Homeಮುಖಪುಟದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್,...

ದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್, ಎಎಪಿ

- Advertisement -
- Advertisement -

ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆ ಸೇರಿದಂತೆ ಹಲವು ಭರವಸೆಗಳೊಂದಿಗೆ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಶುಕ್ರವಾರ (ಜ.17) ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಈ ಕೆಳಗಿನ ಭರವಸೆಗಳನ್ನು ನೀಡಲಾಗಿದೆ.

  • ಮಹಿಳಾ ಸಮೃದ್ದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ.
  • ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ 500 ರೂಪಾಯಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್, ಹೋಳಿ ಮತ್ತು ದೀಪಾವಳಿ ಸಮಯದಲ್ಲಿ ತಲಾ ಒಂದು ಉಚಿತ ಸಿಲಿಂಡರ್.
  • ದೆಹಲಿಯ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಯ ಆರೋಗ್ಯ ವಿಮೆ ಒದಗಿಸುವ ‘ಆಯುಷ್ಮಾನ್ ಭಾರತ್ ಯೋಜನೆ’ಯ ಅನುಷ್ಠಾನ.
  • ದೆಹಲಿಯ ನಿವಾಸಿಗಳಿಗೆ 5 ಲಕ್ಷ ಹೆಚ್ಚುವರಿ ಆರೋಗ್ಯ ವಿಮೆ.
  • 60-70- ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂಪಾಯಿ ಮಾಸಿಕ ಪಿಂಚಣಿ.
  • 70 ವರ್ಷ ಮೇಲ್ಪಟ್ಟವರಿಗೆ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ.
  • ಜೆಜೆ ಕ್ಲಸ್ಟರ್‌ಗಳಲ್ಲಿ ‘ಅಟಲ್ ಕ್ಯಾಂಟೀನ್‌’ಗಳ ಸ್ಥಾಪನೆ. ಕೇವಲ 5 ರೂಪಾಯಿಗೆ ಪೌಷ್ಠಿಕ ಊಟ.

ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು. ದೇಶ ದಿವಾಳಿಯಾಗುತ್ತದೆ ಎಂದಿದ್ದರು. ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಕೂಡ ಮಹಿಳೆಯರಿಗೆ ಆರ್ಥಿಕ ಸಹಾಯ, ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳದ ಯೋಜನೆಗಳನ್ನು ಘೋಷಿಸಿದಾಗಲೂ ಬಿಜೆಪಿ ನಾಯಕರು ವಿರೋಧಿಸಿದ್ದರು.

ಆದರೆ, ಈಗ ಬಿಜೆಪಿಯೇ ಚುನಾವಣಾ ಪೂರ್ಣ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಎಪಿ ವ್ಯಂಗ್ಯವಾಡಿದೆ. ‘ನಮ್ಮದೇ ಕಾಪಿ’ ಎಂದಿದೆ.

“ಕೇಜ್ರಿವಾಲ್‌ ಯೋಜನೆಗಳು ಸರಿ ಎಂದು ಮೋದಿ ಒಪ್ಪಿಕೊಳ್ಳಲಿ”

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, “ಎಎಪಿ ಘೋಷಣೆ ಮಾಡಿರುವ ಯೋಜನೆಗಳ ಕುರಿತು ನಾವು ಮಾಡಿರುವ ಟೀಕೆ ತಪ್ಪು ಎಂಬುವುದನ್ನು ಪ್ರಧಾನಿ ಮೋದಿಯವರು ಸಾರ್ವಜನಿಕವಾಗಿ ಒಪ್ಪಿಕೊಳ್ಳಬೇಕು. ಉಚಿತ ವಿದ್ಯುತ್, ನೀರು ಮತ್ತು ಬಸ್‌ ಪ್ರಯಾಣದಂತ ಕಲ್ಯಾಣ ಯೋಜನೆಗಳಿಂದ ಜನರಿಗೆ ಸಹಾಯವಾಗಿದೆ ಎಂಬುವುದನ್ನೂ ಒಪ್ಪಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಪ್ರಣಾಳಿಕೆ ಎಎಪಿಯ ಪ್ರಣಾಳಿಕೆಗಿಂತ ಭಿನ್ನವಾಗಿಲ್ಲ. ನಮ್ಮದೇ ಯೋಜನೆಗಳನ್ನು ಅವರು ನಕಲು ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆಯ ಕುರಿತು ಒಂದೇ ವಾಕ್ಯದಲ್ಲಿ ಹೇಳುವುದಾದರೆ, “ಕೇಜ್ರಿವಾಲ್ ಮಾಡಿರುವ ಕೆಲಸಗಳು ಉತ್ತಮವಾಗಿದೆ. ಅದನ್ನು ನಾವು ಮುಂದುವರೆಸುತ್ತೇವೆ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಮ್ಮದೇ ಕಾಪಿ : ವಿನೇಶ್ ಪೋಗಟ್

ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಎಂಬ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ನಮ್ಮ ಪಕ್ಷದ ಯೋಜನೆಗಳಿಂದ ನಕಲು ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತ್ತು ಲೋಕಸಭೆ ಚುನಾವಣೆಗೆ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನೇ ಬಿಜೆಪಿ ನಕಲು ಮಾಡಿದೆ ಎಂದು ಹರಿಯಾಣದ ಕಾಂಗ್ರೆಸ್ ಶಾಸಕಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಪೋಗಟ್ ಹೇಳಿದ್ದಾರೆ.

ಇಂದು ಭರವಸೆಗಳನ್ನು ನೀಡುವ ಮೂಲಕ ದೆಹಲಿಯ ಅಭಿವೃದ್ದಿಗೆ ಬಿಜೆಪಿ ಅಡಿಪಾಯ ಹಾಕಿದೆ. ಭರವಸೆಗಳನ್ನು ಈಡೇರಿಸುವ ಕೆಲಸ ಬಿಜೆಪಿ ಮಾಡಲಿದೆ. ಬಿಜೆಪಿಯ ಸಾಧನೆಯೆಂದರೆ, ಅದು ಹೇಳಿದ್ದನ್ನು ಮಾಡುತ್ತದೆ. ಹೇಳದಿರುವುದನ್ನೂ ಮಾಡುತ್ತದೆ. ‘ಮೋದಿಯವರ ಗ್ಯಾರಂಟಿ ಎಂದರೆ, ಅದು ಈಡೇರುವ ಭರವಸೆಯಿದೆ” ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಜೆ.ಪಿ ನಡ್ಡಾ ಹೇಳಿದ್ದಾರೆ.

“ದೆಹಲಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳು ಬಿಜೆಪಿ ಸರ್ಕಾರ ಬಂದರೆ ಮುಂದುವರೆಸಲಾಗುವುದು. ಈ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲಾಗುವುದು ಮತ್ತು ಜನರಿಗೆ ಅನುಕೂಲವಾಗುವಂತೆ ಮತ್ತಷ್ಟು ಬಲಪಡಿಸಲಾಗುವುದು. ಎಎಪಿ ಆಡಳಿತದ ವಿಶಿಷ್ಟ ಲಕ್ಷಣವಾಗಿರುವ ಭ್ರಷ್ಟಾಚಾರದ ಪ್ರತಿಯೊಂದು ಮಾರ್ಗಗಳನ್ನೂ ನಮ್ಮ ಸರ್ಕಾರ ಬಂದರೆ ಬಂದ್ ಮಾಡುತ್ತೇವೆ. ಈ ವಿಷಯದಲ್ಲಿ ನಾವು ಬದ್ದರಾಗಿದ್ದೇವೆ” ಎಂದು ನಡ್ಡಾ ತಿಳಿಸಿದ್ದಾರೆ.

ದೊಡ್ಡ ಮತ್ತು ಸಣ್ಣ ಮಟ್ಟದ 12 ಸಾವಿರ ಸಭೆಗಳು, 41 ಎಲ್‌ಇಡಿ ವ್ಯಾನ್‌ಗಳ ಮೂಲಕ ಸುಮಾರು 1.8 ಲಕ್ಷ ಜನರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಿಜೆಪಿ ಪ್ರಣಾಳಿಕೆ ತಯಾರಿಸಿದೆ. ಇದು ದೆಹಲಿಗೆ ಸಂಬಂಧಿಸಿದಂತೆ ಬಿಜೆಪಿಯ ಬದ್ದತೆಯ ಮೊದಲ ಹಂತವಾಗಿದೆ. ಇನ್ನೂ ಎರಡು ಕಾರ್ಯಕ್ರಮಗಳನ್ನು ಬಿಜೆಪಿ ಘೋಷಣೆ ಮಾಡಲಿದೆ ಎಂದು ನಡ್ಡಾ ಹೇಳಿದ್ದಾರೆ.

ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...