Homeಮುಖಪುಟದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್,...

ದೆಹಲಿ ಚುನಾವಣೆ | ಭರಪೂರ ಭರವಸೆಗಳನ್ನು ನೀಡಿದ ಬಿಜೆಪಿ : ನಮ್ಮದೇ ಕಾಪಿ ಎಂದ ಕಾಂಗ್ರೆಸ್, ಎಎಪಿ

- Advertisement -
- Advertisement -

ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆ ಸೇರಿದಂತೆ ಹಲವು ಭರವಸೆಗಳೊಂದಿಗೆ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಶುಕ್ರವಾರ (ಜ.17) ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಈ ಕೆಳಗಿನ ಭರವಸೆಗಳನ್ನು ನೀಡಲಾಗಿದೆ.

  • ಮಹಿಳಾ ಸಮೃದ್ದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ.
  • ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ 500 ರೂಪಾಯಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್, ಹೋಳಿ ಮತ್ತು ದೀಪಾವಳಿ ಸಮಯದಲ್ಲಿ ತಲಾ ಒಂದು ಉಚಿತ ಸಿಲಿಂಡರ್.
  • ದೆಹಲಿಯ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಯ ಆರೋಗ್ಯ ವಿಮೆ ಒದಗಿಸುವ ‘ಆಯುಷ್ಮಾನ್ ಭಾರತ್ ಯೋಜನೆ’ಯ ಅನುಷ್ಠಾನ.
  • ದೆಹಲಿಯ ನಿವಾಸಿಗಳಿಗೆ 5 ಲಕ್ಷ ಹೆಚ್ಚುವರಿ ಆರೋಗ್ಯ ವಿಮೆ.
  • 60-70- ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂಪಾಯಿ ಮಾಸಿಕ ಪಿಂಚಣಿ.
  • 70 ವರ್ಷ ಮೇಲ್ಪಟ್ಟವರಿಗೆ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ.
  • ಜೆಜೆ ಕ್ಲಸ್ಟರ್‌ಗಳಲ್ಲಿ ‘ಅಟಲ್ ಕ್ಯಾಂಟೀನ್‌’ಗಳ ಸ್ಥಾಪನೆ. ಕೇವಲ 5 ರೂಪಾಯಿಗೆ ಪೌಷ್ಠಿಕ ಊಟ.

ಕರ್ನಾಟಕ, ತೆಲಂಗಾಣ ಸೇರಿದಂತೆ ವಿವಿದೆಡೆ ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು. ದೇಶ ದಿವಾಳಿಯಾಗುತ್ತದೆ ಎಂದಿದ್ದರು. ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಕೂಡ ಮಹಿಳೆಯರಿಗೆ ಆರ್ಥಿಕ ಸಹಾಯ, ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳದ ಯೋಜನೆಗಳನ್ನು ಘೋಷಿಸಿದಾಗಲೂ ಬಿಜೆಪಿ ನಾಯಕರು ವಿರೋಧಿಸಿದ್ದರು.

ಆದರೆ, ಈಗ ಬಿಜೆಪಿಯೇ ಚುನಾವಣಾ ಪೂರ್ಣ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎಎಪಿ ವ್ಯಂಗ್ಯವಾಡಿದೆ. ‘ನಮ್ಮದೇ ಕಾಪಿ’ ಎಂದಿದೆ.

“ಕೇಜ್ರಿವಾಲ್‌ ಯೋಜನೆಗಳು ಸರಿ ಎಂದು ಮೋದಿ ಒಪ್ಪಿಕೊಳ್ಳಲಿ”

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, “ಎಎಪಿ ಘೋಷಣೆ ಮಾಡಿರುವ ಯೋಜನೆಗಳ ಕುರಿತು ನಾವು ಮಾಡಿರುವ ಟೀಕೆ ತಪ್ಪು ಎಂಬುವುದನ್ನು ಪ್ರಧಾನಿ ಮೋದಿಯವರು ಸಾರ್ವಜನಿಕವಾಗಿ ಒಪ್ಪಿಕೊಳ್ಳಬೇಕು. ಉಚಿತ ವಿದ್ಯುತ್, ನೀರು ಮತ್ತು ಬಸ್‌ ಪ್ರಯಾಣದಂತ ಕಲ್ಯಾಣ ಯೋಜನೆಗಳಿಂದ ಜನರಿಗೆ ಸಹಾಯವಾಗಿದೆ ಎಂಬುವುದನ್ನೂ ಒಪ್ಪಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಪ್ರಣಾಳಿಕೆ ಎಎಪಿಯ ಪ್ರಣಾಳಿಕೆಗಿಂತ ಭಿನ್ನವಾಗಿಲ್ಲ. ನಮ್ಮದೇ ಯೋಜನೆಗಳನ್ನು ಅವರು ನಕಲು ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆಯ ಕುರಿತು ಒಂದೇ ವಾಕ್ಯದಲ್ಲಿ ಹೇಳುವುದಾದರೆ, “ಕೇಜ್ರಿವಾಲ್ ಮಾಡಿರುವ ಕೆಲಸಗಳು ಉತ್ತಮವಾಗಿದೆ. ಅದನ್ನು ನಾವು ಮುಂದುವರೆಸುತ್ತೇವೆ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಮ್ಮದೇ ಕಾಪಿ : ವಿನೇಶ್ ಪೋಗಟ್

ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಎಂಬ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ನಮ್ಮ ಪಕ್ಷದ ಯೋಜನೆಗಳಿಂದ ನಕಲು ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತ್ತು ಲೋಕಸಭೆ ಚುನಾವಣೆಗೆ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನೇ ಬಿಜೆಪಿ ನಕಲು ಮಾಡಿದೆ ಎಂದು ಹರಿಯಾಣದ ಕಾಂಗ್ರೆಸ್ ಶಾಸಕಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಪೋಗಟ್ ಹೇಳಿದ್ದಾರೆ.

ಇಂದು ಭರವಸೆಗಳನ್ನು ನೀಡುವ ಮೂಲಕ ದೆಹಲಿಯ ಅಭಿವೃದ್ದಿಗೆ ಬಿಜೆಪಿ ಅಡಿಪಾಯ ಹಾಕಿದೆ. ಭರವಸೆಗಳನ್ನು ಈಡೇರಿಸುವ ಕೆಲಸ ಬಿಜೆಪಿ ಮಾಡಲಿದೆ. ಬಿಜೆಪಿಯ ಸಾಧನೆಯೆಂದರೆ, ಅದು ಹೇಳಿದ್ದನ್ನು ಮಾಡುತ್ತದೆ. ಹೇಳದಿರುವುದನ್ನೂ ಮಾಡುತ್ತದೆ. ‘ಮೋದಿಯವರ ಗ್ಯಾರಂಟಿ ಎಂದರೆ, ಅದು ಈಡೇರುವ ಭರವಸೆಯಿದೆ” ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಜೆ.ಪಿ ನಡ್ಡಾ ಹೇಳಿದ್ದಾರೆ.

“ದೆಹಲಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳು ಬಿಜೆಪಿ ಸರ್ಕಾರ ಬಂದರೆ ಮುಂದುವರೆಸಲಾಗುವುದು. ಈ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲಾಗುವುದು ಮತ್ತು ಜನರಿಗೆ ಅನುಕೂಲವಾಗುವಂತೆ ಮತ್ತಷ್ಟು ಬಲಪಡಿಸಲಾಗುವುದು. ಎಎಪಿ ಆಡಳಿತದ ವಿಶಿಷ್ಟ ಲಕ್ಷಣವಾಗಿರುವ ಭ್ರಷ್ಟಾಚಾರದ ಪ್ರತಿಯೊಂದು ಮಾರ್ಗಗಳನ್ನೂ ನಮ್ಮ ಸರ್ಕಾರ ಬಂದರೆ ಬಂದ್ ಮಾಡುತ್ತೇವೆ. ಈ ವಿಷಯದಲ್ಲಿ ನಾವು ಬದ್ದರಾಗಿದ್ದೇವೆ” ಎಂದು ನಡ್ಡಾ ತಿಳಿಸಿದ್ದಾರೆ.

ದೊಡ್ಡ ಮತ್ತು ಸಣ್ಣ ಮಟ್ಟದ 12 ಸಾವಿರ ಸಭೆಗಳು, 41 ಎಲ್‌ಇಡಿ ವ್ಯಾನ್‌ಗಳ ಮೂಲಕ ಸುಮಾರು 1.8 ಲಕ್ಷ ಜನರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಿಜೆಪಿ ಪ್ರಣಾಳಿಕೆ ತಯಾರಿಸಿದೆ. ಇದು ದೆಹಲಿಗೆ ಸಂಬಂಧಿಸಿದಂತೆ ಬಿಜೆಪಿಯ ಬದ್ದತೆಯ ಮೊದಲ ಹಂತವಾಗಿದೆ. ಇನ್ನೂ ಎರಡು ಕಾರ್ಯಕ್ರಮಗಳನ್ನು ಬಿಜೆಪಿ ಘೋಷಣೆ ಮಾಡಲಿದೆ ಎಂದು ನಡ್ಡಾ ಹೇಳಿದ್ದಾರೆ.

ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...