Homeಮುಖಪುಟಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

- Advertisement -
- Advertisement -

ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ಇಲ್ಲಿಯವರೆಗೆ ಒಟ್ಟು 40 ಪ್ರಥಮ ಮಾಹಿತಿ ವರದಿಗಳು (ಎಫ್‌ಐಆರ್) ದಾಖಲಾಗಿವೆ ಎಂದು ಕೇರಳ ರಾಜ್ಯ ಸರ್ಕಾರ ಜನವರಿ 16 ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ.

ಸರ್ಕಾರದ ಪರ ಅಡ್ವೊಕೇಟ್ ಜನರಲ್ (ಎಜಿ) ಗೋಪಾಲಕೃಷ್ಣ ಕುರುಪ್ ಅವರು ನ್ಯಾಯಮೂರ್ತಿಗಳಾದ ಎ.ಕೆ ಜಯಶಂಕರನ್ ನಂಬಿಯಾರ್ ಮತ್ತು ಸಿಎಸ್ ಸುಧಾ ಅವರನ್ನೊಳಗೊಂಡ ಹೈಕೋರ್ಟ್‌ನ ವಿಶೇಷ ಪೀಠಕ್ಕೆ ವಿವರಗಳನ್ನೊಳಗೊಂಡ ಟಿಪ್ಪಣಿಯನ್ನು ಸಲ್ಲಿಸಿದ್ದಾರೆ.

ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಸೆಪ್ಟೆಂಬರ್ 5 ರಂದು ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚಿಸಲಾಗಿದೆ.

ಆಗಸ್ಟ್ 2024 ರಲ್ಲಿ ಬಿಡುಗಡೆಯಾದ ಹೇಮಾ ಸಮಿತಿ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ನಡೆದ ಮಹಿಳಾ ಕಲಾವಿದರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ಬಹಿರಂಗಪಡಿಸಿತ್ತು.

ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭದಲ್ಲಿ 35 ಪ್ರಕರಣಗಳನ್ನು ದಾಖಲಿಸಿತ್ತು. ನಂತರ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು ನೇಮಿಸಲಾದ ನೋಡಲ್ ಅಧಿಕಾರಿಗೆ ಹೆಚ್ಚುವರಿಯಾಗಿ ಎಂಟು ದೂರುಗಳು ಸಲ್ಲಿಕೆಯಾಗಿದೆ. ಅದನ್ನು ಆಧರಿಸಿ ಇನ್ನೂ ಐದು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಪ್ರಕರಣದ ಅಮಿಕಸ್ ಕ್ಯೂರಿ ಮಿಥಾ ಸುಧೀಂದ್ರನ್ ಅವರು ನ್ಯಾಯಯುತ ಕೆಲಸದ ಸ್ಥಳದ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಪ್ರಸ್ತಾವಿತ ಕಾನೂನಿನ ಕರಡನ್ನು ಒಳಗೊಂಡಿರುವ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

‘ಕೇರಳ ಮನರಂಜನಾ ಉದ್ಯಮ (ಸಮಾನತೆ ಮತ್ತು ಸಬಲೀಕರಣ) ಕಾಯ್ದೆ’ ಎಂಬ ಶೀರ್ಷಿಕೆಯ ಕರಡು ಕಾನೂನು ಕೆಲಸದ ಪರಿಸ್ಥಿತಿಗಳು, ನೇಮಕಾತಿ ಪದ್ಧತಿಗಳು ಮತ್ತು ವೇತನದಂತಹ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಕರಡು ಕಾನೂನನ್ನು ಪರಿಶೀಲಿಸಿ ಪ್ರತಿಕ್ರಿಯೆ ನೀಡಲಿದೆ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನ್ಯಾಯಾಲಯ ಕೂಡ ಕರಡು ಪ್ರತಿಯನ್ನು ಪರಿಶೀಲಿಸುವುದಾಗಿ ಹೇಳಿದೆ. ಇದಲ್ಲದೆ, ಮಹಿಳೆಯರು ಬಹು ಹಂತಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಸಿನಿಮಾ ಇಂಡಸ್ಟ್ರಿಯಲ್ಲಿ ಮಹಿಳೆಯರು ಎದುರಿಸುತ್ತಿರುವ ತಾರತಮ್ಯವನ್ನು ಪರಿಹರಿಸಲು ಬಹರೂಪಿ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದೆ.

“ನಾವು ಸ್ವಲ್ಪ ಮಟ್ಟಿಗೆ ತಾರತಮ್ಯವನ್ನು ನಿಭಾಯಿಸಿದ್ದರೂ, ಬಹುರೂಪದ ತಾರತಮ್ಯವನ್ನು ಸಾಮಾನ್ಯವಾಗಿ ಪರಿಹರಿಸಲಾಗುವುದಿಲ್ಲ. ಬಹು ಹಂತಗಳಲ್ಲಿ ಬಹುರೂಪದ ತಾರತಮ್ಯದಲ್ಲಿ ದೊಡ್ಡ ಅಂತರವಿದೆ. ಉದಾ : ದಲಿತ ಮಹಿಳೆಯಂತೆ. ಆಕೆ (ದಲಿತ ಮಹಿಳೆ) ಮಹಿಳೆ ಎಂಬ ಕಾರಣಕ್ಕೆ ಮತ್ತು ಸಾಮಾಜಿಕ ಸ್ಥಾನಮಾನ ಕಾರಣಕ್ಕೆ ಬಹು ಹಂತಗಳಲ್ಲಿ ತಾರತಮ್ಯವನ್ನು ಎದುರಿಸುತ್ತಾರೆ. ಕೇರಳದಲ್ಲಿ ಈ ಸಮಸ್ಯೆ ಅಷ್ಟಾಗಿ ಇಲ್ಲ. ಆದರೆ, ಉತ್ತರದ ರಾಜ್ಯಗಳಲ್ಲಿ ಇದು ತುಂಬಾ ದೊಡ್ಡ ಮಟ್ಟದಲ್ಲಿದೆ. ಮಹಿಳೆಯರು ಎದುರಿಸುತ್ತಿರುವ ಆರ್ಥಿಕ ಅಸಮಾನತೆ ಇತ್ಯಾದಿಗಳನ್ನೂ ನಾವು ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿರುವುದಾಗಿ ಲೈವ್ ಲಾ  ವರದಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 6ಕ್ಕೆ ಮುಂದೂಡಿದೆ. ಈ ಪ್ರಕರಣದ ಮೊದಲ ವಿಚಾರಣೆ ಸೆಪ್ಟೆಂಬರ್ 10, 2024 ರಂದು ನಡೆದಿತ್ತು. ಆಗ ಹೇಮಾ ಸಮಿತಿಯ ವರದಿ ಸಂಬಂಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು.

ಕೇರಳ | ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ; 6 ತಿಂಗಳ ಗಡುವು ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...