Homeಮುಖಪುಟದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ - ಕೇಜ್ರಿವಾಲ್

ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

- Advertisement -
- Advertisement -

ಬಿಜೆಪಿ ಪಕ್ಷವೂ ಎಎಪಿಯನ್ನು “ನಕಲು” ಮಾಡಿ ತನ್ನ ದೆಹಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹಲವಾರು ‘ಉಚಿತ ಘೋಷಣೆ’ಗಳನ್ನು ಘೋಷಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷವು ಭರವಸೆ ನೀಡಿದ “ಉಚಿತ ಕೊಡುಗೆಗಳನ್ನು” ಅನುಮೋದಿಸುವುದಿಲ್ಲ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶುಕ್ರವಾರ ವ್ಯಂಗ್ಯವಾಡಿದ್ದಾರೆ. ದೆಹಲಿ ಚುನಾವಣೆಗೆ ಬಿಜೆಪಿ

ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಬಿಡುಗಡೆ ಮಾಡಿದ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಎಎಪಿ ಉಚಿತ ಕೊಡುಗೆಗಳನ್ನು ಜನರಿಗೆ ನೀಡಿದ್ದಕ್ಕಾಗಿ ಟೀಕಿಸಿದ್ದ ಪ್ರಧಾನಿ ಮೋದಿ ಅವರು ಈಗಲಾದರೂ ಅವರ ನಡೆಯನ್ನು “ತಪ್ಪು” ಎಂದು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕೇಜ್ರಿವಾಲ್ ಉಚಿತ ಕೊಡುಗೆಗಳನ್ನು ನೀಡುತ್ತಾರೆ ಎಂದು ಬಿಜೆಪಿ ಪದೇ ಪದೇ ಹೇಳುತ್ತಿದೆ. ಆದರೆ ಇಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ದೆಹಲಿಯ ಜನರಿಗೆ ಉಚಿತ ಕೊಡುಗೆಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ನಮ್ಮ ಬಗ್ಗೆ ಮಾಡಿದ ಟೀಕೆಗಳು ತಪ್ಪು ಎಂದು ಅವರು ಒಪ್ಪಿಕೊಳ್ಳಬೇಕು ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ.” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಮೋದಿ ಅವರು ಮುಂದೆ ಬಂದು ಬಿಜೆಪಿಯ ಈ ಭರವಸೆಗಳಿಗೆ ಸಮ್ಮತಿಸುವುದಾಗಿ ಹೇಳಿಕೆ ನೀಡಬೇಕು. ಉಚಿತ ಯೋಜನೆಗಳನ್ನು ನೀಡುತ್ತಿರುವ ನಮ್ಮ ನಡೆಯು ಸರಿಯಾಗಿದೆ ಎಂದು ಅವರು ಹೇಳಬೇಕು” ಎಂದು ಕೇಜ್ರಿವಾಲ್ ಹೇಳಿದ್ದಾರೆ. ಬಿಜೆಪಿಯು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಎಎಪಿ ಈಗಾಗಲೇ ನೀಡುತ್ತಿರುವುದೆ ಆಗಿದೆ ಎಂದು ಅವರು ಹೇಳಿದ್ದಾರೆ.

“ನಾವು ನೀಡುತ್ತಿರುವ ಯೋಜನೆಗಳನ್ನು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ. ಹಾಗಾದರೆ ಜನರು ಅವರಿಗೆ ಏಕೆ ಮತ ಹಾಕಬೇಕು? ಕಾನೂನು ಮತ್ತು ಸುವ್ಯವಸ್ಥೆಯ ಸುಧಾರಣೆಗಳ ಕುರಿತು ಅವರು ಪ್ರಣಾಳಿಕೆಯಲ್ಲಿ ಯಾವುದೇ ಭರವಸೆಯನ್ನು ನೀಡಿಲ್ಲ. ಅವರ ಚುನಾವಣಾ ಪ್ರಣಾಳಿಕೆ ಸುಳ್ಳುಗಳ ಕಂತೆ” ಎಂದು ಬಣ್ಣಿಸಿದ್ದಾರೆ. ದೆಹಲಿ ಚುನಾವಣೆಗೆ ಬಿಜೆಪಿ

ಬಿಜೆಪಿ ಹಳೆಯ ಯೋಜನೆಗಳ ಭರವಸೆ ಮಾತ್ರ ನೀಡಿದೆ. ಆದರೆ ಅವುಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಮೊಹಲ್ಲಾ ಚಿಕಿತ್ಸಾಲಯಗಳನ್ನು ಮುಚ್ಚಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಜನರಿಗೆ ಈ ಚಿಕಿತ್ಸಾಲಯಗಳು ಬೇಕಾ ಅಥವಾ ಬೇಡವೇ ಎಂದು ಕೇಳಲು ಎಎಪಿ ದೆಹಲಿಯಾದ್ಯಂತ ಸಂಚರಿಸಲಿದೆ ಎಂದು ಮಾಜಿ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂಓದಿ:  ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...