಾಲಿಯಾಗುತ್ತದೆ. ಆಗ ನಾನು ಅದನ್ನು ಚಾರ್ಜ್ ಮಾಡಬೇಕಾಗುತ್ತದೆ. ಇನ್ನೂ ಎರಡು ಬ್ಯಾಟರಿಗಳನ್ನು ಖರೀದಿಸಲು ನಾನು ಪಂಚಾಯತ್ ಮಟ್ಟದ ಒಕ್ಕೂಟದಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ” ಎಂದು ಅವರು ಹೇಳುತ್ತಾರೆ.

ಇದರಲ್ಲಿ ಇತರ ಸವಾಲುಗಳು ಸಹ ಇವೆ. “ಸಮೀಪದ ಬ್ಲಾಕ್‌ಗಳಿಂದ ರೈತರಿಂದ ನನಗೆ ಕರೆಗಳು ಬಂದರೂ, ಡ್ರೋನ್ ಅನ್ನು ಸಾಗಿಸುವುದು ಒಂದು ಸಮಸ್ಯೆಯಾಗಿದೆ. ಏಕೆಂದರೆ ಅದು ಗೊಬ್ಬರ ಮತ್ತು ನೀರಿನಿಂದ ತುಂಬಿದ ನಂತರ ಸುಮಾರು 30 ಕೆಜಿ ತೂಗುತ್ತದೆ. ಅದನ್ನು ಸಾಗಿಸಲು ಇಬ್ಬರು ಜನರು ಬೇಕಾಗುತ್ತದೆ ಮತ್ತು ಡ್ರೋನ್ ಸಾಗಿಸಲು ಸೆಕೆಂಡ್ ಹ್ಯಾಂಡ್ ವಾಹನ ಖರೀದಿಗೆ ಸುಮಾರು 3 ರೂ. ಲಕ್ಷ ವೆಚ್ಚವಾಗುತ್ತದೆ. ಆದಾಗ್ಯೂ, ನನ್ನ ಹೊಸ ಉದ್ಯೋಗವು ನನ್ನ ಆದಾಯವನ್ನು ಪೂರೈಸುತ್ತದೆ ಮತ್ತು ದೀರ್ಘಾವಧಿಯಲ್ಲಿ ಇದು ಪ್ರಯೋಜನಕಾರಿಯಾಗಿದೆ ಎಂದು ಭಾವಿಸುತ್ತೇನೆ” ಎಂದು ಶರಣ್ಯ ಹೇಳುತ್ತಾರೆ.

ಕೃಪೆ: ದಿ ಹಿಂದೂ

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...