ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಶುಕ್ರವಾರ ಹೇಳಿದ್ದಾರೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದ್ದು, ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದು ಒಳ್ಳೆಯದಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ದತ್ತಪೀಠ ಬಾಬಾಬುಡನ್ ದರ್ಗಾ
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ವಿಶೇಷ ಅರ್ಜಿ ಕುರಿತು ಚಿಕ್ಕಮಗಳೂರು ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ಮುಖಂಡರುಗಳೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪರಮೇಶ್ವರ ಅವರು ಶುಕ್ರವಾರ ಸಮಾಲೋಚನಾ ಸಭೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ದಾಖಲೆಗಳು ಶಾಶ್ವತವಾಗಿ ಇರುವಂತಹವು. ಈ ವಿಚಾರದಲ್ಲಿ ಕಾನೂನಿನ ಸಲಹೆ ಪಡೆಯಬೇಕಾಗುತ್ತದೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದು ಒಳ್ಳೆಯದಲ್ಲ. ಅಲ್ಲಿ ಶಾಂತಿ ಸಾಮರಸ್ಯ ನೆಲೆಸುವಂತೆ ಮಾಡಬೇಕು. ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಎಂದು ಸರ್ಕಾರ ತೀರ್ಮಾನ ಮಾಡಿದೆ” ಎಂದು ಅವರು ಸಭೆಯಲ್ಲಿ ತಿಳಿಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರದೋಣ ಪರ್ವತದಲ್ಲಿರುವ ದತ್ತಾತ್ರೇಯ ಬಾಬಾ ಬುಡನ್ಗಿರಿ ದರ್ಗಾ ಕರ್ನಾಟಕದಲ್ಲಿ ಭಾವೈಕ್ಯತೆಯ ಸ್ಥಳ. 1975ರವರೆಗೆ ಒಂದು ರೀತಿಯ ಕಾರ್ಯಕ್ರಮಗಳು ನಡೆದರೆ, ತದನಂತರದ ದಿನಗಳಲ್ಲಿ ಅನೇಕ ಗೊಂದಲಗಳನ್ನು ಕಂಡಿದ್ದೇವೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಪ್ರಯತ್ನಗಳನ್ನು ಮಾಡಿದೆ ಎಂದು ಹೇಳಿದ್ದಾರೆ. ದತ್ತಪೀಠ ಬಾಬಾಬುಡನ್ ದರ್ಗಾ
ಹಿಂದು, ಮುಸ್ಲಿಂ ಸಮುದಾಯದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಸಮಿತಿ, ಸಚಿವ ಸಂಪುಟ ಉಪ ಸಮಿತಿಗಳನ್ನು ರಚಿಸಿ ದಾಖಲೆಗಳನ್ನು ಪರಿಶೀಲಿಸಿ ಕೋರ್ಟ್ಗೆ ತಿಳಿಸಲಾಗಿದ್ದು, ತೀರ್ಪುಗಳು ಬಂದಿವೆ. ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂಓದಿ: ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್


