Homeಮುಖಪುಟಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

- Advertisement -
- Advertisement -

ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ 190 ಮಿಲಿಯನ್ ಪೌಂಡ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ತಪ್ಪಿತಸ್ಥರು ಎಂದು ಪಾಕಿಸ್ತಾನದ ನ್ಯಾಯಾಲಯ ಶುಕ್ರವಾರ (ಜ.17) ಘೋಷಿಸಿದ್ದು, ಅವರಿಗೆ ಕ್ರಮವಾಗಿ 14 ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆಯ ಜೊತೆಗೆ, ಇಮ್ರಾನ್ ಖಾನ್‌ ಅವರಿಗೆ 10 ಲಕ್ಷ ರೂಪಾಯಿ ಮತ್ತು ಬುಶ್ರಾ ಬೀಬಿ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಖಾನ್‌ಗೆ ಆರು ತಿಂಗಳು ಮತ್ತು ಬೀಬಿಗೆ ಮೂರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಇಮ್ರಾನ್ ಖಾನ್ ದಂಪತಿ ಸ್ಥಾಪಿಸಿದ ಅಲ್-ಖಾದಿರ್ ವಿಶ್ವವಿದ್ಯಾಲಯದ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಇಮ್ರಾನ್ ಖಾನ್ ಈಗಾಗಲೇ ಜೈಲಿನಲ್ಲಿದ್ದು, ಬುಶ್ರಾ ಬೀಬಿಯನ್ನು ನ್ಯಾಯಾಲಯದಿಂದ ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಜನವರಿ 13ನೇ ತಾರೀಕು ಸೇರಿದಂತೆ ಮೂರು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ತೀರ್ಪನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ಇಂದು (ಜ.17) ಪ್ರಕಟಿಸಿದ್ದಾರೆ.

ಅಡಿಲಾ ಜೈಲಿನಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

“ಇಂದಿನ ತೀರ್ಪು ನ್ಯಾಯಾಂಗದ ಖ್ಯಾತಿಗೆ ಕಳಂಕ ತಂದಿದೆ. ಈ ಪ್ರಕರಣದಲ್ಲಿ ನನಗೆ ಲಾಭವೂ ಆಗಿಲ್ಲ, ಸರ್ಕಾರಕ್ಕೆ ನಷ್ಟವೂ ಆಗಿಲ್ಲ. ನನಗೆ ಯಾವುದೇ ಪರಿಹಾರ ಬೇಡ ಮತ್ತು ಎಲ್ಲಾ ಪ್ರಕರಣಗಳನ್ನು ಎದುರಿಸುತ್ತೇನೆ. ಸರ್ವಾಧಿಕಾರಿಯೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ” ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಅವರ ಪಕ್ಷ ತಿಳಿಸಿದೆ.

ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೊ(ಎನ್‌ಎಬಿ) 2023ರ ಡಿಸೆಂಬರ್‌ನಲ್ಲಿ ಇಮ್ರಾನ್ ಖಾನ್ (72), ಬುಶ್ರಾ ಬೀಬಿ (50) ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ದೇಶದ ಖಜಾನೆಗೆ ಇಮ್ರಾನ್ ಖಾನ್ ದಂಪತಿ 190 ಮಿಲಿಯನ್ ಪೌಂಡ್‌ಗಳಷ್ಟು (ಪಾಕಿಸ್ತಾನ ರೂಪಾಯಿಯಲ್ಲಿ 50 ಶತಕೋಟಿ) ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಒಬ್ಬ ಉದ್ಯಮಿ ಸೇರಿ ಪ್ರಕರಣದ ಇತರೆ ಆರೋಪಿಗಳು ದೇಶದಿಂದ ಹೊರಗಿರುವ ಕಾರಣ ಖಾನ್ ಮತ್ತು ಬೀಬಿ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವ್ಯವಹಾರವೊಂದರ ಇತ್ಯರ್ಥದ ಬಳಿಕ ರಿಯಲ್‌ ಎಸ್ಟೇಟ್ ಉದ್ಯಮಿಯೊಬ್ಬರಿಂದ 50 ಶತಕೋಟಿ ರೂಪಾಯಿಯನ್ನು ಬ್ರಿಟನ್‌ನ ರಾಷ್ಟ್ರೀಯ ಅಪರಾಧ ಸಂಸ್ಥೆಯು ಪಾಕಿಸ್ತಾನಕ್ಕೆ ಹಿಂದಿರುಗಿಸಿತ್ತು. ಆ ಹಣವನ್ನು ಇಮ್ರಾನ್ ಖಾನ್ ದಂಪತಿ, ಮತ್ತಿತರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುವುದು ಆರೋಪ.

ರಾಷ್ಟ್ರೀಯ ಖಜಾನೆಗೆ ಸೇರಬೇಕಿದ್ದ ಈ ಹಣವನ್ನು ಬೀಬಿ ಮತ್ತು ಖಾನ್‌ಗೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಹಾಯ ಮಾಡಿದ ಉದ್ಯಮಿಯ ವೈಯಕ್ತಿಕ ಲಾಭಕ್ಕಾಗಿ ತಿರುಗಿಸಿದ್ದರು ಎಂದು ದೂರಲಾಗಿದೆ.

ಅಲ್-ಖಾದಿರ್ ಟ್ರಸ್ಟ್‌ನ ಟ್ರಸ್ಟಿಯಾಗಿರುವ ಬುಶ್ರಾ ಬೀಬಿ, ಈ ಇತ್ಯರ್ಥದಿಂದ ಲಾಭ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಝೇಲಂನಲ್ಲಿರುವ ಅಲ್-ಖಾದಿರ್ ವಿಶ್ವವಿದ್ಯಾಲಯಕ್ಕಾಗಿ 458 ಕನಾಲ್ ((57 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಸೇರಿದೆ.

ಇಮ್ರಾನ್ ಖಾನ್ ಮತ್ತು ಅವರ ಪಕ್ಷದ ಇತರ ಹಲವಾರು ನಾಯಕರ ಜೈಲು ಶಿಕ್ಷೆಯಿಂದಾಗಿ ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಪರಿಹರಿಸಲು ಸರ್ಕಾರ ಮತ್ತು ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಡುವೆ ನಡೆಯುತ್ತಿರುವ ಮಾತುಕತೆಯ ಮಧ್ಯೆ ನ್ಯಾಯಾಲಯದ ತೀರ್ಪು ಹೊರ ಬಿದ್ದಿದೆ.

ಇಲ್ಲಿಯವರೆಗೆ ಮೂರು ಸುತ್ತಿನ ಮಾತುಕತೆಗಳು ನಡೆದಿದ್ದು, ಪಿಟಿಐ ತನ್ನ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಲಿಖಿತವಾಗಿ ಮಂಡಿಸಿದೆ.

2022ರಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರು ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತನ ಬಂಧಿಸಿದ ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...