HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...