Homeಮುಖಪುಟಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

- Advertisement -
- Advertisement -

ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ 190 ಮಿಲಿಯನ್ ಪೌಂಡ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ತಪ್ಪಿತಸ್ಥರು ಎಂದು ಪಾಕಿಸ್ತಾನದ ನ್ಯಾಯಾಲಯ ಶುಕ್ರವಾರ (ಜ.17) ಘೋಷಿಸಿದ್ದು, ಅವರಿಗೆ ಕ್ರಮವಾಗಿ 14 ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆಯ ಜೊತೆಗೆ, ಇಮ್ರಾನ್ ಖಾನ್‌ ಅವರಿಗೆ 10 ಲಕ್ಷ ರೂಪಾಯಿ ಮತ್ತು ಬುಶ್ರಾ ಬೀಬಿ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಖಾನ್‌ಗೆ ಆರು ತಿಂಗಳು ಮತ್ತು ಬೀಬಿಗೆ ಮೂರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಇಮ್ರಾನ್ ಖಾನ್ ದಂಪತಿ ಸ್ಥಾಪಿಸಿದ ಅಲ್-ಖಾದಿರ್ ವಿಶ್ವವಿದ್ಯಾಲಯದ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಇಮ್ರಾನ್ ಖಾನ್ ಈಗಾಗಲೇ ಜೈಲಿನಲ್ಲಿದ್ದು, ಬುಶ್ರಾ ಬೀಬಿಯನ್ನು ನ್ಯಾಯಾಲಯದಿಂದ ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಜನವರಿ 13ನೇ ತಾರೀಕು ಸೇರಿದಂತೆ ಮೂರು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ತೀರ್ಪನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ಇಂದು (ಜ.17) ಪ್ರಕಟಿಸಿದ್ದಾರೆ.

ಅಡಿಲಾ ಜೈಲಿನಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

“ಇಂದಿನ ತೀರ್ಪು ನ್ಯಾಯಾಂಗದ ಖ್ಯಾತಿಗೆ ಕಳಂಕ ತಂದಿದೆ. ಈ ಪ್ರಕರಣದಲ್ಲಿ ನನಗೆ ಲಾಭವೂ ಆಗಿಲ್ಲ, ಸರ್ಕಾರಕ್ಕೆ ನಷ್ಟವೂ ಆಗಿಲ್ಲ. ನನಗೆ ಯಾವುದೇ ಪರಿಹಾರ ಬೇಡ ಮತ್ತು ಎಲ್ಲಾ ಪ್ರಕರಣಗಳನ್ನು ಎದುರಿಸುತ್ತೇನೆ. ಸರ್ವಾಧಿಕಾರಿಯೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ” ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಅವರ ಪಕ್ಷ ತಿಳಿಸಿದೆ.

ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೊ(ಎನ್‌ಎಬಿ) 2023ರ ಡಿಸೆಂಬರ್‌ನಲ್ಲಿ ಇಮ್ರಾನ್ ಖಾನ್ (72), ಬುಶ್ರಾ ಬೀಬಿ (50) ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ದೇಶದ ಖಜಾನೆಗೆ ಇಮ್ರಾನ್ ಖಾನ್ ದಂಪತಿ 190 ಮಿಲಿಯನ್ ಪೌಂಡ್‌ಗಳಷ್ಟು (ಪಾಕಿಸ್ತಾನ ರೂಪಾಯಿಯಲ್ಲಿ 50 ಶತಕೋಟಿ) ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಒಬ್ಬ ಉದ್ಯಮಿ ಸೇರಿ ಪ್ರಕರಣದ ಇತರೆ ಆರೋಪಿಗಳು ದೇಶದಿಂದ ಹೊರಗಿರುವ ಕಾರಣ ಖಾನ್ ಮತ್ತು ಬೀಬಿ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವ್ಯವಹಾರವೊಂದರ ಇತ್ಯರ್ಥದ ಬಳಿಕ ರಿಯಲ್‌ ಎಸ್ಟೇಟ್ ಉದ್ಯಮಿಯೊಬ್ಬರಿಂದ 50 ಶತಕೋಟಿ ರೂಪಾಯಿಯನ್ನು ಬ್ರಿಟನ್‌ನ ರಾಷ್ಟ್ರೀಯ ಅಪರಾಧ ಸಂಸ್ಥೆಯು ಪಾಕಿಸ್ತಾನಕ್ಕೆ ಹಿಂದಿರುಗಿಸಿತ್ತು. ಆ ಹಣವನ್ನು ಇಮ್ರಾನ್ ಖಾನ್ ದಂಪತಿ, ಮತ್ತಿತರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುವುದು ಆರೋಪ.

ರಾಷ್ಟ್ರೀಯ ಖಜಾನೆಗೆ ಸೇರಬೇಕಿದ್ದ ಈ ಹಣವನ್ನು ಬೀಬಿ ಮತ್ತು ಖಾನ್‌ಗೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಹಾಯ ಮಾಡಿದ ಉದ್ಯಮಿಯ ವೈಯಕ್ತಿಕ ಲಾಭಕ್ಕಾಗಿ ತಿರುಗಿಸಿದ್ದರು ಎಂದು ದೂರಲಾಗಿದೆ.

ಅಲ್-ಖಾದಿರ್ ಟ್ರಸ್ಟ್‌ನ ಟ್ರಸ್ಟಿಯಾಗಿರುವ ಬುಶ್ರಾ ಬೀಬಿ, ಈ ಇತ್ಯರ್ಥದಿಂದ ಲಾಭ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಝೇಲಂನಲ್ಲಿರುವ ಅಲ್-ಖಾದಿರ್ ವಿಶ್ವವಿದ್ಯಾಲಯಕ್ಕಾಗಿ 458 ಕನಾಲ್ ((57 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಸೇರಿದೆ.

ಇಮ್ರಾನ್ ಖಾನ್ ಮತ್ತು ಅವರ ಪಕ್ಷದ ಇತರ ಹಲವಾರು ನಾಯಕರ ಜೈಲು ಶಿಕ್ಷೆಯಿಂದಾಗಿ ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಪರಿಹರಿಸಲು ಸರ್ಕಾರ ಮತ್ತು ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಡುವೆ ನಡೆಯುತ್ತಿರುವ ಮಾತುಕತೆಯ ಮಧ್ಯೆ ನ್ಯಾಯಾಲಯದ ತೀರ್ಪು ಹೊರ ಬಿದ್ದಿದೆ.

ಇಲ್ಲಿಯವರೆಗೆ ಮೂರು ಸುತ್ತಿನ ಮಾತುಕತೆಗಳು ನಡೆದಿದ್ದು, ಪಿಟಿಐ ತನ್ನ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಲಿಖಿತವಾಗಿ ಮಂಡಿಸಿದೆ.

2022ರಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರು ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತನ ಬಂಧಿಸಿದ ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...