HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...