Homeಮುಖಪುಟದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್,...

ದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್, ಎಎಪಿ

- Advertisement -
- Advertisement -

ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆ ಸೇರಿದಂತೆ ಹಲವು ಭರವಸೆಗಳೊಂದಿಗೆ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಶುಕ್ರವಾರ (ಜ.17) ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಈ ಕೆಳಗಿನ ಭರವಸೆಗಳನ್ನು ನೀಡಲಾಗಿದೆ.

  • ಮಹಿಳಾ ಸಮೃದ್ದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ.
  • ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ 500 ರೂಪಾಯಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್, ಹೋಳಿ ಮತ್ತು ದೀಪಾವಳಿ ಸಮಯದಲ್ಲಿ ತಲಾ ಒಂದು ಉಚಿತ ಸಿಲಿಂಡರ್.
  • ದೆಹಲಿಯ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಯ ಆರೋಗ್ಯ ವಿಮೆ ಒದಗಿಸುವ ‘ಆಯುಷ್ಮಾನ್ ಭಾರತ್ ಯೋಜನೆ’ಯ ಅನುಷ್ಠಾನ.
  • ದೆಹಲಿಯ ನಿವಾಸಿಗಳಿಗೆ 5 ಲಕ್ಷ ಹೆಚ್ಚುವರಿ ಆರೋಗ್ಯ ವಿಮೆ.
  • 60-70- ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂಪಾಯಿ ಮಾಸಿಕ ಪಿಂಚಣಿ.
  • 70 ವರ್ಷ ಮೇಲ್ಪಟ್ಟವರಿಗೆ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ.
  • ಜೆಜೆ ಕ್ಲಸ್ಟರ್‌ಗಳಲ್ಲಿ ‘ಅಟಲ್ ಕ್ಯಾಂಟೀನ್‌’ಗಳ ಸ್ಥಾಪನೆ. ಕೇವಲ 5 ರೂಪಾಯಿಗೆ ಪೌಷ್ಠಿಕ ಊಟ.

ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು. ದೇಶ ದಿವಾಳಿಯಾಗುತ್ತದೆ ಎಂದಿದ್ದರು. ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಕೂಡ ಮಹಿಳೆಯರಿಗೆ ಆರ್ಥಿಕ ಸಹಾಯ, ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳದ ಯೋಜನೆಗಳನ್ನು ಘೋಷಿಸಿದಾಗಲೂ ಬಿಜೆಪಿ ನಾಯಕರು ವಿರೋಧಿಸಿದ್ದರು.

ಆದರೆ, ಈಗ ಬಿಜೆಪಿಯೇ ಚುನಾವಣಾ ಪೂರ್ಣ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಎಪಿ ವ್ಯಂಗ್ಯವಾಡಿದೆ. ‘ನಮ್ಮದೇ ಕಾಪಿ’ ಎಂದಿದೆ.

“ಕೇಜ್ರಿವಾಲ್‌ ಯೋಜನೆಗಳು ಸರಿ ಎಂದು ಮೋದಿ ಒಪ್ಪಿಕೊಳ್ಳಲಿ”

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, “ಎಎಪಿ ಘೋಷಣೆ ಮಾಡಿರುವ ಯೋಜನೆಗಳ ಕುರಿತು ನಾವು ಮಾಡಿರುವ ಟೀಕೆ ತಪ್ಪು ಎಂಬುವುದನ್ನು ಪ್ರಧಾನಿ ಮೋದಿಯವರು ಸಾರ್ವಜನಿಕವಾಗಿ ಒಪ್ಪಿಕೊಳ್ಳಬೇಕು. ಉಚಿತ ವಿದ್ಯುತ್, ನೀರು ಮತ್ತು ಬಸ್‌ ಪ್ರಯಾಣದಂತ ಕಲ್ಯಾಣ ಯೋಜನೆಗಳಿಂದ ಜನರಿಗೆ ಸಹಾಯವಾಗಿದೆ ಎಂಬುವುದನ್ನೂ ಒಪ್ಪಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಪ್ರಣಾಳಿಕೆ ಎಎಪಿಯ ಪ್ರಣಾಳಿಕೆಗಿಂತ ಭಿನ್ನವಾಗಿಲ್ಲ. ನಮ್ಮದೇ ಯೋಜನೆಗಳನ್ನು ಅವರು ನಕಲು ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆಯ ಕುರಿತು ಒಂದೇ ವಾಕ್ಯದಲ್ಲಿ ಹೇಳುವುದಾದರೆ, “ಕೇಜ್ರಿವಾಲ್ ಮಾಡಿರುವ ಕೆಲಸಗಳು ಉತ್ತಮವಾಗಿದೆ. ಅದನ್ನು ನಾವು ಮುಂದುವರೆಸುತ್ತೇವೆ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಮ್ಮದೇ ಕಾಪಿ : ವಿನೇಶ್ ಪೋಗಟ್

ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಎಂಬ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ನಮ್ಮ ಪಕ್ಷದ ಯೋಜನೆಗಳಿಂದ ನಕಲು ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತ್ತು ಲೋಕಸಭೆ ಚುನಾವಣೆಗೆ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನೇ ಬಿಜೆಪಿ ನಕಲು ಮಾಡಿದೆ ಎಂದು ಹರಿಯಾಣದ ಕಾಂಗ್ರೆಸ್ ಶಾಸಕಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಪೋಗಟ್ ಹೇಳಿದ್ದಾರೆ.

ಇಂದು ಭರವಸೆಗಳನ್ನು ನೀಡುವ ಮೂಲಕ ದೆಹಲಿಯ ಅಭಿವೃದ್ದಿಗೆ ಬಿಜೆಪಿ ಅಡಿಪಾಯ ಹಾಕಿದೆ. ಭರವಸೆಗಳನ್ನು ಈಡೇರಿಸುವ ಕೆಲಸ ಬಿಜೆಪಿ ಮಾಡಲಿದೆ. ಬಿಜೆಪಿಯ ಸಾಧನೆಯೆಂದರೆ, ಅದು ಹೇಳಿದ್ದನ್ನು ಮಾಡುತ್ತದೆ. ಹೇಳದಿರುವುದನ್ನೂ ಮಾಡುತ್ತದೆ. ‘ಮೋದಿಯವರ ಗ್ಯಾರಂಟಿ ಎಂದರೆ, ಅದು ಈಡೇರುವ ಭರವಸೆಯಿದೆ” ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಜೆ.ಪಿ ನಡ್ಡಾ ಹೇಳಿದ್ದಾರೆ.

“ದೆಹಲಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳು ಬಿಜೆಪಿ ಸರ್ಕಾರ ಬಂದರೆ ಮುಂದುವರೆಸಲಾಗುವುದು. ಈ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲಾಗುವುದು ಮತ್ತು ಜನರಿಗೆ ಅನುಕೂಲವಾಗುವಂತೆ ಮತ್ತಷ್ಟು ಬಲಪಡಿಸಲಾಗುವುದು. ಎಎಪಿ ಆಡಳಿತದ ವಿಶಿಷ್ಟ ಲಕ್ಷಣವಾಗಿರುವ ಭ್ರಷ್ಟಾಚಾರದ ಪ್ರತಿಯೊಂದು ಮಾರ್ಗಗಳನ್ನೂ ನಮ್ಮ ಸರ್ಕಾರ ಬಂದರೆ ಬಂದ್ ಮಾಡುತ್ತೇವೆ. ಈ ವಿಷಯದಲ್ಲಿ ನಾವು ಬದ್ದರಾಗಿದ್ದೇವೆ” ಎಂದು ನಡ್ಡಾ ತಿಳಿಸಿದ್ದಾರೆ.

ದೊಡ್ಡ ಮತ್ತು ಸಣ್ಣ ಮಟ್ಟದ 12 ಸಾವಿರ ಸಭೆಗಳು, 41 ಎಲ್‌ಇಡಿ ವ್ಯಾನ್‌ಗಳ ಮೂಲಕ ಸುಮಾರು 1.8 ಲಕ್ಷ ಜನರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಿಜೆಪಿ ಪ್ರಣಾಳಿಕೆ ತಯಾರಿಸಿದೆ. ಇದು ದೆಹಲಿಗೆ ಸಂಬಂಧಿಸಿದಂತೆ ಬಿಜೆಪಿಯ ಬದ್ದತೆಯ ಮೊದಲ ಹಂತವಾಗಿದೆ. ಇನ್ನೂ ಎರಡು ಕಾರ್ಯಕ್ರಮಗಳನ್ನು ಬಿಜೆಪಿ ಘೋಷಣೆ ಮಾಡಲಿದೆ ಎಂದು ನಡ್ಡಾ ಹೇಳಿದ್ದಾರೆ.

ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...