Homeಮುಖಪುಟದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್,...

ದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್, ಎಎಪಿ

- Advertisement -
- Advertisement -

ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆ ಸೇರಿದಂತೆ ಹಲವು ಭರವಸೆಗಳೊಂದಿಗೆ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಶುಕ್ರವಾರ (ಜ.17) ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಈ ಕೆಳಗಿನ ಭರವಸೆಗಳನ್ನು ನೀಡಲಾಗಿದೆ.

  • ಮಹಿಳಾ ಸಮೃದ್ದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ.
  • ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ 500 ರೂಪಾಯಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್, ಹೋಳಿ ಮತ್ತು ದೀಪಾವಳಿ ಸಮಯದಲ್ಲಿ ತಲಾ ಒಂದು ಉಚಿತ ಸಿಲಿಂಡರ್.
  • ದೆಹಲಿಯ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಯ ಆರೋಗ್ಯ ವಿಮೆ ಒದಗಿಸುವ ‘ಆಯುಷ್ಮಾನ್ ಭಾರತ್ ಯೋಜನೆ’ಯ ಅನುಷ್ಠಾನ.
  • ದೆಹಲಿಯ ನಿವಾಸಿಗಳಿಗೆ 5 ಲಕ್ಷ ಹೆಚ್ಚುವರಿ ಆರೋಗ್ಯ ವಿಮೆ.
  • 60-70- ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂಪಾಯಿ ಮಾಸಿಕ ಪಿಂಚಣಿ.
  • 70 ವರ್ಷ ಮೇಲ್ಪಟ್ಟವರಿಗೆ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ.
  • ಜೆಜೆ ಕ್ಲಸ್ಟರ್‌ಗಳಲ್ಲಿ ‘ಅಟಲ್ ಕ್ಯಾಂಟೀನ್‌’ಗಳ ಸ್ಥಾಪನೆ. ಕೇವಲ 5 ರೂಪಾಯಿಗೆ ಪೌಷ್ಠಿಕ ಊಟ.

ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು. ದೇಶ ದಿವಾಳಿಯಾಗುತ್ತದೆ ಎಂದಿದ್ದರು. ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಕೂಡ ಮಹಿಳೆಯರಿಗೆ ಆರ್ಥಿಕ ಸಹಾಯ, ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳದ ಯೋಜನೆಗಳನ್ನು ಘೋಷಿಸಿದಾಗಲೂ ಬಿಜೆಪಿ ನಾಯಕರು ವಿರೋಧಿಸಿದ್ದರು.

ಆದರೆ, ಈಗ ಬಿಜೆಪಿಯೇ ಚುನಾವಣಾ ಪೂರ್ಣ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಎಪಿ ವ್ಯಂಗ್ಯವಾಡಿದೆ. ‘ನಮ್ಮದೇ ಕಾಪಿ’ ಎಂದಿದೆ.

“ಕೇಜ್ರಿವಾಲ್‌ ಯೋಜನೆಗಳು ಸರಿ ಎಂದು ಮೋದಿ ಒಪ್ಪಿಕೊಳ್ಳಲಿ”

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, “ಎಎಪಿ ಘೋಷಣೆ ಮಾಡಿರುವ ಯೋಜನೆಗಳ ಕುರಿತು ನಾವು ಮಾಡಿರುವ ಟೀಕೆ ತಪ್ಪು ಎಂಬುವುದನ್ನು ಪ್ರಧಾನಿ ಮೋದಿಯವರು ಸಾರ್ವಜನಿಕವಾಗಿ ಒಪ್ಪಿಕೊಳ್ಳಬೇಕು. ಉಚಿತ ವಿದ್ಯುತ್, ನೀರು ಮತ್ತು ಬಸ್‌ ಪ್ರಯಾಣದಂತ ಕಲ್ಯಾಣ ಯೋಜನೆಗಳಿಂದ ಜನರಿಗೆ ಸಹಾಯವಾಗಿದೆ ಎಂಬುವುದನ್ನೂ ಒಪ್ಪಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಪ್ರಣಾಳಿಕೆ ಎಎಪಿಯ ಪ್ರಣಾಳಿಕೆಗಿಂತ ಭಿನ್ನವಾಗಿಲ್ಲ. ನಮ್ಮದೇ ಯೋಜನೆಗಳನ್ನು ಅವರು ನಕಲು ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆಯ ಕುರಿತು ಒಂದೇ ವಾಕ್ಯದಲ್ಲಿ ಹೇಳುವುದಾದರೆ, “ಕೇಜ್ರಿವಾಲ್ ಮಾಡಿರುವ ಕೆಲಸಗಳು ಉತ್ತಮವಾಗಿದೆ. ಅದನ್ನು ನಾವು ಮುಂದುವರೆಸುತ್ತೇವೆ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಮ್ಮದೇ ಕಾಪಿ : ವಿನೇಶ್ ಪೋಗಟ್

ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಎಂಬ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ನಮ್ಮ ಪಕ್ಷದ ಯೋಜನೆಗಳಿಂದ ನಕಲು ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತ್ತು ಲೋಕಸಭೆ ಚುನಾವಣೆಗೆ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನೇ ಬಿಜೆಪಿ ನಕಲು ಮಾಡಿದೆ ಎಂದು ಹರಿಯಾಣದ ಕಾಂಗ್ರೆಸ್ ಶಾಸಕಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಪೋಗಟ್ ಹೇಳಿದ್ದಾರೆ.

ಇಂದು ಭರವಸೆಗಳನ್ನು ನೀಡುವ ಮೂಲಕ ದೆಹಲಿಯ ಅಭಿವೃದ್ದಿಗೆ ಬಿಜೆಪಿ ಅಡಿಪಾಯ ಹಾಕಿದೆ. ಭರವಸೆಗಳನ್ನು ಈಡೇರಿಸುವ ಕೆಲಸ ಬಿಜೆಪಿ ಮಾಡಲಿದೆ. ಬಿಜೆಪಿಯ ಸಾಧನೆಯೆಂದರೆ, ಅದು ಹೇಳಿದ್ದನ್ನು ಮಾಡುತ್ತದೆ. ಹೇಳದಿರುವುದನ್ನೂ ಮಾಡುತ್ತದೆ. ‘ಮೋದಿಯವರ ಗ್ಯಾರಂಟಿ ಎಂದರೆ, ಅದು ಈಡೇರುವ ಭರವಸೆಯಿದೆ” ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಜೆ.ಪಿ ನಡ್ಡಾ ಹೇಳಿದ್ದಾರೆ.

“ದೆಹಲಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳು ಬಿಜೆಪಿ ಸರ್ಕಾರ ಬಂದರೆ ಮುಂದುವರೆಸಲಾಗುವುದು. ಈ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲಾಗುವುದು ಮತ್ತು ಜನರಿಗೆ ಅನುಕೂಲವಾಗುವಂತೆ ಮತ್ತಷ್ಟು ಬಲಪಡಿಸಲಾಗುವುದು. ಎಎಪಿ ಆಡಳಿತದ ವಿಶಿಷ್ಟ ಲಕ್ಷಣವಾಗಿರುವ ಭ್ರಷ್ಟಾಚಾರದ ಪ್ರತಿಯೊಂದು ಮಾರ್ಗಗಳನ್ನೂ ನಮ್ಮ ಸರ್ಕಾರ ಬಂದರೆ ಬಂದ್ ಮಾಡುತ್ತೇವೆ. ಈ ವಿಷಯದಲ್ಲಿ ನಾವು ಬದ್ದರಾಗಿದ್ದೇವೆ” ಎಂದು ನಡ್ಡಾ ತಿಳಿಸಿದ್ದಾರೆ.

ದೊಡ್ಡ ಮತ್ತು ಸಣ್ಣ ಮಟ್ಟದ 12 ಸಾವಿರ ಸಭೆಗಳು, 41 ಎಲ್‌ಇಡಿ ವ್ಯಾನ್‌ಗಳ ಮೂಲಕ ಸುಮಾರು 1.8 ಲಕ್ಷ ಜನರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಿಜೆಪಿ ಪ್ರಣಾಳಿಕೆ ತಯಾರಿಸಿದೆ. ಇದು ದೆಹಲಿಗೆ ಸಂಬಂಧಿಸಿದಂತೆ ಬಿಜೆಪಿಯ ಬದ್ದತೆಯ ಮೊದಲ ಹಂತವಾಗಿದೆ. ಇನ್ನೂ ಎರಡು ಕಾರ್ಯಕ್ರಮಗಳನ್ನು ಬಿಜೆಪಿ ಘೋಷಣೆ ಮಾಡಲಿದೆ ಎಂದು ನಡ್ಡಾ ಹೇಳಿದ್ದಾರೆ.

ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...